ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ವಿರೋಧಿಸಿ, ಸುಮಾರು 236 ದಿನಗಳಿಂದ ತಾಲೂಕಿನ ಕಡ್ಡಿಪುಡಿ ಕಾರ್ಖಾನೆ ರಸ್ತೆಯ ಕೊನಘಟ್ಟ ಸಮೀಪದ ಕಾಮನಬಂಡೆ ಬಳಿ ಅನಿರ್ದಿಷ್ಟಾವಧಿ ಧರಣಿಯನ್ನು ರೈತರು ಕೈಗೊಂಡಿದ್ದಾರೆ.
ಇಂದು ಗಣೇಶ ಹಬ್ಬ ಹಿನ್ನೆಲೆ, ಧರಣಿ ಸ್ಥಳದಲ್ಲೇ ಗಣಪತಿ ಮೂರ್ತಿಯನ್ನು ಪ್ರತಿಷ್ಟಾಪಿಸಿ ತಮಗೆ ಎದುರಾಗಿರುವ ವಿಘ್ನ ನಿವಾರಣೆ ಮಾಡುವಂತೆ ವಿಘ್ನ ನಿವಾರಕ ಗಣಪತಿಯ ಮೊರೆ ಹೋಗಿದ್ದಾರೆ.
ಈಗ ನಡೆಯುತ್ತಿರುವ 981 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 704 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.
ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ ಖರೀದಿಸಿ ಎಂದರು.
ಈ ವೇಳೆ ರಮೇಶ್, ಎಂ.ಆನಂದ್, ಸಿ. ಕೆ.ನರಸಿಂಹಮೂರ್ತಿ, ನಾಗರಾಜ್. ಮೋಪರಹಳ್ಳಿ ಶ್ರೀನಿವಾಸಗೌಡ, ನಾಗದೇನಹಳ್ಳಿ ಪಾಪೆಗೌಡ, ಶಿವಕುಮಾರ್, ಹರೀಶ್, ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…