ರೈತರ ಸಮಸ್ಯೆ ಆಲಿಸದ ತಹಶೀಲ್ದಾರ್: ಸಭೆಯಿಂದ ಹೊರ ನಡೆದು ರೈತರ ಕೆಂಗಣ್ಣಿಗೆ ಗುರಿಯಾದ ತಹಶೀಲ್ದಾರ್: ತಹಶೀಲ್ದಾರ್ ನಡೆ ಖಂಡಿಸಿ ದಿಕ್ಕಾರ ಕೂಗಿದ ರೈತರು

ರೈತರ ಸಮಸ್ಯೆಗಳನ್ನು ಆಲಿಸಿ ಉತ್ತರ ಕೊಡದೇ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊರ ನಡೆದ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಕುಂದು ಕೊರತೆಗಳ ಸಭೆಯಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ್ ಅವರ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಂದಾಯ ಇಲಾಖೆ, ಯೂರಿಯಾ, ರಸಗೊಬ್ಬರ ಸೇರಿದಂತೆ ಇತರೆ ಸಮಸ್ಯೆಗಳನ್ನು ಆಲಿಸುವ ಸಭೆಯನ್ನು ಏರ್ಪಡಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ.

ಈ ಹಿನ್ನೆಲೆ ಸೋಮವಾರ ತಹಶೀಲ್ದಾರ್ ನೇತೃತ್ವದಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಇನ್ನೂ ಹತ್ತು ಹಲವಾರು ಸಮಸ್ಯೆಗಳು ಇದ್ದು ಅವುಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ತಹಶೀಲ್ದಾರ್ ನೀಡಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.

ಒಂದು ವಾರದೊಳಗೆ ಮತ್ತೆ ಸಭೆ ಕರೆದು ರೈತರ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡದಿದ್ದರೆ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯುವ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಡಾ.ಶ್ರೀನಿವಾಸ್, ಸುಲೋಚನಮ್ಮ, ಮುತ್ತೇಗೌಡ, ಸತೀಶ್ ಇದ್ದರು

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

12 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

16 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

16 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

24 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago