ರೈತರ ಸಾಲಮನ್ನಾದಿಂದ ದೇಶಕ್ಕೆ ಯಾವುದೇ ಉಪಯೋಗವಿಲ್ಲವೆಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿರುವುದನ್ನು ಖಂಡಿಸಿ ಮತ್ತು ಕೂಡಲೇ ದೇಶದ ರೈತರಿಗೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ನಗರದ ತಾಲ್ಲೂಕು ಕಛೇರಿ ಮುಂದೆ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರ್ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಮಾತನಾಡಿ, ದೇಶದ ಬೆನ್ನೆಲುಬಾದ ರೈತರ ಕುರಿತು ಕೀಳಾಗಿ ಮಾತನಾಡಿರುವುದು ಸಂಸದ ತೇಜಸ್ವಿ ಸೂರ್ಯ ಅವರಿಗೆ ಶೋಭೆ ತರುವುದಿಲ್ಲ. ರೈತರು ಸಾಲಸೋಲ ಮಾಡಿ ಬೆಳೆದ ಬೆಳೆಯನ್ನು ಅರ್ಧ ಬೆಲೆಗೆ ಮಾರಾಟ ಮಾಡಿ, ದೇಶದ 140 ಕೋಟಿ ಜನರ ಹೊಟ್ಟೆ ತುಂಬಿಸುತ್ತಿದ್ದಾರೆ. ರೈತರ ಸಾಲಮನ್ನಾ ವಿಚಾರವಾಗಿ ಹಿಂದೆ-ಮುಂದೆ ಯೋಚಿಸದೇ ಮಾತನಾಡುವ ಜನಪ್ರತಿನಿಧಿಗಳು ರೈತರ ಬೆಳೆಗೆ ಸೂಕ್ತ ಬೆಲೆ ಕೊಡಿಸಲು ಆಗುತ್ತಿಲ್ಲವೇಕೆ ಎಂದು ಪ್ರಶ್ನಿಸಿದರು.
ಬಿಜೆಪಿ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಸರಿಯಾಗಿ ಈಡೇರಿಸದೇ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳನ್ನು ತಮ್ಮದೆಂದು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿ ಸಂಸದರಿಗೆ ಇದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಬೆಳೆಗೆ ಬೆಂಬಲ ಬೆಲೆ ಕೊಡದ ಸರ್ಕಾರಗಳು, ರೈತರನ್ನು ಸಾಲದ ಸುಳಿಗೆ ನೂಕುತ್ತಿವೆ. ರೈತರ ಸಂಕಷ್ಟ ಅರಿಯದ ಒಬ್ಬ ಜವಾಬ್ದಾರಿಯುತ ಸಂಸದ ಆಡಿರುವ ಮಾತು ಖಂಡನೀಯ. ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ತಾಲ್ಲೂಕು ಅಧ್ಯಕ್ಷರು ಹನುಮೇಗೌಡ,ರೈತ ಮುಖಂಡರು ಮುನಿನಾರಾಯಣಪ್ಪ, ಕೆಂಪೇಗೌಡ, ಮಹದೇವಣ್ಣ ಇತರರು ಇದ್ದರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…