ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ: ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆಗಾಗಿ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ರೈತರ ಜಾಥಾ

ತಾಲೂಕಿನ  ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದು, ಈ ಹಿನ್ನೆಲೆ 176 ದಿನಗಳಿಂದ ನಡೆಯುತ್ತಿರುವ ಹೋರಾಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. ಈ ದಿಸೆಯಲ್ಲಿ ಕೈಗಾರಿಕೆಗಳಿಗೆ ಭೂಮಿ ನೀಡುತ್ತಿರುವ ರೈತರ ತ್ಯಾಗವನ್ನು ಅರ್ಥಮಾಡಿಕೊಂಡು ಜಮೀನಿನ ಬೆಲೆಗಳನ್ನು ಪುನರ್ ಪರಿಶೀಲನೆ ನಡೆಸಬೇಕಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಒತ್ತಾಯಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿಯ ರೈತರ ಜಮೀನುಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸದ ಕಾರಣ ಕಳೆದ 176 ದಿನಗಳಿಂದ ಅನಿರ್ದಿಷ್ಟಾವದಿ ಧರಣಿ ನಡೆಸುತ್ತಿರುವ ರೈತರು ಇಂದು ಕೊನಘಟ್ಟ ಗ್ರಾಮದಿಂದ ಟ್ರ್ಯಾಕ್ಟರ್ ಹಾಗೂ ಎತ್ತಿನ ಗಾಡಿ ಮೂಲಕ ತಾಲೂಕು ಕಚೇರಿಯವರಿಗೆ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು. ಈ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರ ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ. ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಅದರಂತೆ ಬೆಲೆ ನಿಗದಿ ಮಾಡಬೇಕು ಎಂದರು.

ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ‌ ಖರೀದಿಸಿ ಎಂದರು.

ಈಗ ನಡೆಯುತ್ತಿರುವ 971 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 600 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.

ಪ್ರತಿಭಟನೆಯಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ಗ್ರಾಮಗಳ  ರೈತ ಮುಖಂಡರಾದ ಆನಂದ್, ಕೋಡಿಹಳ್ಳಿ ಕೃಷ್ಣಪ್ಪ, ಕೊನಘಟ್ಟ ನರಸಿಂಹಮೂರ್ತಿ, ರಮೇಶ್,ನಾಗದೇನಹಳ್ಳಿ ಶ್ರೀನಿವಾಸಮೂರ್ತಿ, ಸೊಣ್ಣಪನಹಳ್ಳಿ ಚಿಕ್ಕನರಸಪ್ಪ, ಮೋಪರಹಳ್ಳಿನಾಗರಾಜ್, ಕೋಡಿಹಳ್ಳಿ ಶಿವಕುಮಾರ್, ನಾಗದೇನಹಳ್ಳಿ ಆನಂದ್ ಗೌಡ,  ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago