Categories: ಕೋಲಾರ

ರೈತರ ರಾಗಿ ರಕ್ಷಣೆಗೆ ಉಚಿತ ಟಾರ್ಪಲ್ ವಿತರಿಸುವಂತೆ ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಸರ್ಕಾರದಿಂದ ಬರುವ ಟಾರ್ಪಲ್ ಅನ್ನು ಕಾಳಸಂತೆಯಲ್ಲಿ ಮಾರಾಟ ದಂಧೆಗೆ ಕಡಿವಾಣ ಹಾಕಿ ರಾಗಿ ರಕ್ಷಣೆ ಮಾಡಲು ಕೃಷಿ ಇಲಾಖೆಯಿಂದ ಉಚಿತವಾಗಿ ಟಾರ್ಪಲ್ ವಿತರಣೆ ಮಾಡಿ ಬಡ ರೈತರ ರಕ್ಷಣೆ ಮಾಡಬೇಕೆಂದು ರೈತಸಂಘದಿಂದ ರಾಗಿ ತೆನೆ ಸಮೇತ ಕೃಷಿ ಇಲಾಖೆ ಮುಂದೆ ಹೋರಾಟ ಮಾಡಿ ಕೃಷಿ ಅಧಿಕಾರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಮುಂಗಾರು ಮಳೆ ಕೈಕೊಟ್ಟು ಹಿಂಗಾರು ಉತ್ತಮ ಮಳೆಯಾಗಿರುವುದರಿಂದ ರಾಗಿ, ನೆಲಗಡಲೆ, ಭತ್ತ ಸಮೃದ್ದಿಯಾಗಿ ಬೆಳೆದು ನಿಂತು ಕಟಾವಿಗೆ ಬಂದಿದ್ದು, ಒಂದು ಕಡೆ ಗ್ರಾಮೀಣ ಪ್ರದೇಶಗಳಲ್ಲಿ ಎತ್ತುಗಳು ಇಲ್ಲದ ಕಾರಣ ಬೆಳೆ ಕಟಾವು ಮಾಡಲು ಕೂಲಿ ಕಾರ್ಮಿಕರ ಕೊರತೆಯಿದ್ದು, ಪರ್ಯಾಯವಾಗಿ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳು ಸಿಗದೆ ಇರುವ ಸಮಸ್ಯೆಯಿಂದ ಖಾಸಗಿ ಕಟಾವು ಯಂತ್ರಗಳಿಗೆ ರೈತರು ಪ್ರತಿ ಎಕರೆಗೆ 6 ಸಾವಿರದಿಂದ 10 ಸಾವಿರದವರೆಗೆ ಹಗಲು ದರೋಡೆ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕಿದ್ದರೂ ಬೆಲೆ ನಿಗದಿಯೂ ಇಲ್ಲ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳು ನೀಡದೆ ಅಧಿಕಾರಿಗಳೇ ಖಾಸಗಿ ಮಾಲೀಕರ ಜೊತೆ ಶಾಮೀಲಾಗಿದ್ದಾರೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಅವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ ರಾಗಿ, ಭತ್ತ ಕಟಾವು ಋತುಮಾನದಲ್ಲಿ ಸರ್ಕಾರ ಬಡರೈತರಿಗೆ ಅನುಕೂಲವಾಗಲೆಂದು ಸಾವಿರಾರು ಕೋಟಿ ವೆಚ್ಚದಲ್ಲಿ ಟಾರ್ಪಲ್‌ಗಳನ್ನು ಸಬ್ಸಿಡಿ ದರದಲ್ಲಿ ವಿತರಣೆ ಮಾಡಲು ಜಿಲ್ಲಾ, ತಾಲ್ಲೂಕು ಕೃಷಿ ಇಲಾಖೆಗೆ ರೈತರಿಗೆ ಅವಶ್ಯಕತೆಯಿರುವಷ್ಟು ಟಾರ್ಪಲ್‌ಗಳನ್ನು ಸರಬರಾಜು ಮಾಡುತ್ತಿದ್ದರೂ ಸಮರ್ಪಕವಾಗಿ ರೈತರಿಗೆ ಪದೇ ಪದೇ ಮದ್ಯವರ್ತಿಗಳು ರಾಜಕಾರಣಿಗಳ ಬೆಂಬಲಿಗರಿಗೆ ಮಾತ್ರ ಸರ್ಕಾರದ ಟಾರ್ಪಲ್ ಸಿಗುತ್ತಿದ್ದು, ಬಡ ರೈತರು ಕಚೇರಿಗೆ ಅಲೆದರೂ ಖಾಲಿ ಎಂಬ ನಾಮ ಪಲಕ ನೋಡಿ ವಾಪಸ್ ಆಗುವ ಜೊತೆಗೆ ೩ ತಿಂಗಳ ಕಷ್ಟ ಬೆವರಿನಿಂದ ಬೆಳೆದ ರಾಗಿ, ಭತ್ತ ರಕ್ಷಣೆಗೆ ಸಾವಿರಾರು ಹಣ ನೀಡಿ ಖಾಸಗಿ ಅಂಗಡಿಗಳಲ್ಲಿ ಖರೀದಿ ಮಾಡುವ ಮೂಲಕ ಸರ್ಕಾರದ ಯೋಜನೆಗಳು ಬಡವರಿಗೆ ಸಿಗುತ್ತಿಲ್ಲ ಎಂಬುದು ಸಾಬೀತಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಸಿದರು.

ಮಾನ್ಯರು ಕೂಡಲೇ ಸರ್ಕಾರದಿಂದ ಕೃಷಿ ಇಲಾಖೆಗೆ ಬರುವ ಟಾರ್ಪಲ್‌ಗಳು ಖಾಸಗಿ ಅಂಗಡಿಗಳಿ ಕಾಳ ಸಂತೆಯಲ್ಲಿ ಮಾರಾಟ ಮಾಡುವ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಕೃಷಿ ಇಲಾಖೆಯಿಂದ ರಾಜಕೀಯ ಬೆಂಬಲಿಗರಿಗೆ ಹಾಗೂ ದಲ್ಲಾಳಿಗಳಿಗೆ ಹಂಚದೆ ಬಡ ರೈತರಿಗೆ ವಿತರಣೆ ಮಾಡುವ ಮುಖಾಂತರ ರಾಗಿ ಭತ್ತ ರಕ್ಷಣೆ ಮಾಡಬೇಕೆಂದು ಮನವಿ ಮೂಲಕ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೃಷಿ ಅಧಿಕಾರಿ, ಸರ್ಕಾರದಿಂದ ಬರುವ ಟಾರ್ಪಲ್‌ಗಳನ್ನು ಅರ್ಜಿ ಸಲ್ಲಿಸಿರುವ ರೈತರಿಗೆ ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದೆ. ಜೊತೆಗೆ ರಾಜಕೀಯ ವ್ಯಕ್ತಿಗಳ ಒತ್ತಡವೂ ಕಿರಿಯ ಅಧಿಕಾರಿಗಳ ಮೇಲೆ ಇರಬಹುದು ನಮ್ಮ ಗಮನಕ್ಕೆ ಬಂದಿಲ್ಲ ಕೂಡಲೇ ರೈತರಿಗೆ ಅವಶ್ಯಕತೆ ಇರುವ ಟಾರ್ಪಲ್‌ಗಳನ್ನು ವಿತರಣೆ ಮಾಡುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಗೀರೀಶ್, ಪುತ್ತೇರಿ ರಾಜು ರ‍್ನಹಳ್ಳಿ ಆಂಜಿನಪ್ಪ,.ಶೈಲಜಾ ರತ್ನಮ್ಮ ವೆಂಕಟಮ್ಮ ಗೌರಮ್ಮ ಕಂಪಮ್ಮ ಚೌಡಮ್ಮ ಬಾಗ್ಯಮ ಮುಂತಾದವರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

20 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago