ದೊಡ್ಡಬಳ್ಳಾಪುರ: ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಮರಳಕುಂಟೆ ಗ್ರಾಮದ ಹಂಚಕಲ್ಲುಗುಟ್ಟೆ ಒಳಗೊಂಡಂತೆ ಇರುವ ರೈತರ ಜಮೀನಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಹೈಬ್ರಿಡ್ ತಳಿಯ ಕಾಡು ಬೆಕ್ಕು ಪತ್ತೆ ಮಾಡಲಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ತಂಡದ ಮಂಜುನಾಥ ಎಸ್.ನಾಯಕ, ಎಸ್.ಸುನೀಲ್ ಕುಮಾರ್, ಸಿ.ರಘುಕುಮಾರ್, ಸಿ.ಕುಲದೀಪ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ತಂಡದ ಸದಸ್ಯರು, ಅಳಿವಿನ ಅಂಚಿನಲ್ಲಿರುವ ವಿವಿಧ ಕಾಡು ಬೆಕ್ಕು ತಳಿಗಳ ಪೈಕಿ ಇದು ಸಹ ಒಂದಾಗಿದೆ. ಕಾಡು ಬೆಕ್ಕುಗಳು ವಿಶಿಷ್ಟ ನಡವಳಿಕೆಯ ಗುಣಲಕ್ಷಣಗಳನ್ನು ಪ್ರದರ್ಶಿಸುತ್ತವೆ. ಇವು ಸಂಪೂರ್ಣ ನಿಶಾಚರಿಗಳಾಗಿದ್ದು, ರಾತ್ರಿ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಇವುಗಳು ಏಕಾಂತವನ್ನು ಬಯಸುತ್ತವೆ ಮತ್ತು ಸಾಮಾನ್ಯವಾಗಿ ಮಾನವರಿಗೆ ಗೊಚರಿಸುವುದು ತೀರಾ ವಿರಳ ಎಂದಿದ್ದಾರೆ.
ಮರಳಕುಂಟೆ ಸುತ್ತಮುತ್ತ ವನ್ಯಜೀವಿಗಳ ವೈವಿಧ್ಯತೆ ಶ್ರೀಮಂತಿಕೆಯಿಂದ ಕೂಡಿದೆ. ನರಿ, ಜಿಂಕೆ ಸೇರಿದಂತೆ ಹಲವಾರು ಜಾತಿಯ ಪಕ್ಷಿಗಳು ಇಲ್ಲಿ ವಾಸ ಇರುವುದನ್ನು ದಾಖಲಿಸಲಾಗಿದೆ. ಕಾಡು ಬೆಕ್ಕುಗಳಿಗೆ ಸೂಕ್ತ ವಾಸ ಸ್ಥಾನವಾಗಿರುವ ಹಂಚಕಲ್ಲುಗುಟ್ಟೆ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆಗೆ ಅನುಮತಿ ಕೊಟ್ಟಿರುವುದು ವಿಪರ್ಯಾಸ. ಈ ಭಾಗದಲ್ಲಿ ಕಾಡು ಬೇಕ್ಕುಗಳು ರಸ್ತೆ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿವೆ ಎಂದು ತಿಳಿಸಿದ್ದಾರೆ.
ಇಲ್ಲಿನ ಕಾಡುಬೆಕ್ಕಿನ ಮೈಮೇಲಿನ ಪಟ್ಟೆಗಳು ವಿಭಿನ್ನವಾಗಿವೆ. ಕಾಲುಗಳ ಒಳಭಾಗ, ಮುಖದ ಕೇಳಭಾಗದಲ್ಲಿ ಬಿಳಿ ಪಟ್ಟೆಗಳನ್ನು ಕಾಣಬಹುದು. ಕಾಡಂಚಿನಲ್ಲಿರುವ ಬೀದಿನಾಯಿಗಳು,ಸಾಕುಬೆಕ್ಕುಗಳು ಇಲ್ಲಿನ ವನ್ಯಜೀವಿಗಳಿಗೆ ಮಾರಕವಾಗಿವೆ. ಇವುಗಳಿಂದ ಹೈಬ್ರಿಡ್ ತಳಿಗಳು ಜನನವಾಗುವುದಲ್ಲದೆ ವನ್ಯಜೀವಿಗಳಿಗೆ ಅನೇಕ ಮಾರಣಾಂತಿಕ ರೋಗಗಳನ್ನು ಹರಡುವ ರೋಗವಾಹಕಗಳಾಗಿವೆ. ಇವುಗಳಿಂದ ತೋಳ,ನರಿ ಮತ್ತು ಕಾಡು ಬೆಕ್ಕುಗಳ ಮೂಲ ತಳಿಗಳಿಗೆ ಧಕ್ಕೆಯಾಗುತ್ತಿದೆ.
-ಮಂಜುನಾಥ ಎಸ್.ನಾಯಕ, ಜೀವವೈವಿಧ್ಯ ಸಂಶೋಧಕರು,ಬೆಂಗಳೂರು.
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…