ರೈತರ ಬೆಳೆಗೆ ಸೂಕ್ತ ಬೆಲೆ ದೊರೆತರೆ ಮಾತ್ರ ಅವರ ಆರ್ಥಿಕ ಸ್ಥಿತಿ ಉತ್ತಮವಾಗಲು ಸಾಧ್ಯ, ಆ ನಿಟ್ಟಿನಲ್ಲಿ ಸರ್ಕಾರಗಳು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಮುಂದಾಗಬೇಕಾಗಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಕೆ.ಎಂ.ಹೆಚ್ ಕನ್ವೆನ್ಷನ್ ಹಾಲ್ ನಲ್ಲಿ ಭಾರತೀಯ ಕಿಸಾನ್ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ದಕ್ಷಿಣಾ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ದೇಶದಲ್ಲಿ ರೈತರಿಗೆ ಸಮರ್ಪಕವಾಗಿ ವ್ಯವಸಾಯ ಮಾಡುವಲ್ಲಿ ಸರ್ಕಾರ ಅನೇಕ ಕಾನೂನು ಜಾರಿಗೆ ತಂದರೂ ಅದರ ಅನುಷ್ಠಾನದಲ್ಲಿ ರೈತರಿಗೆ ಅನ್ಯಾಯವಾಗಿದೆ.
ಮಳೆ ಅಭಾವ, ಕೃಷಿ ಕೂಲಿಕಾರರ ಸಮಸ್ಯೆಯಿಂದ ರೈತರು ಆಹಾರ ಧಾನ್ಯ ಬೆಳೆಯುವುದನ್ನೇ ಇತ್ತೀಚೆಗೆ ನಿಲ್ಲಿಸಿದ್ದಾರೆ. ವಾಣಿಜ್ಯ ಬೆಳೆ ಹಾಗೂ ತರಕಾರಿಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಅರಣ್ಯ ನಾಶವು ಕೃಷಿಯ ಮೊದಲ ಋಣಾತ್ಮಕ ಪರಿಣಾಮವಾಗಿದೆ. ಆಧುನಿಕ ಬದುಕಿನಲ್ಲಿ ಬೇಸಾಯದ ಕಡೆ ಗಮನ ನೀಡಬೇಕಾಗಿದೆ. ಕೃಷಿ ಬದುಕು ನಮ್ಮದಾಗಬೇಕು ಎಂದರು.
ನಂತರ ಪ್ರಾಂತ ಕಾರ್ಯದರ್ಶಿ ರಮೇಶ್ ರಾಜ್ ಮಾತನಾಡಿ, ಭಾರತ ದೇಶದಲ್ಲಿ ಕಳೆದ 40 ವರ್ಷಗಳಿಂದ ಕಿಸಾನ್ ಸಂಘ ರೈತರ ಪರವಾಗಿ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನಾತ್ಮಕ ಕೆಲಸ ಮಾಡುತ್ತಿದೆ. ಬಹುತೇಕ ರೈತರ ಸಮಸ್ಯೆಯನ್ನು ಇಲಾಖೆಯ ಅಧಿಕಾರಿಗಳು ಸರಿಯಾಗಿದೆ ಸ್ಪಂದಿಸಿದ ಕಾರಣ ನಮ್ಮ ಸಮಿತಿಯು ರೈತರ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…