Categories: ಕೋಲಾರ

ರೈತರ ಬೇಡಿಕೆಗಳ ಈಡೇರಿಕೆಗಾಗಿ ಸಂಸತ್ತಿನಲ್ಲಿ ವಿಶೇಷ ಮಸೂದೆ ಮಂಡಿಸಲು ಸಂಸದ ಮಲ್ಲೇಶ್ ಬಾಬುಗೆ ಮನವಿ

ಕೋಲಾರ: ರೈತರ ಬೇಡಿಕೆಗಳ ಈಡೇರಿಕೆಗಾಗಿ ಸಂಸತ್ತಿನಲ್ಲಿ ವಿಶೇಷ ಮಸೂದೆಯನ್ನು ಮಂಡಿಸುವಂತೆ ಸಂಸದ ಎಂ.ಮಲ್ಲೇಶ್ ಬಾಬು ಅವರಿಗೆ ಅವರ ನಿವಾಸದಲ್ಲಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ ಪದಾಧಿಕಾರಿಗಳ ನಿಯೋಗವು ಭೇಟಿ ನೀಡಿ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ದೇಶದ ರಾಜಧಾನಿ ದೆಹಲಿಯಲ್ಲಿ ರೈತರು ಕೃಷಿ ಕಾನೂನುಗಳ ವಿರುದ್ಧ ಮತ್ತು ಎಂಎಸ್‌ಪಿ ದರದಲ್ಲಿ ಬೆಳೆಗಳ ಖರೀದಿಗೆ ಖಾತರಿ ಕಾನೂನನ್ನು ಜಾರಿಗೆ ತರಲು ಐತಿಹಾಸಿಕ ಚಳವಳಿ ನಡೆಸಿದ ಪರಿಣಾಮ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದು ಎಂಎಸ್‌ಪಿ ಗ್ಯಾರಂಟಿ ಕಾನೂನು ಮಾಡಲು ಸಮಿತಿ ರಚನೆ ಮಾಡುವುದಾಗಿ ಘೋಷಿಸಿತ್ತು. ಆದರೆ ಇದುವರೆಗೆ ಕಾನೂನು ರೂಪಿಸದ ಕೇಂದ್ರ ಸರ್ಕಾರ ವಿಳಂಬ ನೀತಿ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಸಚಿವರ ಜತೆ ನಾಲ್ಕು ಸುತ್ತಿನ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ. ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸಲು ಹೊರಟಿದ್ದ ರೈತರ ಮೇಲೆ ಹರಿಯಾಣದ ಬಿಜೆಪಿ ಸರ್ಕಾರ ಪೊಲೀಸರ ಮೂಲಕ ನಡೆಸಿದ ಹಿಂಸಾಚಾರದಲ್ಲಿ ರೈತ ಶುಭಾಕರನ್ ಸಿಂಗ್ ಹುತಾತ್ಮರಾದರು. ಐವರು ರೈತರು ದೃಷ್ಟಿ ಕಳೆದುಕೊಂಡು 433 ರೈತರು ಗಾಯಗೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ಲೋಕಸಭೆ ಚುನಾವಣೆ ಮುನ್ನ ಪ್ರಣಾಳಿಕೆಯಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಆಶ್ವಾಸನೆ ನೀಡಿದ್ದರು ಆದ್ದರಿಂದ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸುವುದು ಜವಾಬ್ದಾರಿ ಎಂಬುದನ್ನು ಅರಿಯಬೇಕು. ಹಾಗೊಮ್ಮೆ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸದಿದ್ದರೆ ರೈತರ ಉಳಿವು ಕಷ್ಟವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ನಮ್ಮ ಕೋಲಾರ ರೈತ ಸಂಘದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಲೆಗಳನ್ನು ನಿಗದಿಪಡಿಸಬೇಕು. ರೈತರು ಮತ್ತು ಕೂಲಿಕಾರರನ್ನು ಸಂಪೂರ್ಣ ಸಾಲದಿಂದ ಮುಕ್ತಗೊಳಿಸಬೇಕು ಭಾರತವು ವಿಶ್ವ ವ್ಯಾಪಾರ ಒಪ್ಪಂದ ಸಂಸ್ಥೆಯಿಂದ ಹೊರಬರಬೇಕು. ಎಲ್ಲ ಮುಕ್ತ ವ್ಯಾಪಾರ ಒಪ್ಪಂದಗಳನ್ನು ನಿಷೇಧಿಸಬೇಕು. 60 ವರ್ಷ ತುಂಬಿದ ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು. ಫಸಲ್ ಬಿಮಾ ಬೆಳೆ ವಿಮಾ ಯೋಜನೆಯಲ್ಲಿ ತಿದ್ದುಪಡಿಗಳನ್ನು ಮಾಡಬೇಕು. ನಕಲಿ ಬಿತ್ತನೆ ಬೀಜ, ಕೀಟನಾಶಕ ಮತ್ತು ರಸಗೊಬ್ಬರಗಳನ್ನು ತಯಾರಿಸುವ ಕಂಪನಿಗಳಿಗೆ ಕಠಿಣ ಶಿಕ್ಷೆ ಮತ್ತು ದಂಡವನ್ನು ವಿಧಿಸಲು ನಿಬಂಧನೆಗಳನ್ನು ಮಾಡಬೇಕು. ಬೀಜಗಳ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ ರಾಜ್ಯದಲ್ಲಿ ಬರ, ಅತಿವೃಷ್ಟಿ, ಮಳೆ ಹಾನಿ, ಪ್ರಕೃತಿ ವಿಕೋಪ ಪರಿಹಾರ, ಎನ್‌ಡಿಆರ್‌ಎಫ್‌ ಮಾನದಂಡ ತಿದ್ದುಪಡಿ ಮಾಡಬೇಕು. ವೈಜ್ಞಾನಿಕವಾಗಿ ಪರಿಹಾರ ನಿಗದಿ ಮಾಡುವಂತಾಗಬೇಕು. ಹರಿಯಾಣದಲ್ಲಿ ರೈತರ ಆಂದೋಲನ-2 ರ ವೇಳೆ ಗುಂಡು ಹಾರಿಸಿ ರೈತರಿಗೆ ಚಿತ್ರಹಿಂಸೆ ನೀಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೆ ಪಿ ಆರ್ ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್, ಕುಮಾರ್ ಮುಖಂಡರಾದ ಶಿವರಾಜ್ ,ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆನಂದ್ ಕುಮಾರ್, ಚಿನ್ನಾಪುರ ಮಂಜುನಾಥ್, ಮುನಿವೆಂಕಟಪ್ಪ, ಗೋಪಾಲ್, ನಮ್ಮ ಕೋಲಾರ ರೈತ ಸಂಘದ , ರವಿ, ಕೃಷ್ಣೇಗೌಡ, ಸಿಐಟಿಯು ಮುಖಂಡರಾದ ಹೆಚ್.ಬಿ.ಕೃಷ್ಣಪ್ಪ, ಎಂ.ಭೀಮರಾಜ್ ಮುಂತಾದವರು ಇದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

12 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

18 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago