ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಇಂದಿಗೂ ರೈತರ ಬದುಕು ಹಸನಾಗಿಲ್ಲ. ರೈತರು ಬೆಳೆದಿರುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗದೇ ಹೋರಾಟದ ಹಾದಿ ತುಳಿಯಬೇಕಾದ ಸನ್ನಿವೇಶ ಸೃಷ್ಟಿಯಾಗಿರುವುದು ಬೇಸರ ಸಂಗತಿ, ರೈತರ ಸಾಧನೆಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ಗೌಡ ಹೇಳಿದರು.
ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನ ಸಭಾಂಗಣದಲ್ಲಿ ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೈತರಿಗೆ ಪ್ರೋತ್ಸಾಹ ಸಿಗಲಿ ರೈತರು ಬೆಳೆಗಳನ್ನು ಬೆಳೆಯಲು ಸಾಕಷ್ಟು ಶ್ರಮವಹಿಸುತ್ತಾರೆ. ಪೆಟ್ರೋಲ್ , ಡಿಸೇಲ್ ಹಾಕಿಸಿದರೆ ತಕ್ಷಣ ಹಣ ಸಿಗುತ್ತದೆ. ಆದರೆ ರೈತರು ರಾಗಿ ಹಾಕಿದರೆ ಹಣ ಸಿಗಲು ವರ್ಷ ಕಾಯಬೇಕಾಗುತ್ತದೆ. ಜಿಲ್ಲೆಯಲ್ಲಿ ಶೇ.15- 20ರಷ್ಟು ರೈತರು ಮಾತ್ರ ಉಳಿದುಕೊಂಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೆ ಏರುತ್ತಿದೆ. ಆದರೆ, ಹಾಲಿನ ಬೆಲೆ ಮಾತ್ರ ಏರಿಕೆಯಾಗಿಲ್ಲ. ರೈತರಿಗೆ ಸಿಗಬೇಕಾದ ಪ್ರೋತ್ಸಾಹಧನವೂ ವಿಳಂಬವಾಗಿದೆ. ವಿಜಯಕರ್ನಾಟಕ ರೈತರನ್ನು ಗುರುತಿಸುತ್ತಿರುವುದಕ್ಕೆ ಧನ್ಯವಾದಗಳು. ರೈತರ ಸಾಧನೆಗಳಿಗೆ ಮತ್ತಷ್ಟು ಪ್ರೋತ್ಸಾಹ ಸಿಗುವಂತಾಗಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಕೆ.ಎನ್. ಅನುರಾಧ ಮಾತನಾಡಿ, ರೈತರ ಕೃಷಿ ಸಾಧನೆ, ಶ್ರಮದ ಮುಂದೆ ನಮ್ಮ ಸನ್ಮಾನಗಳೆಲ್ಲ ಚಿಕ್ಕದು. ಇಂದು ಬರ ಸೇರಿದಂತೆ ನಾನಾ ಕಾರಣಗಳಿಂದ ರೈತರು ಕೃಷಿ ಕಾರ್ಯದಿಂದ ದೂರು ಉಳಿಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಕೂಡ ಸಾಕಷ್ಟು ಶ್ರಮವಹಿಸಿ ಹೊಲದಲ್ಲಿ ದುಡಿದು ಕೃಷಿಯಲ್ಲಿ ಸಾಧನೆ ಮಾಡಿರುವುದು ಹೆಮ್ಮೆ ವಿಚಾರ ಎಂದರು.
ಮೌಲ್ಯವರ್ಧನೆಗೂ ಇಲಾಖೆ ನೆರವು ಕೃಷಿ ಇಲಾಖೆಯಲ್ಲಿ ರೈತರಿಗೆ ಸಾಕಷ್ಟು ಸೌಲಭ್ಯಗಳಿವೆ. ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ, ಮಣ್ಣಿನ ಸವಕಳಿತಡೆಯಲು ಬದು ನಿರ್ಮಾಣ ಮಾಡಬೇಕು ಇದಕ್ಕೂ ಸಹಾಯಧನ ನೀಡಲಾಗುವುದು. ನೀರಿನ ಸದ್ಬಲಕೆ ರೈತರು ಮಾಡಬೇಕು. ಕೃಷಿಯಲ್ಲಿ ಕೊಟ್ಟಿಗೆ ಗೊಬ್ಬರ ಬಳಸಿ, ನಂತರ ರಾಸಾಯನಿಕ ಗೊಬ್ಬರ ಬಳಸಬೇಕು. ಮೌಲ್ಯವರ್ಧನೆ ಮಾಡಲು ಕೂಡ ಸಹಾಯಧನ ನೀಡಲಾಗುವುದು. ಫ್ರೂಟ್ಸ್ ಐಡಿ ಮೂಲಕ ರೇಷ್ಮೆ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಸವಲತ್ತು ಪಡೆಯಬಹುದಾಗಿದೆ. ಸೂಪರ್ ಸ್ಟಾರ್ ರೈತ ಕಾರ್ಯಕ್ರಮ ಶ್ರೇಷ್ಠ ಕಾರ್ಯಕ್ರಮವಾಗಿದೆ. ರೈತರನ್ನು ಗುರುತಿಸಿ ಸನ್ಮಾನಿಸುವುದರಿಂದ ಬೇರೊಬ್ಬರಿಗೆ ಪ್ರೇರಣೆ ಆಗಲಿದೆ. ಹಾಗೂ ಕೃಷಿ ಇಲಾಖೆ ನಾನಾ ಬಗೆಯ ಯೋಜನೆಗಳನ್ನು ಕೃಷಿ ಇಲಾಖೆ ಉಪನಿರ್ದೇಶಕ ಗಾಯತ್ರಿ ರೈತರಿಗೆ ತಿಳಿಸಿದರು.
ರೇಷ್ಮೆ ಇಲಾಖೆ ಉಪನಿರ್ದೇಶಕ ಪ್ರಭಾಕರ್ ರೈತರಿಗೆ ಹಲವಾರು ರೇಷ್ಮೆ ಇಲಾಖೆಯಲ್ಲಿ ದೊರೆಯುವ ಇಲಾಖೆ ಸೌಲಭ್ಯಗಳ ಬಗ್ಗೆ ವಿವರಿಸಿದರು. ಮಾರುಕಟ್ಟೆ, ಪಾರದರ್ಶಕ ಧಾರಣೆ ತೂಕ, ಕಳೆದ ಐದಾರು ವರ್ಷಗಳಿಂದ ಮಾರುಕಟ್ಟೆ ಸುಧಾರಣೆ ಆಗಿದೆ. ಚಳಿ ಇರುವ ಪ್ರದೇಶಗಳಲ್ಲಿ ರೇಷ್ಮೆಗೆ ಬಹಳ ಬೇಡಿಕೆ ಇದೆ. ಉತ್ಪಾದನೆ ಕಡಿಮೆ ಇದೆ. ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ ರೇಷ್ಮೆ ಬೆಳೆ ಬಗ್ಗೆ ಮಾಹಿತಿ ನೀಡಲು ಇಲಾಖೆ ಅಧಿಕಾರಿಗಳು ಲಭ್ಯವಿದ್ದಾರೆ ಎಂದು ಮಾಹಿತಿ ನೀಡಿದರು.
ಈ ವೇಳೆ ರೈತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…