ರೈತರ ಬೆಳೆಗೆ ಸೂಕ್ತ ಬೆಲೆ ದೊರೆತರೆ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮವಾಗಲು ಸಾಧ್ಯ, ಆ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಕೆ.ಎಂ.ಹೆಚ್ ಕನ್ವೆನ್ಷನ್ ಹಾಲ್ ನಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ದಕ್ಷಿಣಾ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ದೇಶದಲ್ಲಿ ರೈತರಿಗೆ ಸಮರ್ಪಕವಾಗಿ ವ್ಯವಸಾಯ ಮಾಡುವಲ್ಲಿ ಸರ್ಕಾರ ಅನೇಕ ಕಾನೂನು ಜಾರಿಗೆ ತಂದರೂ ಅದರ ಅನುಷ್ಠಾನದಲ್ಲಿ ರೈತರಿಗೆ ಅನ್ಯಾಯವಾಗಿದೆ.
ಮಳೆ ಅಭಾವ, ಕೃಷಿ ಕೂಲಿಕಾರರ ಸಮಸ್ಯೆಯಿಂದ ರೈತರು ಆಹಾರ ಧಾನ್ಯ ಬೆಳೆಯುವುದನ್ನೇ ಇತ್ತೀಚೆಗೆ ನಿಲ್ಲಿಸಿದ್ದಾರೆ. ವಾಣಿಜ್ಯ ಬೆಳೆ ಹಾಗೂ ತರಕಾರಿಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅರಣ್ಯ ನಾಶವು ಕೃಷಿಯ ಮೊದಲ ಋಣಾತ್ಮಕ ಪರಿಣಾಮವಾಗಿದೆ. ಆಧುನಿಕ ಬದುಕಿನಲ್ಲಿ ಬೇಸಾಯದ ಕಡೆ ಗಮನ ನೀಡಬೇಕಾಗಿದೆ. ಕೃಷಿ ಬದುಕು ನಮ್ಮದಾಗಬೇಕು ಎಂದರು.
ನಂತರ ಪ್ರಾಂತ ಕಾರ್ಯದರ್ಶಿ ರಮೇಶ್ ರಾಜ್ ಮಾತನಾಡಿ, ಭಾರತ ದೇಶದಲ್ಲಿ ಕಳೆದ 40 ವರ್ಷಗಳಿಂದ ಕಿಸಾನ್ ಸಂಘ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕ ಕೆಲಸ ಮಾಡುತ್ತಿದೆ. ಬಹುತೇಕ ರೈತರ ಸಮಸ್ಯೆಯನ್ನು ಇಲಾಖೆಯ ಅಧಿಕಾರಿಗಳು ಸರಿಯಾಗಿದೆ ಸ್ಪಂದಿಸಿದ ಕಾರಣ ನಮ್ಮ ಸಮಿತಿಯು ರೈತರ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…