ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ: 236ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ: ಇಂದು ಗಣೇಶ ಹಬ್ಬ ಹಿನ್ನೆಲೆ: ಧರಣಿ ಸ್ಥಳದಲ್ಲೇ ಗಣಪತಿ ಮೂರ್ತಿ ಪ್ರತಿಷ್ಟಾಪನೆ: ತಮಗೆ ಎದುರಾಗಿರುವ ವಿಘ್ನ ನಿವಾರಣೆ ಮಾಡುವಂತೆ ಗಣಪನ‌ ಮೊರೆಹೋದ ರೈತರು

ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ವಿರೋಧಿಸಿ, ಸುಮಾರು 236 ದಿನಗಳಿಂದ ತಾಲೂಕಿನ ಕಡ್ಡಿಪುಡಿ ಕಾರ್ಖಾನೆ ರಸ್ತೆಯ ಕೊನಘಟ್ಟ ಸಮೀಪದ ಕಾಮನಬಂಡೆ ಬಳಿ ಅನಿರ್ದಿಷ್ಟಾವಧಿ ಧರಣಿಯನ್ನು ರೈತರು ಕೈಗೊಂಡಿದ್ದಾರೆ.

ಇಂದು ಗಣೇಶ ಹಬ್ಬ ಹಿನ್ನೆಲೆ, ಧರಣಿ ಸ್ಥಳದಲ್ಲೇ ಗಣಪತಿ ಮೂರ್ತಿಯನ್ನು ಪ್ರತಿಷ್ಟಾಪಿಸಿ ತಮಗೆ ಎದುರಾಗಿರುವ ವಿಘ್ನ ನಿವಾರಣೆ ಮಾಡುವಂತೆ ವಿಘ್ನ ನಿವಾರಕ ಗಣಪತಿಯ ಮೊರೆ ಹೋಗಿದ್ದಾರೆ.

ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಬೆಲೆ ನಿಗದಿ ಮಾಡಿದರೆ 2.70 ಕೋಟಿ ನೀಡಬೇಕಾಗುತ್ತದೆ. ಇದನ್ನು ಅನುಸರಿಸದೇ ಬಿಡುಗಾಸು ಕೊಟ್ಟು‌ ನಮ್ಮಿಂದ ಭೂಮಿ‌ ಕಬಳಿಸಲು ಮುಂದಾಗಿರುವುದು ಖಂಡನೀಯ. ಸೂಕ್ತ ಬೆಲೆ ನಿಗದಿ ಮಾಡುವವರೆಗೂ ನಮ್ಮ ಧರಣಿ ಮುಂದುವರಿಯುತ್ತದೆ ಎಂದು ಧರಣಿ‌ನಿರತ ರೈತ ರಾಮಾನಂಜಿನಪ್ಪ ಹೇಳಿದ್ದಾರೆ.

ಈಗ ನಡೆಯುತ್ತಿರುವ 981 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 704 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.

ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ‌ ಖರೀದಿಸಿ ಎಂದರು.

ಈ ವೇಳೆ ರಮೇಶ್, ಎಂ.ಆನಂದ್, ಸಿ. ಕೆ.ನರಸಿಂಹಮೂರ್ತಿ, ನಾಗರಾಜ್. ಮೋಪರಹಳ್ಳಿ ಶ್ರೀನಿವಾಸಗೌಡ, ನಾಗದೇನಹಳ್ಳಿ ಪಾಪೆಗೌಡ, ಶಿವಕುಮಾರ್, ಹರೀಶ್, ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ…

2 hours ago

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

7 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

10 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

12 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

1 day ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago