ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ: 236ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ: ಇಂದು ಗಣೇಶ ಹಬ್ಬ ಹಿನ್ನೆಲೆ: ಧರಣಿ ಸ್ಥಳದಲ್ಲೇ ಗಣಪತಿ ಮೂರ್ತಿ ಪ್ರತಿಷ್ಟಾಪನೆ: ತಮಗೆ ಎದುರಾಗಿರುವ ವಿಘ್ನ ನಿವಾರಣೆ ಮಾಡುವಂತೆ ಗಣಪನ‌ ಮೊರೆಹೋದ ರೈತರು

ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ವಿರೋಧಿಸಿ, ಸುಮಾರು 236 ದಿನಗಳಿಂದ ತಾಲೂಕಿನ ಕಡ್ಡಿಪುಡಿ ಕಾರ್ಖಾನೆ ರಸ್ತೆಯ ಕೊನಘಟ್ಟ ಸಮೀಪದ ಕಾಮನಬಂಡೆ ಬಳಿ ಅನಿರ್ದಿಷ್ಟಾವಧಿ ಧರಣಿಯನ್ನು ರೈತರು ಕೈಗೊಂಡಿದ್ದಾರೆ.

ಇಂದು ಗಣೇಶ ಹಬ್ಬ ಹಿನ್ನೆಲೆ, ಧರಣಿ ಸ್ಥಳದಲ್ಲೇ ಗಣಪತಿ ಮೂರ್ತಿಯನ್ನು ಪ್ರತಿಷ್ಟಾಪಿಸಿ ತಮಗೆ ಎದುರಾಗಿರುವ ವಿಘ್ನ ನಿವಾರಣೆ ಮಾಡುವಂತೆ ವಿಘ್ನ ನಿವಾರಕ ಗಣಪತಿಯ ಮೊರೆ ಹೋಗಿದ್ದಾರೆ.

ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಬೆಲೆ ನಿಗದಿ ಮಾಡಿದರೆ 2.70 ಕೋಟಿ ನೀಡಬೇಕಾಗುತ್ತದೆ. ಇದನ್ನು ಅನುಸರಿಸದೇ ಬಿಡುಗಾಸು ಕೊಟ್ಟು‌ ನಮ್ಮಿಂದ ಭೂಮಿ‌ ಕಬಳಿಸಲು ಮುಂದಾಗಿರುವುದು ಖಂಡನೀಯ. ಸೂಕ್ತ ಬೆಲೆ ನಿಗದಿ ಮಾಡುವವರೆಗೂ ನಮ್ಮ ಧರಣಿ ಮುಂದುವರಿಯುತ್ತದೆ ಎಂದು ಧರಣಿ‌ನಿರತ ರೈತ ರಾಮಾನಂಜಿನಪ್ಪ ಹೇಳಿದ್ದಾರೆ.

ಈಗ ನಡೆಯುತ್ತಿರುವ 981 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 704 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.

ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ‌ ಖರೀದಿಸಿ ಎಂದರು.

ಈ ವೇಳೆ ರಮೇಶ್, ಎಂ.ಆನಂದ್, ಸಿ. ಕೆ.ನರಸಿಂಹಮೂರ್ತಿ, ನಾಗರಾಜ್. ಮೋಪರಹಳ್ಳಿ ಶ್ರೀನಿವಾಸಗೌಡ, ನಾಗದೇನಹಳ್ಳಿ ಪಾಪೆಗೌಡ, ಶಿವಕುಮಾರ್, ಹರೀಶ್, ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ಪುಷ್ಪಲತಾ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…

9 hours ago

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ (BLS) ತರಬೇತಿ ಕಾರ್ಯಕ್ರಮ

ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…

9 hours ago

ನಟ ಪ್ರಥಮ್ ವಿರುದ್ದ ಹಲ್ಲೆ ಆರೋಪ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಪ್ರಥಮ್ ನೀಡಿದ ದೂರಿನಲ್ಲೇನಿದೆ…? ಯಾರ ಮೇಲೆ ದೂರು ನೀಡಿದ್ದಾರೆ….?

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

10 hours ago

ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ ಕೊಡಲಿ, ತಿಳಿದವರು ದಯವಿಟ್ಟು ಸ್ವಲ್ಪ ಮಾಹಿತಿ ನೀಡಿ…..

ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…

11 hours ago

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

23 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

24 hours ago