ರೈತರ ಶಕ್ತಿಯೇ ದೇಶದ ಶಕ್ತಿ: ರೈತರು, ಯುವಕರ ಪರ ಕಾಂಗ್ರೆಸ್ ಪಕ್ಷ ಕೆಲಸ ಮಾಡಲಿದೆ- ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

ರೈತರ ಶಕ್ತಿಯೇ ದೇಶದ ಶಕ್ತಿ, ರೈತರು, ಯುವಕರ ಪರ ಕಾಂಗ್ರೆಸ್ ಪಕ್ಷ ಕೆಲಸ ಮಾಡಲಿದೆ. ನಿಮ್ಮ ನಿರಂತರ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮನವಿ ಮಾಡಿದರು.

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಮತಯಾಚನೆ ಮಾಡಿ, ಕಾರ್ಯಕರ್ತರು, ಮತದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಹತ್ತು ವರ್ಷಗಳಿಂದ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ. ಇವರಿಂದ ರೈತರಿಗೆ, ಯುವಕರಿಗೆ ಯಾವ ಪ್ರಯೋಜನ ಆಗಿಲ್ಲ, ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿ ಮಾಡಿಲ್ಲ, ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ, ಅಪರಾಧ ಚಟುವಟಿಕೆ ಹೆಚ್ಚಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಈ‌ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲಾಗುವುದು, ಯುವಕರು, ಮಹಿಳೆಯರಿಗೆ 1 ಲಕ್ಷ ಹಣವನ್ನ ಖಾತೆಗೆ ಹಾಕಲಾಗುವುದು, ಕಾಂಗ್ರೆಸ್ ಪಕ್ಷ ಎಂದರೆ ನುಡಿದಂತೆ ನಡೆಯುವ ಪಕ್ಷ ಎಂದು ಹೇಳಿದರು.

ಬಿಜೆಪಿಗೆ ಬಹುಮತ ಬಂದರೆ ಸಂವಿಧಾನ ಬದಲಾವಣೆ ಮಾಡಲಾಗುವುದು ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ರೈತರ ಸಮಸ್ಯೆಗಳು, ಹೋರಾಟಗಳಿಗೆ ಸ್ಪಂದಿಸಿದೇ ಬಿಜೆಪಿ ಸರ್ಕಾರ ಬೇಜವಾಬ್ದಾರಿ ಮೆರೆಯಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನ ರಕ್ಷಣೆ ಮಾಡಲಾಗುವುದು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿ ಜನ‌ಪರ ಆಡಳಿತ ನಡೆಸುತ್ತಿದೆ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿ ಮತದಾರರಲ್ಲಿ ಕೋರಿದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ರಕ್ಷಾ ರಾಮಯ್ಯ ನವರ ಕುಟುಂಬ ಸಮಾಜ‌ಸೇವೆ ಮಾಡುತ್ತಾ ಬಂದಿದೆ. ಸರಳ ಸಜ್ಜನಿಕೆ ಯುವಕನಿಗೆ ಈ ಬಾರಿ ನೀವು ಆರ್ಶೀವಾದ ಮಾಡಬೇಕು. ಪ್ರತಿ ಬೂತ್ ನಲ್ಲಿ 100 ವೋಟ್ ಹೆಚ್ಚಿಗೆ ಬರಬೇಕು, ತೂಬಗೆರೆ ಹೋಬಳಿಯಿಂದ 10 ಸಾವಿರ ಲೀಡ್ ಕೊಡಬೇಕು ಎಂದು ಮನವಿ ಮಾಡಿದರು.

ನನಗೆ ಆರ್ಶೀವಾದ ಮಾಡಿದಾಗೆ ರಕ್ಷಾ ರಾಮಯ್ಯನವರಿಗೂ ಆಶೀರ್ವಾದ ಮಾಡಬೇಕು, ಜಿಲ್ಲೆಯ ಕೆರೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ತರುವೆ, ರಸ್ತೆ ಅಭಿವೃದ್ಧಿ, ಶಾಲಾ ಕಟ್ಟಡ ದುರಸ್ತಿ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಲೋಕಸಭೆ ಚುನಾವಣೆ ಮುಗಿದ ಬಳಿಕ ಕೈಗೊಳ್ಳಲಾಗುವುದು ಎಂದರು.

ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ, ಕೆಪಿಸಿಸಿ ಸದಸ್ಯ ಎಸ್. ಆರ್.ಮುನಿರಾಜ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್.ಅರವಿಂದ್, ಶ್ರೀಧರ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವಿಸಿದ್ದಪ್ಪ, ಕಾಂಗ್ರೆಸ್ ಮುಖಂಡ ಕಿಟ್ಟಿ, ವೆಂಕಟರಮಣಪ್ಪ, ಮುರಳಿ, ತೂಬಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ನಂಜಮ್ಮ ನರಸಿಂಹಮೂರ್ತಿ, ಮಾಜಿ ಅಧ್ಯಕ್ಷ ಟಿ.ವಿ. ವೆಂಕಟೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

19 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

23 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago