ರೈತರ ಜಮೀನಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ: 236ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ: ಇಂದು ಗಣೇಶ ಹಬ್ಬ ಹಿನ್ನೆಲೆ: ಧರಣಿ ಸ್ಥಳದಲ್ಲೇ ಗಣಪತಿ ಮೂರ್ತಿ ಪ್ರತಿಷ್ಟಾಪನೆ: ತಮಗೆ ಎದುರಾಗಿರುವ ವಿಘ್ನ ನಿವಾರಣೆ ಮಾಡುವಂತೆ ಗಣಪನ‌ ಮೊರೆಹೋದ ರೈತರು

ತಾಲೂಕಿನ ಕೊನಘಟ್ಟ, ಕೋಡಿಹಳ್ಳಿ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಗ್ರಾಮಗಳಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ವಿರೋಧಿಸಿ, ಸುಮಾರು 236 ದಿನಗಳಿಂದ ತಾಲೂಕಿನ ಕಡ್ಡಿಪುಡಿ ಕಾರ್ಖಾನೆ ರಸ್ತೆಯ ಕೊನಘಟ್ಟ ಸಮೀಪದ ಕಾಮನಬಂಡೆ ಬಳಿ ಅನಿರ್ದಿಷ್ಟಾವಧಿ ಧರಣಿಯನ್ನು ರೈತರು ಕೈಗೊಂಡಿದ್ದಾರೆ.

ಇಂದು ಗಣೇಶ ಹಬ್ಬ ಹಿನ್ನೆಲೆ, ಧರಣಿ ಸ್ಥಳದಲ್ಲೇ ಗಣಪತಿ ಮೂರ್ತಿಯನ್ನು ಪ್ರತಿಷ್ಟಾಪಿಸಿ ತಮಗೆ ಎದುರಾಗಿರುವ ವಿಘ್ನ ನಿವಾರಣೆ ಮಾಡುವಂತೆ ವಿಘ್ನ ನಿವಾರಕ ಗಣಪತಿಯ ಮೊರೆ ಹೋಗಿದ್ದಾರೆ.

ಜಮೀನು ವಶಪಡಿಸಿಕೊಳ್ಳುವ ಪ್ರದೇಶದಲ್ಲಿ ಭೂಮಿಯ ಬೆಲೆ ಎಕರೆಗೆ 3.5ಯಿಂದ 4 ಕೋಟಿ ರೂ.ವರೆಗೆ ಇದೆ. ಸರ್ಕಾರಿ ಬೆಲೆಯೇ 70 ಲಕ್ಷ ರೂ ವರೆಗೆ ಇದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ವಶ ಪಡಿಸಿಕೊಂಡರೆ ಆ ಭೂಮಿಗೆ ಪ್ರತಿ ಎಕರೆಗೆ 1:4 ಕೊಡಬೇಕು ಎಂಬ ನಿಯಮವಿದೆ. ಅದರಂತೆ ರೈತರ ಭೂಮಿಗೆ ಪ್ರತಿ ಎಕರೆಗೆ ಬೆಲೆ ನಿಗದಿ ಮಾಡಿದರೆ 2.70 ಕೋಟಿ ನೀಡಬೇಕಾಗುತ್ತದೆ. ಇದನ್ನು ಅನುಸರಿಸದೇ ಬಿಡುಗಾಸು ಕೊಟ್ಟು‌ ನಮ್ಮಿಂದ ಭೂಮಿ‌ ಕಬಳಿಸಲು ಮುಂದಾಗಿರುವುದು ಖಂಡನೀಯ. ಸೂಕ್ತ ಬೆಲೆ ನಿಗದಿ ಮಾಡುವವರೆಗೂ ನಮ್ಮ ಧರಣಿ ಮುಂದುವರಿಯುತ್ತದೆ ಎಂದು ಧರಣಿ‌ನಿರತ ರೈತ ರಾಮಾನಂಜಿನಪ್ಪ ಹೇಳಿದ್ದಾರೆ.

ಈಗ ನಡೆಯುತ್ತಿರುವ 981 ಎಕರೆ ಭೂಸ್ವಾಧೀನದಿಂದ ನಾಲ್ಕು ಗ್ರಾಮಗಳ 704 ಕುಟುಂಬಗಳು ಭೂಮಿ ಕಳೆದುಕೊಳ್ಳಲಿವೆ. ಫಲವತ್ತಾದ ಕೃಷಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ವೈಜ್ಞಾನಿಕ ಪರಿಹಾರವಾದರು ದೊರೆತರೆ ಬೇರೆಡೆ ನೆಲೆ ಕಂಡುಕೊಳ್ಳಲು ಸಹಕಾರಿಯಾಗಲಿದೆ. ಇಲ್ಲವಾದರೆ ಈ ಎಲ್ಲಾ ಕುಟುಂಬಗಳು ಕನಿಷ್ಠ ಬೆಲೆಗೆ ಭೂಮಿ ಕಳೆದುಕೊಂಡು ಬೀದಿಪಾಲಾಗಲಿವೆ ಎಂದರು.

ರೈತ ದೇಶದ ಅಭಿವೃದ್ಧಿಗಾಗಿ ತನ್ನ ಕರ್ಮ ಭೂಮಿ ಬಿಟ್ಟುಕೊಡುತ್ತಿದ್ದೇನೆ. ನೂರಾರು ದಿನಗಳ ಹೋರಾಟ ತಮಾಷೆಯಲ್ಲ. ಭೂಮಿ ಬಿಟ್ಟುಕೊಡುವುದು ರೈತನ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ. ರೈತನಿಗೆ ಅನ್ಯಾಯ ಮಾಡಬಾರದು. ವೈಜ್ಞಾನಿಕ ಬೆಲೆ ನಿಗದಿ ಮಾಡಿ ಭೂಮಿ‌ ಖರೀದಿಸಿ ಎಂದರು.

ಈ ವೇಳೆ ರಮೇಶ್, ಎಂ.ಆನಂದ್, ಸಿ. ಕೆ.ನರಸಿಂಹಮೂರ್ತಿ, ನಾಗರಾಜ್. ಮೋಪರಹಳ್ಳಿ ಶ್ರೀನಿವಾಸಗೌಡ, ನಾಗದೇನಹಳ್ಳಿ ಪಾಪೆಗೌಡ, ಶಿವಕುಮಾರ್, ಹರೀಶ್, ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

3 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

4 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

5 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

5 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

6 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

14 hours ago