ರೈತರ ಬೆಳೆಗೆ ಸೂಕ್ತ ಬೆಲೆ ದೊರೆತರೆ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮವಾಗಲು ಸಾಧ್ಯ, ಆ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಕೆ.ಎಂ.ಹೆಚ್ ಕನ್ವೆನ್ಷನ್ ಹಾಲ್ ನಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ದಕ್ಷಿಣಾ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ದೇಶದಲ್ಲಿ ರೈತರಿಗೆ ಸಮರ್ಪಕವಾಗಿ ವ್ಯವಸಾಯ ಮಾಡುವಲ್ಲಿ ಸರ್ಕಾರ ಅನೇಕ ಕಾನೂನು ಜಾರಿಗೆ ತಂದರೂ ಅದರ ಅನುಷ್ಠಾನದಲ್ಲಿ ರೈತರಿಗೆ ಅನ್ಯಾಯವಾಗಿದೆ.
ಮಳೆ ಅಭಾವ, ಕೃಷಿ ಕೂಲಿಕಾರರ ಸಮಸ್ಯೆಯಿಂದ ರೈತರು ಆಹಾರ ಧಾನ್ಯ ಬೆಳೆಯುವುದನ್ನೇ ಇತ್ತೀಚೆಗೆ ನಿಲ್ಲಿಸಿದ್ದಾರೆ. ವಾಣಿಜ್ಯ ಬೆಳೆ ಹಾಗೂ ತರಕಾರಿಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅರಣ್ಯ ನಾಶವು ಕೃಷಿಯ ಮೊದಲ ಋಣಾತ್ಮಕ ಪರಿಣಾಮವಾಗಿದೆ. ಆಧುನಿಕ ಬದುಕಿನಲ್ಲಿ ಬೇಸಾಯದ ಕಡೆ ಗಮನ ನೀಡಬೇಕಾಗಿದೆ. ಕೃಷಿ ಬದುಕು ನಮ್ಮದಾಗಬೇಕು ಎಂದರು.
ನಂತರ ಪ್ರಾಂತ ಕಾರ್ಯದರ್ಶಿ ರಮೇಶ್ ರಾಜ್ ಮಾತನಾಡಿ, ಭಾರತ ದೇಶದಲ್ಲಿ ಕಳೆದ 40 ವರ್ಷಗಳಿಂದ ಕಿಸಾನ್ ಸಂಘ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕ ಕೆಲಸ ಮಾಡುತ್ತಿದೆ. ಬಹುತೇಕ ರೈತರ ಸಮಸ್ಯೆಯನ್ನು ಇಲಾಖೆಯ ಅಧಿಕಾರಿಗಳು ಸರಿಯಾಗಿದೆ ಸ್ಪಂದಿಸಿದ ಕಾರಣ ನಮ್ಮ ಸಮಿತಿಯು ರೈತರ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…