Categories: ಕೋಲಾರ

ರೈತರ ನೆಮ್ಮದಿಗೆ ಟಿಎಪಿಸಿಎಂಎಸ್ ಕಾಂಗ್ರೆಸ್ ವಶವಾಗಬೇಕು: ಕೊತ್ತೂರು ಮಂಜುನಾಥ್

ಕೋಲಾರ: ರೈತರು ಈ ದೇಶದ ಆಸ್ತಿ ಅವರ ಅಭಿವೃದ್ಧಿಗಾಗಿ ನೆಮ್ಮದಿಯಿಂದ ಬದುಕಲು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆ ಎದುರಿಸಲು ತಯಾರಿ ನಡೆಸಿಕೊಳ್ಳಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೋಲಾರ ತಾಲ್ಲೂಕು ವ್ಯವಸಾಯ ಸೇವಾ ಸಹಕಾರ ಸಂಘದ (ಟಿಎಪಿಸಿಎಂಎಸ್) ಚುನಾವಣೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು ಕೋಲಾರ ತಾಲೂಕು ಸೊಸೈಟಿಯು ಮೂರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ಸಹಕಾರಿ ಕ್ಷೇತ್ರವನ್ನು ಕಾಂಗ್ರೆಸ್ ಕೈ ವಶ ಮಾಡಿಕೊಳ್ಳೋಣ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ನಾಮಪತ್ರ ಸಲ್ಲಿಕೆ ಪರಿಶೀಲಿಸಲಾಗಿದೆ‌‌. ನಾಮಪತ್ರ ವಾಪಸ್ ಗೆ ಇಂದು ಕೊನೆಯ ದಿನ ಮುಗಿದಿದೆ. ಸಿ.ಬೈರೇಗೌಡರು ಹಾಗೂ ಕೆ.ಶ್ರೀನಿವಾಸಗೌಡ ಅವರಂಥ ಗಟ್ಟಿ ನಾಯಕರು ಸಹಕಾರ ಸಂಘದಲ್ಲಿ ಇದ್ದ ಕಾರಣ 40 ವರ್ಷದಿಂದ ಚುನಾವಣೆ ನಡೆದಿರಲಿಲ್ಲ ಈಗ ನಡೆಯತ್ತಾ ಇದ್ದು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಜೊತೆಯಾಗಿವೆ. ಇನ್ನೂ ಮುಂದೆ ಎಲ್ಲಾ ಚುನಾವಣೆಯಲ್ಲಿ ಒಂದಾಗಿಯೇ ಹೆಜ್ಜೆ ಇಟ್ಟಿವೆ‌. ಹೀಗಾಗಿ, ನಾವು ಒಗ್ಗಟ್ಟಿನಲ್ಲಿ ಚುನಾವಣೆ ನಡೆಸಬೇಕು ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲರೂ ಗೆಲ್ಲಬೇಕು ನಮ್ಮ ಕಾರ್ಯಕರ್ತರನ್ನು ಬಲಿಕೊಟ್ಟು ಸುಮ್ಮನಿರಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೆ ಕೈಚೆಲ್ಲಬಾರದು  ಎಂದರು.

ರೈತರ ನೆಮ್ಮದಿ ಸಂತೋಷವನ್ನು ಕೊಡಿಸುವ ಸಂಸ್ಥೆಯಾಗಿ ಸೊಸೈಟಿ ಕೆಲಸ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಾ ಇದೆ. ಅಭ್ಯರ್ಥಿಗಳು ಸಿಂಡಿಕೇಟ್ ಬಿಟ್ಟು ಹೋಗುವುದಿಲ್ಲ ಎಂದು ಪ್ರತಿ ಅಭ್ಯರ್ಥಿಗಳ ಕೈಯಿಂದ ಪ್ರಮಾಣ ಮಾಡಿಸಿಕೊಂಡು ಪ್ರಚಾರ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾಗನಾಳ‌ ಸೋಮಣ್ಣ ಮಾತನಾಡಿ, ಸುಮಾರು 300 ಹಳ್ಳಿಗಳಿಂದ 1942 ಮತಗಳಿದ್ದು, ಎಲ್ಲರೂ ಸೇರಿ ಗೆಲ್ಲಿಸಲು ಕೆಲಸ ಮಾಡಬೇಕು. ಪ್ರತಿ ಮತಕ್ಕೂ ಮೌಲ್ಯವಿದೆ. ಮೊದಲ ಬಾರಿ ಚುನಾವಣೆ ನಡೆಯುತ್ತಿದೆ ಸೊಸೈಟಿಯಿಂದ ರೈತರ ಅಭಿವೃದ್ಧಿಗೆ ಕಾರಣವಾಗಿದ್ದೇವೆ. ಮಾದರಿ ಸೊಸೈಟಿ ಮಾಡಿದ್ದನ್ನು ಮತದಾರರಿಗೆ ಮನವರಿಕೆ ಮಾಡುವ ಮೂಲಕ ಮತ ಕೇಳೋಣ ಎಂದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ ಮಾತನಾಡಿ, 1980ರಲ್ಲಿ ಚುನಾವಣೆ ನಡೆದಿತ್ತು‌. ಆನಂತರ ಚುನಾವಣೆ ನಡೆದಿರಲಿಲ್ಲ. ಈಗ ಚುನಾವಣೆ ನಡೆಯುತ್ತಿದೆ. ಬೈರೇಗೌಡ ಕಾಲದಲ್ಲಿ ನಾವೆಲ್ಲಾ ಕಾಂಗ್ರೆಸ್ ವಿರೋಧಿಗಳಾಗಿದ್ದೆವು. ಕೊತ್ತೂರು ಮಂಜುನಾಥ್ ಶಾಸಕರಾದ ಮೇಲೆ ಅಭಿವೃದ್ಧಿ ಕಾಣುತ್ತಿದೆ. ಎಲ್ಲರೂ ಒಟ್ಟಿಗೆ ಸೇರಿ ಚುನಾವಣೆ ನಡೆಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಮಾತನಾಡಿ ಗ್ರಾಪಂ ಚುನಾವಣೆಯಲ್ಲಿ ಹೇಗೆ ಕೆಲಸ ಮಾಡಿದ್ದೇವೆ ಅದೇ ರೀತಿಯಲ್ಲಿ ತಾವುಗಳು ಜವಾಬ್ದಾರಿ ತೆಗೆದುಕೊಂಡು, ನಾವೇ ಅಭ್ಯರ್ಥಿ ಎಂದುಕೊಂಡು ಪ್ರಚಾರ ನಡೆಸಬೇಕು. ಸಹಕಾರ ರಂಗದಲ್ಲಿ ಪರಸ್ಪರ ಸಹಕಾರ ‌ಅಗತ್ಯ ಎಂಬುದನ್ನು ಹಳ್ಳಿಗಳಲ್ಲಿ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ನಾಗರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಅರಹಳ್ಳಿ ಗೋಪಾಲಕೃಷ್ಣ, ವಕ್ಕಲೇರಿ ರಾಜಪ್ಪ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಮುಂತಾದವರು ಇದ್ದರು

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

2 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

24 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago