Categories: ಕೋಲಾರ

ರೈತರ ರಾಗಿ ರಕ್ಷಣೆಗೆ ಉಚಿತ ಟಾರ್ಪಲ್ ವಿತರಿಸುವಂತೆ ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಸರ್ಕಾರದಿಂದ ಬರುವ ಟಾರ್ಪಲ್ ಅನ್ನು ಕಾಳಸಂತೆಯಲ್ಲಿ ಮಾರಾಟ ದಂಧೆಗೆ ಕಡಿವಾಣ ಹಾಕಿ ರಾಗಿ ರಕ್ಷಣೆ ಮಾಡಲು ಕೃಷಿ ಇಲಾಖೆಯಿಂದ ಉಚಿತವಾಗಿ ಟಾರ್ಪಲ್ ವಿತರಣೆ ಮಾಡಿ ಬಡ ರೈತರ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ರಾಗಿ ತೆನೆ ಸಮೇತ ಕೃಷಿ ಇಲಾಖೆ ಮುಂದೆ ಹೋರಾಟ ಮಾಡಿ ಕೃಷಿ ಅಧಿಕಾರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಮುಂಗಾರು ಮಳೆ ಕೈಕೊಟ್ಟು ಹಿಂಗಾರು ಉತ್ತಮ ಮಳೆಯಾಗಿರುವುದರಿಂದ ರಾಗಿ, ನೆಲಗಡಲೆ, ಭತ್ತ ಸಮೃದ್ದಿಯಾಗಿ ಬೆಳೆದು ನಿಂತು ಕಟಾವಿಗೆ ಬಂದಿದ್ದು, ಒಂದು ಕಡೆ ಗ್ರಾಮೀಣ ಪ್ರದೇಶಗಳಲ್ಲಿ ಎತ್ತುಗಳು ಇಲ್ಲದ ಕಾರಣ ಬೆಳೆ ಕಟಾವು ಮಾಡಲು ಕೂಲಿ ಕಾರ್ಮಿಕರ ಕೊರತೆಯಿದ್ದು, ಪರ್ಯಾಯವಾಗಿ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳು ಸಿಗದೆ ಇರುವ ಸಮಸ್ಯೆಯಿಂದ ಖಾಸಗಿ ಕಟಾವು ಯಂತ್ರಗಳಿಗೆ ರೈತರು ಪ್ರತಿ ಎಕರೆಗೆ 6 ಸಾವಿರದಿಂದ 10 ಸಾವಿರದವರೆಗೆ ಹಗಲು ದರೋಡೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕಿದ್ದರೂ ಬೆಲೆ ನಿಗದಿಯೂ ಇಲ್ಲ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳು ನೀಡದೆ ಅಧಿಕಾರಿಗಳೇ ಖಾಸಗಿ ಮಾಲೀಕರ ಜೊತೆ ಶಾಮೀಲಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ ರಾಗಿ, ಭತ್ತ ಕಟಾವು ಋತುಮಾನದಲ್ಲಿ ಸರ್ಕಾರ ಬಡರೈತರಿಗೆ ಅನುಕೂಲವಾಗಲೆಂದು ಸಾವಿರಾರು ಕೋಟಿ ವೆಚ್ಚದಲ್ಲಿ ಟಾರ್ಪಲ್‌ಗಳನ್ನು ಸಬ್ಸಿಡಿ ದರದಲ್ಲಿ ವಿತರಣೆ ಮಾಡಲು ಜಿಲ್ಲಾ, ತಾಲ್ಲೂಕು ಕೃಷಿ ಇಲಾಖೆಗೆ ರೈತರಿಗೆ ಅವಶ್ಯಕತೆಯಿರುವಷ್ಟು ಟಾರ್ಪಲ್‌ಗಳನ್ನು ಸರಬರಾಜು ಮಾಡುತ್ತಿದ್ದರೂ ಸಮರ್ಪಕವಾಗಿ ರೈತರಿಗೆ ಪದೇ ಪದೇ ಮದ್ಯವರ್ತಿಗಳು ರಾಜಕಾರಣಿಗಳ ಬೆಂಬಲಿಗರಿಗೆ ಮಾತ್ರ ಸರ್ಕಾರದ ಟಾರ್ಪಲ್ ಸಿಗುತ್ತಿದ್ದು, ಬಡ ರೈತರು ಕಚೇರಿಗೆ ಅಲೆದರೂ ಖಾಲಿ ಎಂಬ ನಾಮ ಪಲಕ ನೋಡಿ ವಾಪಸ್ ಆಗುವ ಜೊತೆಗೆ ೩ ತಿಂಗಳ ಕಷ್ಟ ಬೆವರಿನಿಂದ ಬೆಳೆದ ರಾಗಿ, ಭತ್ತ ರಕ್ಷಣೆಗೆ ಸಾವಿರಾರು ಹಣ ನೀಡಿ ಖಾಸಗಿ ಅಂಗಡಿಗಳಲ್ಲಿ ಖರೀದಿ ಮಾಡುವ ಮೂಲಕ ಸರ್ಕಾರದ ಯೋಜನೆಗಳು ಬಡವರಿಗೆ ಸಿಗುತ್ತಿಲ್ಲ ಎಂಬುದು ಸಾಬೀತಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಸಿದರು.

ಮಾನ್ಯರು ಕೂಡಲೇ ಸರ್ಕಾರದಿಂದ ಕೃಷಿ ಇಲಾಖೆಗೆ ಬರುವ ಟಾರ್ಪಲ್‌ಗಳು ಖಾಸಗಿ ಅಂಗಡಿಗಳಿ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಕೃಷಿ ಇಲಾಖೆಯಿಂದ ರಾಜಕೀಯ ಬೆಂಬಲಿಗರಿಗೆ ಹಾಗೂ ದಲ್ಲಾಳಿಗಳಿಗೆ ಹಂಚದೆ ಬಡ ರೈತರಿಗೆ ವಿತರಣೆ ಮಾಡುವ ಮುಖಾಂತರ ರಾಗಿ ಭತ್ತ ರಕ್ಷಣೆ ಮಾಡಬೇಕೆಂದು ಮನವಿ ಮೂಲಕ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ, ಸರ್ಕಾರದಿಂದ ಬರುವ ಟಾರ್ಪಲ್‌ಗಳನ್ನು ಅರ್ಜಿ ಸಲ್ಲಿಸಿರುವ ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದೆ. ಜೊತೆಗೆ ರಾಜಕೀಯ ವ್ಯಕ್ತಿಗಳ ಒತ್ತಡವೂ ಕಿರಿಯ ಅಧಿಕಾರಿಗಳ ಮೇಲೆ ಇರಬಹುದು ನಮ್ಮ ಗಮನಕ್ಕೆ ಬಂದಿಲ್ಲ ಕೂಡಲೇ ರೈತರಿಗೆ ಅವಶ್ಯಕತೆ ಇರುವ ಟಾರ್ಪಲ್‌ಗಳನ್ನು ವಿತರಣೆ ಮಾಡುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಗೀರೀಶ್, ಪುತ್ತೇರಿ ರಾಜು ರ‍್ನಹಳ್ಳಿ ಆಂಜಿನಪ್ಪ,.ಶೈಲಜಾ ರತ್ನಮ್ಮ ವೆಂಕಟಮ್ಮ ಗೌರಮ್ಮ ಕಂಪಮ್ಮ ಚೌಡಮ್ಮ ಬಾಗ್ಯಮ ಮುಂತಾದವರಿದ್ದರು.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

10 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

12 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

14 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

15 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

21 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

22 hours ago