ರೈತರ ಜಮೀನಿನಲ್ಲಿ ಹೈಬ್ರಿಡ್ ಕಾಡು ಬೆಕ್ಕು ಪ್ರತ್ಯಕ್ಷ

ದೊಡ್ಡಬಳ್ಳಾಪುರ: ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಮರಳಕುಂಟೆ ಗ್ರಾಮದ ಹಂಚಕಲ್ಲುಗುಟ್ಟೆ ಒಳಗೊಂಡಂತೆ ಇರುವ ರೈತರ ಜಮೀನಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಹೈಬ್ರಿಡ್ ತಳಿಯ ಕಾಡು ಬೆಕ್ಕು ಪತ್ತೆ ಮಾಡಲಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ತಂಡದ ಮಂಜುನಾಥ ಎಸ್.ನಾಯಕ, ಎಸ್.ಸುನೀಲ್ ಕುಮಾರ್, ಸಿ.ರಘುಕುಮಾರ್, ಸಿ.ಕುಲದೀಪ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ತಂಡದ ಸದಸ್ಯರು, ಅಳಿವಿನ ಅಂಚಿನಲ್ಲಿರುವ ವಿವಿಧ ಕಾಡು ಬೆಕ್ಕು ತಳಿಗಳ ಪೈಕಿ ಇದು ಸಹ ಒಂದಾಗಿದೆ. ಕಾಡು ಬೆಕ್ಕುಗಳು ವಿಶಿಷ್ಟ ನಡವಳಿಕೆಯ ಗುಣಲಕ್ಷಣಗಳನ್ನು ಪ್ರದರ್ಶಿಸುತ್ತವೆ. ಇವು ಸಂಪೂರ್ಣ ನಿಶಾಚರಿಗಳಾಗಿದ್ದು, ರಾತ್ರಿ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಇವುಗಳು ಏಕಾಂತವನ್ನು ಬಯಸುತ್ತವೆ ಮತ್ತು ಸಾಮಾನ್ಯವಾಗಿ ಮಾನವರಿಗೆ ಗೊಚರಿಸುವುದು ತೀರಾ ವಿರಳ ಎಂದಿದ್ದಾರೆ.

ಮರಳಕುಂಟೆ ಸುತ್ತಮುತ್ತ ವನ್ಯಜೀವಿಗಳ ವೈವಿಧ್ಯತೆ ಶ್ರೀಮಂತಿಕೆಯಿಂದ ಕೂಡಿದೆ. ನರಿ, ಜಿಂಕೆ ಸೇರಿದಂತೆ ಹಲವಾರು ಜಾತಿಯ ಪಕ್ಷಿಗಳು ಇಲ್ಲಿ ವಾಸ ಇರುವುದನ್ನು ದಾಖಲಿಸಲಾಗಿದೆ. ಕಾಡು ಬೆಕ್ಕುಗಳಿಗೆ ಸೂಕ್ತ ವಾಸ ಸ್ಥಾನವಾಗಿರುವ ಹಂಚಕಲ್ಲುಗುಟ್ಟೆ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆಗೆ ಅನುಮತಿ ಕೊಟ್ಟಿರುವುದು ವಿಪರ್ಯಾಸ. ಈ ಭಾಗದಲ್ಲಿ ಕಾಡು ಬೇಕ್ಕುಗಳು ರಸ್ತೆ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿವೆ ಎಂದು ತಿಳಿಸಿದ್ದಾರೆ.

ಇಲ್ಲಿನ ಕಾಡುಬೆಕ್ಕಿನ ಮೈಮೇಲಿನ ಪಟ್ಟೆಗಳು ವಿಭಿನ್ನವಾಗಿವೆ. ಕಾಲುಗಳ ಒಳಭಾಗ, ಮುಖದ ಕೇಳಭಾಗದಲ್ಲಿ ಬಿಳಿ ಪಟ್ಟೆಗಳನ್ನು ಕಾಣಬಹುದು. ಕಾಡಂಚಿನಲ್ಲಿರುವ ಬೀದಿನಾಯಿಗಳು,ಸಾಕುಬೆಕ್ಕುಗಳು ಇಲ್ಲಿನ ವನ್ಯಜೀವಿಗಳಿಗೆ ಮಾರಕವಾಗಿವೆ. ಇವುಗಳಿಂದ ಹೈಬ್ರಿಡ್ ತಳಿಗಳು ಜನನವಾಗುವುದಲ್ಲದೆ ವನ್ಯಜೀವಿಗಳಿಗೆ ಅನೇಕ ಮಾರಣಾಂತಿಕ ರೋಗಗಳನ್ನು ಹರಡುವ ರೋಗವಾಹಕಗಳಾಗಿವೆ. ಇವುಗಳಿಂದ ತೋಳ,ನರಿ ಮತ್ತು ಕಾಡು ಬೆಕ್ಕುಗಳ ಮೂಲ ತಳಿಗಳಿಗೆ ಧಕ್ಕೆಯಾಗುತ್ತಿದೆ.
-ಮಂಜುನಾಥ ಎಸ್.ನಾಯಕ, ಜೀವವೈವಿಧ್ಯ ಸಂಶೋಧಕರು,ಬೆಂಗಳೂರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

10 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

12 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago