ರೈತರ ಸಾಲಮನ್ನಾದಿಂದ ದೇಶಕ್ಕೆ ಯಾವುದೇ ಉಪಯೋಗವಿಲ್ಲವೆಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿರುವುದನ್ನು ಖಂಡಿಸಿ ಮತ್ತು ಕೂಡಲೇ ದೇಶದ ರೈತರಿಗೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ನಗರದ ತಾಲ್ಲೂಕು ಕಛೇರಿ ಮುಂದೆ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರ್ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಈ ವೇಳೆ ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಮಾತನಾಡಿ, ದೇಶದ ಬೆನ್ನೆಲುಬಾದ ರೈತರ ಕುರಿತು ಕೀಳಾಗಿ ಮಾತನಾಡಿರುವುದು ಸಂಸದ ತೇಜಸ್ವಿ ಸೂರ್ಯ ಅವರಿಗೆ ಶೋಭೆ ತರುವುದಿಲ್ಲ. ರೈತರು ಸಾಲಸೋಲ ಮಾಡಿ ಬೆಳೆದ ಬೆಳೆಯನ್ನು ಅರ್ಧ ಬೆಲೆಗೆ ಮಾರಾಟ ಮಾಡಿ, ದೇಶದ 140 ಕೋಟಿ ಜನರ ಹೊಟ್ಟೆ ತುಂಬಿಸುತ್ತಿದ್ದಾರೆ. ರೈತರ ಸಾಲಮನ್ನಾ ವಿಚಾರವಾಗಿ ಹಿಂದೆ-ಮುಂದೆ ಯೋಚಿಸದೇ ಮಾತನಾಡುವ ಜನಪ್ರತಿನಿಧಿಗಳು ರೈತರ ಬೆಳೆಗೆ ಸೂಕ್ತ ಬೆಲೆ ಕೊಡಿಸಲು ಆಗುತ್ತಿಲ್ಲವೇಕೆ ಎಂದು ಪ್ರಶ್ನಿಸಿದರು.
ಬಿಜೆಪಿ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಸರಿಯಾಗಿ ಈಡೇರಿಸದೇ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸಗಳನ್ನು ತಮ್ಮದೆಂದು ಹೇಳಿಕೊಂಡು ತಿರುಗುತ್ತಿರುವ ಬಿಜೆಪಿ ಸಂಸದರಿಗೆ ಇದು ತರವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಬೆಳೆಗೆ ಬೆಂಬಲ ಬೆಲೆ ಕೊಡದ ಸರ್ಕಾರಗಳು, ರೈತರನ್ನು ಸಾಲದ ಸುಳಿಗೆ ನೂಕುತ್ತಿವೆ. ರೈತರ ಸಂಕಷ್ಟ ಅರಿಯದ ಒಬ್ಬ ಜವಾಬ್ದಾರಿಯುತ ಸಂಸದ ಆಡಿರುವ ಮಾತು ಖಂಡನೀಯ. ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ತಾಲ್ಲೂಕು ಅಧ್ಯಕ್ಷರು ಹನುಮೇಗೌಡ,ರೈತ ಮುಖಂಡರು ಮುನಿನಾರಾಯಣಪ್ಪ, ಕೆಂಪೇಗೌಡ, ಮಹದೇವಣ್ಣ ಇತರರು ಇದ್ದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…