ರೈತರ ಸಮಸ್ಯೆ ಆಲಿಸದ ತಹಶೀಲ್ದಾರ್: ಸಭೆಯಿಂದ ಹೊರ ನಡೆದು ರೈತರ ಕೆಂಗಣ್ಣಿಗೆ ಗುರಿಯಾದ ತಹಶೀಲ್ದಾರ್: ತಹಶೀಲ್ದಾರ್ ನಡೆ ಖಂಡಿಸಿ ದಿಕ್ಕಾರ ಕೂಗಿದ ರೈತರು

ರೈತರ ಸಮಸ್ಯೆಗಳನ್ನು ಆಲಿಸಿ ಉತ್ತರ ಕೊಡದೇ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊರ ನಡೆದ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಕುಂದು ಕೊರತೆಗಳ ಸಭೆಯಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ್ ಅವರ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಂದಾಯ ಇಲಾಖೆ, ಯೂರಿಯಾ, ರಸಗೊಬ್ಬರ ಸೇರಿದಂತೆ ಇತರೆ ಸಮಸ್ಯೆಗಳನ್ನು ಆಲಿಸುವ ಸಭೆಯನ್ನು ಏರ್ಪಡಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ.

ಈ ಹಿನ್ನೆಲೆ ಸೋಮವಾರ ತಹಶೀಲ್ದಾರ್ ನೇತೃತ್ವದಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಇನ್ನೂ ಹತ್ತು ಹಲವಾರು ಸಮಸ್ಯೆಗಳು ಇದ್ದು ಅವುಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ತಹಶೀಲ್ದಾರ್ ನೀಡಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.

ಒಂದು ವಾರದೊಳಗೆ ಮತ್ತೆ ಸಭೆ ಕರೆದು ರೈತರ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡದಿದ್ದರೆ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯುವ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಡಾ.ಶ್ರೀನಿವಾಸ್, ಸುಲೋಚನಮ್ಮ, ಮುತ್ತೇಗೌಡ, ಸತೀಶ್ ಇದ್ದರು

Ramesh Babu

Journalist

Recent Posts

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

48 minutes ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

5 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

5 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

6 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

16 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

20 hours ago