Categories: ಕೋಲಾರ

ರೈತರ ನೆಮ್ಮದಿಗೆ ಟಿಎಪಿಸಿಎಂಎಸ್ ಕಾಂಗ್ರೆಸ್ ವಶವಾಗಬೇಕು: ಕೊತ್ತೂರು ಮಂಜುನಾಥ್

ಕೋಲಾರ: ರೈತರು ಈ ದೇಶದ ಆಸ್ತಿ ಅವರ ಅಭಿವೃದ್ಧಿಗಾಗಿ ನೆಮ್ಮದಿಯಿಂದ ಬದುಕಲು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆ ಎದುರಿಸಲು ತಯಾರಿ ನಡೆಸಿಕೊಳ್ಳಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೋಲಾರ ತಾಲ್ಲೂಕು ವ್ಯವಸಾಯ ಸೇವಾ ಸಹಕಾರ ಸಂಘದ (ಟಿಎಪಿಸಿಎಂಎಸ್) ಚುನಾವಣೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು ಕೋಲಾರ ತಾಲೂಕು ಸೊಸೈಟಿಯು ಮೂರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ಸಹಕಾರಿ ಕ್ಷೇತ್ರವನ್ನು ಕಾಂಗ್ರೆಸ್ ಕೈ ವಶ ಮಾಡಿಕೊಳ್ಳೋಣ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ನಾಮಪತ್ರ ಸಲ್ಲಿಕೆ ಪರಿಶೀಲಿಸಲಾಗಿದೆ‌‌. ನಾಮಪತ್ರ ವಾಪಸ್ ಗೆ ಇಂದು ಕೊನೆಯ ದಿನ ಮುಗಿದಿದೆ. ಸಿ.ಬೈರೇಗೌಡರು ಹಾಗೂ ಕೆ.ಶ್ರೀನಿವಾಸಗೌಡ ಅವರಂಥ ಗಟ್ಟಿ ನಾಯಕರು ಸಹಕಾರ ಸಂಘದಲ್ಲಿ ಇದ್ದ ಕಾರಣ 40 ವರ್ಷದಿಂದ ಚುನಾವಣೆ ನಡೆದಿರಲಿಲ್ಲ ಈಗ ನಡೆಯತ್ತಾ ಇದ್ದು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಜೊತೆಯಾಗಿವೆ. ಇನ್ನೂ ಮುಂದೆ ಎಲ್ಲಾ ಚುನಾವಣೆಯಲ್ಲಿ ಒಂದಾಗಿಯೇ ಹೆಜ್ಜೆ ಇಟ್ಟಿವೆ‌. ಹೀಗಾಗಿ, ನಾವು ಒಗ್ಗಟ್ಟಿನಲ್ಲಿ ಚುನಾವಣೆ ನಡೆಸಬೇಕು ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲರೂ ಗೆಲ್ಲಬೇಕು ನಮ್ಮ ಕಾರ್ಯಕರ್ತರನ್ನು ಬಲಿಕೊಟ್ಟು ಸುಮ್ಮನಿರಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೆ ಕೈಚೆಲ್ಲಬಾರದು  ಎಂದರು.

ರೈತರ ನೆಮ್ಮದಿ ಸಂತೋಷವನ್ನು ಕೊಡಿಸುವ ಸಂಸ್ಥೆಯಾಗಿ ಸೊಸೈಟಿ ಕೆಲಸ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಾ ಇದೆ. ಅಭ್ಯರ್ಥಿಗಳು ಸಿಂಡಿಕೇಟ್ ಬಿಟ್ಟು ಹೋಗುವುದಿಲ್ಲ ಎಂದು ಪ್ರತಿ ಅಭ್ಯರ್ಥಿಗಳ ಕೈಯಿಂದ ಪ್ರಮಾಣ ಮಾಡಿಸಿಕೊಂಡು ಪ್ರಚಾರ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾಗನಾಳ‌ ಸೋಮಣ್ಣ ಮಾತನಾಡಿ, ಸುಮಾರು 300 ಹಳ್ಳಿಗಳಿಂದ 1942 ಮತಗಳಿದ್ದು, ಎಲ್ಲರೂ ಸೇರಿ ಗೆಲ್ಲಿಸಲು ಕೆಲಸ ಮಾಡಬೇಕು. ಪ್ರತಿ ಮತಕ್ಕೂ ಮೌಲ್ಯವಿದೆ. ಮೊದಲ ಬಾರಿ ಚುನಾವಣೆ ನಡೆಯುತ್ತಿದೆ ಸೊಸೈಟಿಯಿಂದ ರೈತರ ಅಭಿವೃದ್ಧಿಗೆ ಕಾರಣವಾಗಿದ್ದೇವೆ. ಮಾದರಿ ಸೊಸೈಟಿ ಮಾಡಿದ್ದನ್ನು ಮತದಾರರಿಗೆ ಮನವರಿಕೆ ಮಾಡುವ ಮೂಲಕ ಮತ ಕೇಳೋಣ ಎಂದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ ಮಾತನಾಡಿ, 1980ರಲ್ಲಿ ಚುನಾವಣೆ ನಡೆದಿತ್ತು‌. ಆನಂತರ ಚುನಾವಣೆ ನಡೆದಿರಲಿಲ್ಲ. ಈಗ ಚುನಾವಣೆ ನಡೆಯುತ್ತಿದೆ. ಬೈರೇಗೌಡ ಕಾಲದಲ್ಲಿ ನಾವೆಲ್ಲಾ ಕಾಂಗ್ರೆಸ್ ವಿರೋಧಿಗಳಾಗಿದ್ದೆವು. ಕೊತ್ತೂರು ಮಂಜುನಾಥ್ ಶಾಸಕರಾದ ಮೇಲೆ ಅಭಿವೃದ್ಧಿ ಕಾಣುತ್ತಿದೆ. ಎಲ್ಲರೂ ಒಟ್ಟಿಗೆ ಸೇರಿ ಚುನಾವಣೆ ನಡೆಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಮಾತನಾಡಿ ಗ್ರಾಪಂ ಚುನಾವಣೆಯಲ್ಲಿ ಹೇಗೆ ಕೆಲಸ ಮಾಡಿದ್ದೇವೆ ಅದೇ ರೀತಿಯಲ್ಲಿ ತಾವುಗಳು ಜವಾಬ್ದಾರಿ ತೆಗೆದುಕೊಂಡು, ನಾವೇ ಅಭ್ಯರ್ಥಿ ಎಂದುಕೊಂಡು ಪ್ರಚಾರ ನಡೆಸಬೇಕು. ಸಹಕಾರ ರಂಗದಲ್ಲಿ ಪರಸ್ಪರ ಸಹಕಾರ ‌ಅಗತ್ಯ ಎಂಬುದನ್ನು ಹಳ್ಳಿಗಳಲ್ಲಿ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ನಾಗರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಅರಹಳ್ಳಿ ಗೋಪಾಲಕೃಷ್ಣ, ವಕ್ಕಲೇರಿ ರಾಜಪ್ಪ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಮುಂತಾದವರು ಇದ್ದರು

Ramesh Babu

Journalist

Recent Posts

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

1 hour ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

2 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

16 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

19 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

21 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

2 days ago