ರೈತರ ಬೆಳೆಗೆ ಬೆಲೆ‌ ನಿಗದಿಪಡಿಸಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ: ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ

ರೈತರ ಬೆಳೆಗೆ ಸೂಕ್ತ ಬೆಲೆ ದೊರೆತರೆ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮವಾಗಲು ಸಾಧ್ಯ, ಆ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಕೆ.ಎಂ.ಹೆಚ್ ಕನ್ವೆನ್ಷನ್‌ ಹಾಲ್ ನಲ್ಲಿ ಭಾರತೀಯ‌ ಕಿಸಾನ್ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ದಕ್ಷಿಣಾ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ‌ಅವರು ಮಾತನಾಡಿದರು.

ಭಾರತ ದೇಶದಲ್ಲಿ ರೈತರಿಗೆ ಸಮರ್ಪಕವಾಗಿ ವ್ಯವಸಾಯ ಮಾಡುವಲ್ಲಿ ಸರ್ಕಾರ ಅನೇಕ ಕಾನೂನು ಜಾರಿಗೆ ತಂದರೂ ಅದರ ಅನುಷ್ಠಾನದಲ್ಲಿ ರೈತರಿಗೆ ಅನ್ಯಾಯವಾಗಿದೆ.

ಮಳೆ ಅಭಾವ, ಕೃಷಿ ಕೂಲಿಕಾರರ ಸಮಸ್ಯೆಯಿಂದ ರೈತರು ಆಹಾರ ಧಾನ್ಯ ಬೆಳೆಯುವುದನ್ನೇ ಇತ್ತೀಚೆಗೆ ನಿಲ್ಲಿಸಿದ್ದಾರೆ. ವಾಣಿಜ್ಯ ಬೆಳೆ ಹಾಗೂ ತರಕಾರಿಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅರಣ್ಯ ನಾಶವು ಕೃಷಿಯ ಮೊದಲ ಋಣಾತ್ಮಕ ಪರಿಣಾಮವಾಗಿದೆ. ಆಧುನಿಕ ಬದುಕಿನಲ್ಲಿ ಬೇಸಾಯದ ಕಡೆ ಗಮನ‌ ನೀಡಬೇಕಾಗಿದೆ. ಕೃಷಿ ಬದುಕು ನಮ್ಮದಾಗಬೇಕು ಎಂದರು.

ನಂತರ ಪ್ರಾಂತ ಕಾರ್ಯದರ್ಶಿ ರಮೇಶ್ ರಾಜ್ ಮಾತನಾಡಿ, ಭಾರತ ದೇಶದಲ್ಲಿ ಕಳೆದ 40 ವರ್ಷಗಳಿಂದ ಕಿಸಾನ್ ಸಂಘ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ‌ ಸಮಿತಿ ರಚನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕ ಕೆಲಸ ಮಾಡುತ್ತಿದೆ. ಬಹುತೇಕ ರೈತರ ಸಮಸ್ಯೆಯನ್ನು ಇಲಾಖೆಯ ಅಧಿಕಾರಿಗಳು ಸರಿಯಾಗಿದೆ ಸ್ಪಂದಿಸಿದ ಕಾರಣ ನಮ್ಮ‌ ಸಮಿತಿಯು ರೈತರ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ, ಪ್ರಾಂತ ಉಪಾಧ್ಯಕ್ಷ ಸೋಮಶೇಖರ್, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ನಾಗರಾಜ್, ತಾಲೂಕು ಅಧ್ಯಕ್ಷ ಪ್ರದೀಪ್ ಕುಮಾರ್.ಆರ್, ಸುಜಾತ, ಅಖಲ ಭಾರತ ಕಾರ್ಯದರ್ಶಿ ವೀಣಾ ಸತೀಶ್, ಪ್ರಾಂತ ಮಹಿಳಾ ಪ್ರಮುಖ್ ದೇವಕಿಪ್ರಬಾಸ್, ಅಖಲಿ ಭಾರತ ಬೀಜ ಪ್ರಮುಖ್ ಕೃಷ್ಣ ಮುರಾರಿ ತಾಲೂಕು ಪದಾಧಿಕಾರಿಗಳಾದ ಚಂದ್ರಣ್ಣ, ಕನಕರಾಜು, ಗಂಗಾಧರಪ್ಪ, ಹರಿಕುಮಾರ್, ಲತಾ ಇದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

7 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago