ರೈತರ ಶಕ್ತಿಯೇ ದೇಶದ ಶಕ್ತಿ: ರೈತರು, ಯುವಕರ ಪರ ಕಾಂಗ್ರೆಸ್ ಪಕ್ಷ ಕೆಲಸ ಮಾಡಲಿದೆ- ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

ರೈತರ ಶಕ್ತಿಯೇ ದೇಶದ ಶಕ್ತಿ, ರೈತರು, ಯುವಕರ ಪರ ಕಾಂಗ್ರೆಸ್ ಪಕ್ಷ ಕೆಲಸ ಮಾಡಲಿದೆ. ನಿಮ್ಮ ನಿರಂತರ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಮನವಿ ಮಾಡಿದರು.

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಮತಯಾಚನೆ ಮಾಡಿ, ಕಾರ್ಯಕರ್ತರು, ಮತದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರದಲ್ಲಿ ಹತ್ತು ವರ್ಷಗಳಿಂದ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ. ಇವರಿಂದ ರೈತರಿಗೆ, ಯುವಕರಿಗೆ ಯಾವ ಪ್ರಯೋಜನ ಆಗಿಲ್ಲ, ಯುವಕ, ಯುವತಿಯರಿಗೆ ಉದ್ಯೋಗ ಸೃಷ್ಟಿ ಮಾಡಿಲ್ಲ, ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ, ಅಪರಾಧ ಚಟುವಟಿಕೆ ಹೆಚ್ಚಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಈ‌ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲಾಗುವುದು, ಯುವಕರು, ಮಹಿಳೆಯರಿಗೆ 1 ಲಕ್ಷ ಹಣವನ್ನ ಖಾತೆಗೆ ಹಾಕಲಾಗುವುದು, ಕಾಂಗ್ರೆಸ್ ಪಕ್ಷ ಎಂದರೆ ನುಡಿದಂತೆ ನಡೆಯುವ ಪಕ್ಷ ಎಂದು ಹೇಳಿದರು.

ಬಿಜೆಪಿಗೆ ಬಹುಮತ ಬಂದರೆ ಸಂವಿಧಾನ ಬದಲಾವಣೆ ಮಾಡಲಾಗುವುದು ಎಂದು ಬಿಜೆಪಿಯ ಕೆಲ ನಾಯಕರು ಹೇಳಿದ್ದಾರೆ. ರೈತರ ಸಮಸ್ಯೆಗಳು, ಹೋರಾಟಗಳಿಗೆ ಸ್ಪಂದಿಸಿದೇ ಬಿಜೆಪಿ ಸರ್ಕಾರ ಬೇಜವಾಬ್ದಾರಿ ಮೆರೆಯಲಾಗುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನ ರಕ್ಷಣೆ ಮಾಡಲಾಗುವುದು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿ ಜನ‌ಪರ ಆಡಳಿತ ನಡೆಸುತ್ತಿದೆ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕಾಗಿ ಮತದಾರರಲ್ಲಿ ಕೋರಿದರು.

ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ರಕ್ಷಾ ರಾಮಯ್ಯ ನವರ ಕುಟುಂಬ ಸಮಾಜ‌ಸೇವೆ ಮಾಡುತ್ತಾ ಬಂದಿದೆ. ಸರಳ ಸಜ್ಜನಿಕೆ ಯುವಕನಿಗೆ ಈ ಬಾರಿ ನೀವು ಆರ್ಶೀವಾದ ಮಾಡಬೇಕು. ಪ್ರತಿ ಬೂತ್ ನಲ್ಲಿ 100 ವೋಟ್ ಹೆಚ್ಚಿಗೆ ಬರಬೇಕು, ತೂಬಗೆರೆ ಹೋಬಳಿಯಿಂದ 10 ಸಾವಿರ ಲೀಡ್ ಕೊಡಬೇಕು ಎಂದು ಮನವಿ ಮಾಡಿದರು.

ನನಗೆ ಆರ್ಶೀವಾದ ಮಾಡಿದಾಗೆ ರಕ್ಷಾ ರಾಮಯ್ಯನವರಿಗೂ ಆಶೀರ್ವಾದ ಮಾಡಬೇಕು, ಜಿಲ್ಲೆಯ ಕೆರೆಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನ ತರುವೆ, ರಸ್ತೆ ಅಭಿವೃದ್ಧಿ, ಶಾಲಾ ಕಟ್ಟಡ ದುರಸ್ತಿ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಲೋಕಸಭೆ ಚುನಾವಣೆ ಮುಗಿದ ಬಳಿಕ ಕೈಗೊಳ್ಳಲಾಗುವುದು ಎಂದರು.

ಈ ವೇಳೆ ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಪ್ಪ, ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣ, ಕೆಪಿಸಿಸಿ ಸದಸ್ಯ ಎಸ್. ಆರ್.ಮುನಿರಾಜ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್.ಅರವಿಂದ್, ಶ್ರೀಧರ್, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರವಿಸಿದ್ದಪ್ಪ, ಕಾಂಗ್ರೆಸ್ ಮುಖಂಡ ಕಿಟ್ಟಿ, ವೆಂಕಟರಮಣಪ್ಪ, ಮುರಳಿ, ತೂಬಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ನಂಜಮ್ಮ ನರಸಿಂಹಮೂರ್ತಿ, ಮಾಜಿ ಅಧ್ಯಕ್ಷ ಟಿ.ವಿ. ವೆಂಕಟೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

45 minutes ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

12 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

20 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago