ರೈತರ ಬೆಳೆಗೆ ಸೂಕ್ತ ಬೆಲೆ ದೊರೆತರೆ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮವಾಗಲು ಸಾಧ್ಯ, ಆ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಕೆ.ಎಂ.ಹೆಚ್ ಕನ್ವೆನ್ಷನ್ ಹಾಲ್ ನಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ದಕ್ಷಿಣಾ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ದೇಶದಲ್ಲಿ ರೈತರಿಗೆ ಸಮರ್ಪಕವಾಗಿ ವ್ಯವಸಾಯ ಮಾಡುವಲ್ಲಿ ಸರ್ಕಾರ ಅನೇಕ ಕಾನೂನು ಜಾರಿಗೆ ತಂದರೂ ಅದರ ಅನುಷ್ಠಾನದಲ್ಲಿ ರೈತರಿಗೆ ಅನ್ಯಾಯವಾಗಿದೆ.
ಮಳೆ ಅಭಾವ, ಕೃಷಿ ಕೂಲಿಕಾರರ ಸಮಸ್ಯೆಯಿಂದ ರೈತರು ಆಹಾರ ಧಾನ್ಯ ಬೆಳೆಯುವುದನ್ನೇ ಇತ್ತೀಚೆಗೆ ನಿಲ್ಲಿಸಿದ್ದಾರೆ. ವಾಣಿಜ್ಯ ಬೆಳೆ ಹಾಗೂ ತರಕಾರಿಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅರಣ್ಯ ನಾಶವು ಕೃಷಿಯ ಮೊದಲ ಋಣಾತ್ಮಕ ಪರಿಣಾಮವಾಗಿದೆ. ಆಧುನಿಕ ಬದುಕಿನಲ್ಲಿ ಬೇಸಾಯದ ಕಡೆ ಗಮನ ನೀಡಬೇಕಾಗಿದೆ. ಕೃಷಿ ಬದುಕು ನಮ್ಮದಾಗಬೇಕು ಎಂದರು.
ನಂತರ ಪ್ರಾಂತ ಕಾರ್ಯದರ್ಶಿ ರಮೇಶ್ ರಾಜ್ ಮಾತನಾಡಿ, ಭಾರತ ದೇಶದಲ್ಲಿ ಕಳೆದ 40 ವರ್ಷಗಳಿಂದ ಕಿಸಾನ್ ಸಂಘ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕ ಕೆಲಸ ಮಾಡುತ್ತಿದೆ. ಬಹುತೇಕ ರೈತರ ಸಮಸ್ಯೆಯನ್ನು ಇಲಾಖೆಯ ಅಧಿಕಾರಿಗಳು ಸರಿಯಾಗಿದೆ ಸ್ಪಂದಿಸಿದ ಕಾರಣ ನಮ್ಮ ಸಮಿತಿಯು ರೈತರ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…