ರೈತರ ಜಮೀನಿನಲ್ಲಿ ಹೈಬ್ರಿಡ್ ಕಾಡು ಬೆಕ್ಕು ಪ್ರತ್ಯಕ್ಷ

ದೊಡ್ಡಬಳ್ಳಾಪುರ: ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಮರಳಕುಂಟೆ ಗ್ರಾಮದ ಹಂಚಕಲ್ಲುಗುಟ್ಟೆ ಒಳಗೊಂಡಂತೆ ಇರುವ ರೈತರ ಜಮೀನಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಹೈಬ್ರಿಡ್ ತಳಿಯ ಕಾಡು ಬೆಕ್ಕು ಪತ್ತೆ ಮಾಡಲಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ತಂಡದ ಮಂಜುನಾಥ ಎಸ್.ನಾಯಕ, ಎಸ್.ಸುನೀಲ್ ಕುಮಾರ್, ಸಿ.ರಘುಕುಮಾರ್, ಸಿ.ಕುಲದೀಪ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ತಂಡದ ಸದಸ್ಯರು, ಅಳಿವಿನ ಅಂಚಿನಲ್ಲಿರುವ ವಿವಿಧ ಕಾಡು ಬೆಕ್ಕು ತಳಿಗಳ ಪೈಕಿ ಇದು ಸಹ ಒಂದಾಗಿದೆ. ಕಾಡು ಬೆಕ್ಕುಗಳು ವಿಶಿಷ್ಟ ನಡವಳಿಕೆಯ ಗುಣಲಕ್ಷಣಗಳನ್ನು ಪ್ರದರ್ಶಿಸುತ್ತವೆ. ಇವು ಸಂಪೂರ್ಣ ನಿಶಾಚರಿಗಳಾಗಿದ್ದು, ರಾತ್ರಿ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಇವುಗಳು ಏಕಾಂತವನ್ನು ಬಯಸುತ್ತವೆ ಮತ್ತು ಸಾಮಾನ್ಯವಾಗಿ ಮಾನವರಿಗೆ ಗೊಚರಿಸುವುದು ತೀರಾ ವಿರಳ ಎಂದಿದ್ದಾರೆ.

ಮರಳಕುಂಟೆ ಸುತ್ತಮುತ್ತ ವನ್ಯಜೀವಿಗಳ ವೈವಿಧ್ಯತೆ ಶ್ರೀಮಂತಿಕೆಯಿಂದ ಕೂಡಿದೆ. ನರಿ, ಜಿಂಕೆ ಸೇರಿದಂತೆ ಹಲವಾರು ಜಾತಿಯ ಪಕ್ಷಿಗಳು ಇಲ್ಲಿ ವಾಸ ಇರುವುದನ್ನು ದಾಖಲಿಸಲಾಗಿದೆ. ಕಾಡು ಬೆಕ್ಕುಗಳಿಗೆ ಸೂಕ್ತ ವಾಸ ಸ್ಥಾನವಾಗಿರುವ ಹಂಚಕಲ್ಲುಗುಟ್ಟೆ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆಗೆ ಅನುಮತಿ ಕೊಟ್ಟಿರುವುದು ವಿಪರ್ಯಾಸ. ಈ ಭಾಗದಲ್ಲಿ ಕಾಡು ಬೇಕ್ಕುಗಳು ರಸ್ತೆ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿವೆ ಎಂದು ತಿಳಿಸಿದ್ದಾರೆ.

ಇಲ್ಲಿನ ಕಾಡುಬೆಕ್ಕಿನ ಮೈಮೇಲಿನ ಪಟ್ಟೆಗಳು ವಿಭಿನ್ನವಾಗಿವೆ. ಕಾಲುಗಳ ಒಳಭಾಗ, ಮುಖದ ಕೇಳಭಾಗದಲ್ಲಿ ಬಿಳಿ ಪಟ್ಟೆಗಳನ್ನು ಕಾಣಬಹುದು. ಕಾಡಂಚಿನಲ್ಲಿರುವ ಬೀದಿನಾಯಿಗಳು,ಸಾಕುಬೆಕ್ಕುಗಳು ಇಲ್ಲಿನ ವನ್ಯಜೀವಿಗಳಿಗೆ ಮಾರಕವಾಗಿವೆ. ಇವುಗಳಿಂದ ಹೈಬ್ರಿಡ್ ತಳಿಗಳು ಜನನವಾಗುವುದಲ್ಲದೆ ವನ್ಯಜೀವಿಗಳಿಗೆ ಅನೇಕ ಮಾರಣಾಂತಿಕ ರೋಗಗಳನ್ನು ಹರಡುವ ರೋಗವಾಹಕಗಳಾಗಿವೆ. ಇವುಗಳಿಂದ ತೋಳ,ನರಿ ಮತ್ತು ಕಾಡು ಬೆಕ್ಕುಗಳ ಮೂಲ ತಳಿಗಳಿಗೆ ಧಕ್ಕೆಯಾಗುತ್ತಿದೆ.
-ಮಂಜುನಾಥ ಎಸ್.ನಾಯಕ, ಜೀವವೈವಿಧ್ಯ ಸಂಶೋಧಕರು,ಬೆಂಗಳೂರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

8 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

9 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

12 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

13 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago