ದೊಡ್ಡಬಳ್ಳಾಪುರ: ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಮರಳಕುಂಟೆ ಗ್ರಾಮದ ಹಂಚಕಲ್ಲುಗುಟ್ಟೆ ಒಳಗೊಂಡಂತೆ ಇರುವ ರೈತರ ಜಮೀನಿನಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಹೈಬ್ರಿಡ್ ತಳಿಯ ಕಾಡು ಬೆಕ್ಕು ಪತ್ತೆ ಮಾಡಲಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ತಂಡದ ಮಂಜುನಾಥ ಎಸ್.ನಾಯಕ, ಎಸ್.ಸುನೀಲ್ ಕುಮಾರ್, ಸಿ.ರಘುಕುಮಾರ್, ಸಿ.ಕುಲದೀಪ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ತಂಡದ ಸದಸ್ಯರು, ಅಳಿವಿನ ಅಂಚಿನಲ್ಲಿರುವ ವಿವಿಧ ಕಾಡು ಬೆಕ್ಕು ತಳಿಗಳ ಪೈಕಿ ಇದು ಸಹ ಒಂದಾಗಿದೆ. ಕಾಡು ಬೆಕ್ಕುಗಳು ವಿಶಿಷ್ಟ ನಡವಳಿಕೆಯ ಗುಣಲಕ್ಷಣಗಳನ್ನು ಪ್ರದರ್ಶಿಸುತ್ತವೆ. ಇವು ಸಂಪೂರ್ಣ ನಿಶಾಚರಿಗಳಾಗಿದ್ದು, ರಾತ್ರಿ ಸಮಯದಲ್ಲಿ ಸಕ್ರಿಯವಾಗಿರುತ್ತವೆ. ಇವುಗಳು ಏಕಾಂತವನ್ನು ಬಯಸುತ್ತವೆ ಮತ್ತು ಸಾಮಾನ್ಯವಾಗಿ ಮಾನವರಿಗೆ ಗೊಚರಿಸುವುದು ತೀರಾ ವಿರಳ ಎಂದಿದ್ದಾರೆ.
ಮರಳಕುಂಟೆ ಸುತ್ತಮುತ್ತ ವನ್ಯಜೀವಿಗಳ ವೈವಿಧ್ಯತೆ ಶ್ರೀಮಂತಿಕೆಯಿಂದ ಕೂಡಿದೆ. ನರಿ, ಜಿಂಕೆ ಸೇರಿದಂತೆ ಹಲವಾರು ಜಾತಿಯ ಪಕ್ಷಿಗಳು ಇಲ್ಲಿ ವಾಸ ಇರುವುದನ್ನು ದಾಖಲಿಸಲಾಗಿದೆ. ಕಾಡು ಬೆಕ್ಕುಗಳಿಗೆ ಸೂಕ್ತ ವಾಸ ಸ್ಥಾನವಾಗಿರುವ ಹಂಚಕಲ್ಲುಗುಟ್ಟೆ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆಗೆ ಅನುಮತಿ ಕೊಟ್ಟಿರುವುದು ವಿಪರ್ಯಾಸ. ಈ ಭಾಗದಲ್ಲಿ ಕಾಡು ಬೇಕ್ಕುಗಳು ರಸ್ತೆ ಅಪಘಾತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುತ್ತಿವೆ ಎಂದು ತಿಳಿಸಿದ್ದಾರೆ.
ಇಲ್ಲಿನ ಕಾಡುಬೆಕ್ಕಿನ ಮೈಮೇಲಿನ ಪಟ್ಟೆಗಳು ವಿಭಿನ್ನವಾಗಿವೆ. ಕಾಲುಗಳ ಒಳಭಾಗ, ಮುಖದ ಕೇಳಭಾಗದಲ್ಲಿ ಬಿಳಿ ಪಟ್ಟೆಗಳನ್ನು ಕಾಣಬಹುದು. ಕಾಡಂಚಿನಲ್ಲಿರುವ ಬೀದಿನಾಯಿಗಳು,ಸಾಕುಬೆಕ್ಕುಗಳು ಇಲ್ಲಿನ ವನ್ಯಜೀವಿಗಳಿಗೆ ಮಾರಕವಾಗಿವೆ. ಇವುಗಳಿಂದ ಹೈಬ್ರಿಡ್ ತಳಿಗಳು ಜನನವಾಗುವುದಲ್ಲದೆ ವನ್ಯಜೀವಿಗಳಿಗೆ ಅನೇಕ ಮಾರಣಾಂತಿಕ ರೋಗಗಳನ್ನು ಹರಡುವ ರೋಗವಾಹಕಗಳಾಗಿವೆ. ಇವುಗಳಿಂದ ತೋಳ,ನರಿ ಮತ್ತು ಕಾಡು ಬೆಕ್ಕುಗಳ ಮೂಲ ತಳಿಗಳಿಗೆ ಧಕ್ಕೆಯಾಗುತ್ತಿದೆ.
-ಮಂಜುನಾಥ ಎಸ್.ನಾಯಕ, ಜೀವವೈವಿಧ್ಯ ಸಂಶೋಧಕರು,ಬೆಂಗಳೂರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…