ರೈತರ ಬೆಳೆಗೆ ಬೆಲೆ‌ ನಿಗದಿಪಡಿಸಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ: ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ

ರೈತರ ಬೆಳೆಗೆ ಸೂಕ್ತ ಬೆಲೆ ದೊರೆತರೆ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮವಾಗಲು ಸಾಧ್ಯ, ಆ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಕೆ.ಎಂ.ಹೆಚ್ ಕನ್ವೆನ್ಷನ್‌ ಹಾಲ್ ನಲ್ಲಿ ಭಾರತೀಯ‌ ಕಿಸಾನ್ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ದಕ್ಷಿಣಾ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ‌ಅವರು ಮಾತನಾಡಿದರು.

ಭಾರತ ದೇಶದಲ್ಲಿ ರೈತರಿಗೆ ಸಮರ್ಪಕವಾಗಿ ವ್ಯವಸಾಯ ಮಾಡುವಲ್ಲಿ ಸರ್ಕಾರ ಅನೇಕ ಕಾನೂನು ಜಾರಿಗೆ ತಂದರೂ ಅದರ ಅನುಷ್ಠಾನದಲ್ಲಿ ರೈತರಿಗೆ ಅನ್ಯಾಯವಾಗಿದೆ.

ಮಳೆ ಅಭಾವ, ಕೃಷಿ ಕೂಲಿಕಾರರ ಸಮಸ್ಯೆಯಿಂದ ರೈತರು ಆಹಾರ ಧಾನ್ಯ ಬೆಳೆಯುವುದನ್ನೇ ಇತ್ತೀಚೆಗೆ ನಿಲ್ಲಿಸಿದ್ದಾರೆ. ವಾಣಿಜ್ಯ ಬೆಳೆ ಹಾಗೂ ತರಕಾರಿಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅರಣ್ಯ ನಾಶವು ಕೃಷಿಯ ಮೊದಲ ಋಣಾತ್ಮಕ ಪರಿಣಾಮವಾಗಿದೆ. ಆಧುನಿಕ ಬದುಕಿನಲ್ಲಿ ಬೇಸಾಯದ ಕಡೆ ಗಮನ‌ ನೀಡಬೇಕಾಗಿದೆ. ಕೃಷಿ ಬದುಕು ನಮ್ಮದಾಗಬೇಕು ಎಂದರು.

ನಂತರ ಪ್ರಾಂತ ಕಾರ್ಯದರ್ಶಿ ರಮೇಶ್ ರಾಜ್ ಮಾತನಾಡಿ, ಭಾರತ ದೇಶದಲ್ಲಿ ಕಳೆದ 40 ವರ್ಷಗಳಿಂದ ಕಿಸಾನ್ ಸಂಘ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ‌ ಸಮಿತಿ ರಚನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕ ಕೆಲಸ ಮಾಡುತ್ತಿದೆ. ಬಹುತೇಕ ರೈತರ ಸಮಸ್ಯೆಯನ್ನು ಇಲಾಖೆಯ ಅಧಿಕಾರಿಗಳು ಸರಿಯಾಗಿದೆ ಸ್ಪಂದಿಸಿದ ಕಾರಣ ನಮ್ಮ‌ ಸಮಿತಿಯು ರೈತರ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ, ಪ್ರಾಂತ ಉಪಾಧ್ಯಕ್ಷ ಸೋಮಶೇಖರ್, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ನಾಗರಾಜ್, ತಾಲೂಕು ಅಧ್ಯಕ್ಷ ಪ್ರದೀಪ್ ಕುಮಾರ್.ಆರ್, ಸುಜಾತ, ಅಖಲ ಭಾರತ ಕಾರ್ಯದರ್ಶಿ ವೀಣಾ ಸತೀಶ್, ಪ್ರಾಂತ ಮಹಿಳಾ ಪ್ರಮುಖ್ ದೇವಕಿಪ್ರಬಾಸ್, ಅಖಲಿ ಭಾರತ ಬೀಜ ಪ್ರಮುಖ್ ಕೃಷ್ಣ ಮುರಾರಿ ತಾಲೂಕು ಪದಾಧಿಕಾರಿಗಳಾದ ಚಂದ್ರಣ್ಣ, ಕನಕರಾಜು, ಗಂಗಾಧರಪ್ಪ, ಹರಿಕುಮಾರ್, ಲತಾ ಇದ್ದರು.

Ramesh Babu

Journalist

Recent Posts

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

2 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

4 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

16 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

18 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

19 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 day ago