ರೈತರ ಸಮಸ್ಯೆಗಳನ್ನು ಆಲಿಸಿ ಉತ್ತರ ಕೊಡದೇ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊರ ನಡೆದ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಕುಂದು ಕೊರತೆಗಳ ಸಭೆಯಲ್ಲಿ ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ್ ಅವರ ನಡೆ ಖಂಡಿಸಿ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕಂದಾಯ ಇಲಾಖೆ, ಯೂರಿಯಾ, ರಸಗೊಬ್ಬರ ಸೇರಿದಂತೆ ಇತರೆ ಸಮಸ್ಯೆಗಳನ್ನು ಆಲಿಸುವ ಸಭೆಯನ್ನು ಏರ್ಪಡಿಸಬೇಕು ಎಂದು ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ.
ಈ ಹಿನ್ನೆಲೆ ಸೋಮವಾರ ತಹಶೀಲ್ದಾರ್ ನೇತೃತ್ವದಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಇನ್ನೂ ಹತ್ತು ಹಲವಾರು ಸಮಸ್ಯೆಗಳು ಇದ್ದು ಅವುಗಳನ್ನು ಆಲಿಸಿ ಪರಿಹಾರ ಒದಗಿಸುವ ಭರವಸೆ ತಹಶೀಲ್ದಾರ್ ನೀಡಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು.
ಒಂದು ವಾರದೊಳಗೆ ಮತ್ತೆ ಸಭೆ ಕರೆದು ರೈತರ ಸಮಸ್ಯೆ ಆಲಿಸಿ ಪರಿಹರಿಸುವ ಭರವಸೆ ನೀಡದಿದ್ದರೆ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯುವ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ, ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಡಾ.ಶ್ರೀನಿವಾಸ್, ಸುಲೋಚನಮ್ಮ, ಮುತ್ತೇಗೌಡ, ಸತೀಶ್ ಇದ್ದರು
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…