ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ. ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲುಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ. ಇದು ಸಲ್ಲದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಕಿಂಚಿತ್ತೂ ಕೆಲಸ ಮಾಡದೆ ಇರುವ, ಮೂಲತಹ ರೈತ ವಿರೋಧಿಯಾಗಿರುವ ಬಿಜೆಪಿಯ ನಾಯಕರು ಇಂತಹದ್ದೇ ಅವಕಾಶಕ್ಕಾಗಿ ಕಾದು ಕೂತವರಂತೆ ಶಿವಾನಂದ ಪಾಟೀಲರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ. ಬೀಜ-ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ ಮತ್ತು ರೈತರ ಸಾಲಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮೆಷಿನ್ ಇದೆಯೇ ಎಂದು ಕೇಳಿದ ಭಾರತೀಯ ಜನತಾ ಪಕ್ಷದ ನಾಯಕರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ? ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ. ರೈತರ ಬಗೆಗಿನ ನಮ್ಮ ಪ್ರೀತಿ-ಅಭಿಮಾನಕ್ಕೆ ನಮ್ಮ ಸರ್ಕಾರದ  ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಜಾರಿಗೆ ತಂದಿರುವ ರೈತ ಪರ ಕಾರ್ಯಕ್ರಮಗಳೇ ಸಾಕ್ಷಿ. ರಾಜ್ಯದಲ್ಲಿನ ಬರಗಾಲದಿಂದ ನೊಂದಿರುವ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡದೆ ಇದ್ದರೂ ನಾವು ಪ್ರತಿ ರೈತ ಕುಟುಂಬಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿದ್ದೇವೆ. ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಾಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದರು.

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ನೀಡುತ್ತಿದ್ದೇವೆ. ಹದಿನೈದು ವರ್ಷ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಗಳ ಸಕ್ರಮ ಗೊಳಿಸಲು ತೀರ್ಮಾನಿಸಿದ್ದೇವೆ.  ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ 4 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಕ್ರಮ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ. ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಾ ಇರುತ್ತಾರೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

50 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

10 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago