Categories: ಕೋಲಾರ

ರೈತರ ನೆಮ್ಮದಿಗೆ ಟಿಎಪಿಸಿಎಂಎಸ್ ಕಾಂಗ್ರೆಸ್ ವಶವಾಗಬೇಕು: ಕೊತ್ತೂರು ಮಂಜುನಾಥ್

ಕೋಲಾರ: ರೈತರು ಈ ದೇಶದ ಆಸ್ತಿ ಅವರ ಅಭಿವೃದ್ಧಿಗಾಗಿ ನೆಮ್ಮದಿಯಿಂದ ಬದುಕಲು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆ ಎದುರಿಸಲು ತಯಾರಿ ನಡೆಸಿಕೊಳ್ಳಬೇಕು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕೋಲಾರ ತಾಲ್ಲೂಕು ವ್ಯವಸಾಯ ಸೇವಾ ಸಹಕಾರ ಸಂಘದ (ಟಿಎಪಿಸಿಎಂಎಸ್) ಚುನಾವಣೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು ಕೋಲಾರ ತಾಲೂಕು ಸೊಸೈಟಿಯು ಮೂರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಜವಾಬ್ದಾರಿಯಿಂದ ಒಗ್ಗಟ್ಟಿನಿಂದ ಸಹಕಾರಿ ಕ್ಷೇತ್ರವನ್ನು ಕಾಂಗ್ರೆಸ್ ಕೈ ವಶ ಮಾಡಿಕೊಳ್ಳೋಣ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ನಾಮಪತ್ರ ಸಲ್ಲಿಕೆ ಪರಿಶೀಲಿಸಲಾಗಿದೆ‌‌. ನಾಮಪತ್ರ ವಾಪಸ್ ಗೆ ಇಂದು ಕೊನೆಯ ದಿನ ಮುಗಿದಿದೆ. ಸಿ.ಬೈರೇಗೌಡರು ಹಾಗೂ ಕೆ.ಶ್ರೀನಿವಾಸಗೌಡ ಅವರಂಥ ಗಟ್ಟಿ ನಾಯಕರು ಸಹಕಾರ ಸಂಘದಲ್ಲಿ ಇದ್ದ ಕಾರಣ 40 ವರ್ಷದಿಂದ ಚುನಾವಣೆ ನಡೆದಿರಲಿಲ್ಲ ಈಗ ನಡೆಯತ್ತಾ ಇದ್ದು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಜೊತೆಯಾಗಿವೆ. ಇನ್ನೂ ಮುಂದೆ ಎಲ್ಲಾ ಚುನಾವಣೆಯಲ್ಲಿ ಒಂದಾಗಿಯೇ ಹೆಜ್ಜೆ ಇಟ್ಟಿವೆ‌. ಹೀಗಾಗಿ, ನಾವು ಒಗ್ಗಟ್ಟಿನಲ್ಲಿ ಚುನಾವಣೆ ನಡೆಸಬೇಕು ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲರೂ ಗೆಲ್ಲಬೇಕು ನಮ್ಮ ಕಾರ್ಯಕರ್ತರನ್ನು ಬಲಿಕೊಟ್ಟು ಸುಮ್ಮನಿರಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೆ ಕೈಚೆಲ್ಲಬಾರದು  ಎಂದರು.

ರೈತರ ನೆಮ್ಮದಿ ಸಂತೋಷವನ್ನು ಕೊಡಿಸುವ ಸಂಸ್ಥೆಯಾಗಿ ಸೊಸೈಟಿ ಕೆಲಸ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಾ ಇದೆ. ಅಭ್ಯರ್ಥಿಗಳು ಸಿಂಡಿಕೇಟ್ ಬಿಟ್ಟು ಹೋಗುವುದಿಲ್ಲ ಎಂದು ಪ್ರತಿ ಅಭ್ಯರ್ಥಿಗಳ ಕೈಯಿಂದ ಪ್ರಮಾಣ ಮಾಡಿಸಿಕೊಂಡು ಪ್ರಚಾರ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾಗನಾಳ‌ ಸೋಮಣ್ಣ ಮಾತನಾಡಿ, ಸುಮಾರು 300 ಹಳ್ಳಿಗಳಿಂದ 1942 ಮತಗಳಿದ್ದು, ಎಲ್ಲರೂ ಸೇರಿ ಗೆಲ್ಲಿಸಲು ಕೆಲಸ ಮಾಡಬೇಕು. ಪ್ರತಿ ಮತಕ್ಕೂ ಮೌಲ್ಯವಿದೆ. ಮೊದಲ ಬಾರಿ ಚುನಾವಣೆ ನಡೆಯುತ್ತಿದೆ ಸೊಸೈಟಿಯಿಂದ ರೈತರ ಅಭಿವೃದ್ಧಿಗೆ ಕಾರಣವಾಗಿದ್ದೇವೆ. ಮಾದರಿ ಸೊಸೈಟಿ ಮಾಡಿದ್ದನ್ನು ಮತದಾರರಿಗೆ ಮನವರಿಕೆ ಮಾಡುವ ಮೂಲಕ ಮತ ಕೇಳೋಣ ಎಂದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ ಮಾತನಾಡಿ, 1980ರಲ್ಲಿ ಚುನಾವಣೆ ನಡೆದಿತ್ತು‌. ಆನಂತರ ಚುನಾವಣೆ ನಡೆದಿರಲಿಲ್ಲ. ಈಗ ಚುನಾವಣೆ ನಡೆಯುತ್ತಿದೆ. ಬೈರೇಗೌಡ ಕಾಲದಲ್ಲಿ ನಾವೆಲ್ಲಾ ಕಾಂಗ್ರೆಸ್ ವಿರೋಧಿಗಳಾಗಿದ್ದೆವು. ಕೊತ್ತೂರು ಮಂಜುನಾಥ್ ಶಾಸಕರಾದ ಮೇಲೆ ಅಭಿವೃದ್ಧಿ ಕಾಣುತ್ತಿದೆ. ಎಲ್ಲರೂ ಒಟ್ಟಿಗೆ ಸೇರಿ ಚುನಾವಣೆ ನಡೆಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಮಾತನಾಡಿ ಗ್ರಾಪಂ ಚುನಾವಣೆಯಲ್ಲಿ ಹೇಗೆ ಕೆಲಸ ಮಾಡಿದ್ದೇವೆ ಅದೇ ರೀತಿಯಲ್ಲಿ ತಾವುಗಳು ಜವಾಬ್ದಾರಿ ತೆಗೆದುಕೊಂಡು, ನಾವೇ ಅಭ್ಯರ್ಥಿ ಎಂದುಕೊಂಡು ಪ್ರಚಾರ ನಡೆಸಬೇಕು. ಸಹಕಾರ ರಂಗದಲ್ಲಿ ಪರಸ್ಪರ ಸಹಕಾರ ‌ಅಗತ್ಯ ಎಂಬುದನ್ನು ಹಳ್ಳಿಗಳಲ್ಲಿ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ನಾಗರಾಜ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಅರಹಳ್ಳಿ ಗೋಪಾಲಕೃಷ್ಣ, ವಕ್ಕಲೇರಿ ರಾಜಪ್ಪ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಮುಂತಾದವರು ಇದ್ದರು

Ramesh Babu

Journalist

Recent Posts

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

6 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

6 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

10 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

22 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

1 day ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

1 day ago