ರೈತರ ಜಮೀನಿನಲ್ಲಿ ಹೈಬ್ರಿಡ್ ಕಾಡು ಬೆಕ್ಕು ಪ್ರತ್ಯಕ್ಷ

ದೊಡ್ಡಬಳ್ಳಾಪುರ: ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಮರಳಕುಂಟೆ ಗ್ರಾಮದ ಹಂಚಕಲ್ಲುಗುಟ್ಟೆ ಒಳಗೊಂಡಂತೆ ಇರುವ ರೈತರ ಜಮೀನಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಹೈಬ್ರಿಡ್ ತಳಿಯ ಕಾಡು ಬೆಕ್ಕು ಪತ್ತೆ ಮಾಡಲಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ತಂಡದ ಮಂಜುನಾಥ ಎಸ್.ನಾಯಕ, ಎಸ್.ಸುನೀಲ್ ಕುಮಾರ್, ಸಿ.ರಘುಕುಮಾರ್, ಸಿ.ಕುಲದೀಪ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ತಂಡದ ಸದಸ್ಯರು, ಅಳಿವಿನ ಅಂಚಿನಲ್ಲಿರುವ ವಿವಿಧ ಕಾಡು ಬೆಕ್ಕು ತಳಿಗಳ ಪೈಕಿ ಇದು ಸಹ ಒಂದಾಗಿದೆ. ಕಾಡು ಬೆಕ್ಕುಗಳು ವಿಶಿಷ್ಟ ನಡವಳಿಕೆಯ ಗುಣಲಕ್ಷಣಗಳನ್ನು ಪ್ರದರ್ಶಿಸುತ್ತವೆ. ಇವು ಸಂಪೂರ್ಣ ನಿಶಾಚರಿಗಳಾಗಿದ್ದು, ರಾತ್ರಿ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಇವುಗಳು ಏಕಾಂತವನ್ನು ಬಯಸುತ್ತವೆ ಮತ್ತು ಸಾಮಾನ್ಯವಾಗಿ ಮಾನವರಿಗೆ ಗೊಚರಿಸುವುದು ತೀರಾ ವಿರಳ ಎಂದಿದ್ದಾರೆ.

ಮರಳಕುಂಟೆ ಸುತ್ತಮುತ್ತ ವನ್ಯಜೀವಿಗಳ ವೈವಿಧ್ಯತೆ ಶ್ರೀಮಂತಿಕೆಯಿಂದ ಕೂಡಿದೆ. ನರಿ, ಜಿಂಕೆ ಸೇರಿದಂತೆ ಹಲವಾರು ಜಾತಿಯ ಪಕ್ಷಿಗಳು ಇಲ್ಲಿ ವಾಸ ಇರುವುದನ್ನು ದಾಖಲಿಸಲಾಗಿದೆ. ಕಾಡು ಬೆಕ್ಕುಗಳಿಗೆ ಸೂಕ್ತ ವಾಸ ಸ್ಥಾನವಾಗಿರುವ ಹಂಚಕಲ್ಲುಗುಟ್ಟೆ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆಗೆ ಅನುಮತಿ ಕೊಟ್ಟಿರುವುದು ವಿಪರ್ಯಾಸ. ಈ ಭಾಗದಲ್ಲಿ ಕಾಡು ಬೇಕ್ಕುಗಳು ರಸ್ತೆ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿವೆ ಎಂದು ತಿಳಿಸಿದ್ದಾರೆ.

ಇಲ್ಲಿನ ಕಾಡುಬೆಕ್ಕಿನ ಮೈಮೇಲಿನ ಪಟ್ಟೆಗಳು ವಿಭಿನ್ನವಾಗಿವೆ. ಕಾಲುಗಳ ಒಳಭಾಗ, ಮುಖದ ಕೇಳಭಾಗದಲ್ಲಿ ಬಿಳಿ ಪಟ್ಟೆಗಳನ್ನು ಕಾಣಬಹುದು. ಕಾಡಂಚಿನಲ್ಲಿರುವ ಬೀದಿನಾಯಿಗಳು,ಸಾಕುಬೆಕ್ಕುಗಳು ಇಲ್ಲಿನ ವನ್ಯಜೀವಿಗಳಿಗೆ ಮಾರಕವಾಗಿವೆ. ಇವುಗಳಿಂದ ಹೈಬ್ರಿಡ್ ತಳಿಗಳು ಜನನವಾಗುವುದಲ್ಲದೆ ವನ್ಯಜೀವಿಗಳಿಗೆ ಅನೇಕ ಮಾರಣಾಂತಿಕ ರೋಗಗಳನ್ನು ಹರಡುವ ರೋಗವಾಹಕಗಳಾಗಿವೆ. ಇವುಗಳಿಂದ ತೋಳ,ನರಿ ಮತ್ತು ಕಾಡು ಬೆಕ್ಕುಗಳ ಮೂಲ ತಳಿಗಳಿಗೆ ಧಕ್ಕೆಯಾಗುತ್ತಿದೆ.
-ಮಂಜುನಾಥ ಎಸ್.ನಾಯಕ, ಜೀವವೈವಿಧ್ಯ ಸಂಶೋಧಕರು,ಬೆಂಗಳೂರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

3 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago