ರೈತರ ಹಿತಕ್ಕಾಗಿ ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ- ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ- ಶಾಸಕ ಧೀರಜ್ ಮುನಿರಾಜ್ ಹೇಳಿಕೆ

ನೀರಾವರಿ, ಬೆಳೆಪರಿಹಾರ, ಹಾಲಿನ ಪ್ರೋತ್ಸಾಹ ಧನ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ದೊಡ್ಡಬೆಳವಂಗಲ, ಸಾಸಲು ಹೋಬಳಿಯಲ್ಲಿ ಕಸದ ಸಮಸ್ಯೆ ಮಿತಿಮೀರಿ ಹೋಗಿದೆ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ರೈತರ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಕಳೆದ ಸದನದಲ್ಲಿ ನಾನು ಸಚಿವ ಡಾ.ಜಿ. ಲಪರಮೇಶ್ವರ್ ಬಳಿ ಮನವಿ ಮಾಡಿದ್ದೇನೆ. ಎಂ. ಎಸ್.ಜಿ.ಪಿ ಕಸ ವಿಲೇವಾರಿ ಘಟಕ 2014ರಿಂದ ಕೆಲಸ ಮಾಡ್ತಿದೆ. ಅದರ ಒಂದು ಕಿಲೋಮೀಟರ್ ದೂರದಲ್ಲಿ ಎತ್ತಿನ ಹೊಳೆ ಡ್ಯಾಮ್ ಕಟ್ಟುತ್ತಿದ್ದಾರೆ. ಆ ಡ್ಯಾಮ್ ನೀರಿಗೆ ಕೊಳಚೆ ನೀರು ಸೇರುತ್ತೆ. ಇದರಿಂದ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತೆ ಎಂದು ಹೇಳಿದ್ದೇನೆ. ಆದರೂ ಅವರು ಮಾಡೇ ಮಾಡ್ತೀನಿ ಅಂತ ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ರು.

ಇನ್ನೂ ಕೆಐಎಡಿಬಿ ಭೂ ಸ್ವಾಧೀನ ಕುರಿತು ಮಾತನಾಡಿದ ಅವರು, ಫಾಕ್ಸ್ ಕಾನ್, ಕ್ವೀನ್ ಸಿಟಿ ಅಂತ ಸಾವಿರಾರು ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಿತ್ತಿದ್ದಾರೆ. ಹುಲಿಕುಂಟೆ ಬಳಿ ಕ್ವೀನ್ ಸಿಟಿಗಾಗಿ 5000 ಎಕರೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮೂರು ಮೂರುವರೆ ಸಾವಿರ ಎಕರೆ ಹಾಗೂ ನೆಲಮಂಗಲದಲ್ಲಿ ಒಂದು ಒಂದೂವರೆ ಸಾವಿರ ಎಕರೆ ಜಮೀನು ಸ್ವಾಧೀನ. ಅಲ್ಲಿ ಯಾವುದೇ ರೀತಿಯ ಪ್ಲಾನಿಂಗ್ ಇಲ್ಲದೆ ಕೆಐಎಡಿಬಿ ಭೂ ಸ್ವಾಧೀನ ಪಡಿಸಿಕೊಂಡಿದೆ. ಕೆಐಎಡಿಬಿ ವಿರುದ್ಧವಾಗಿ ಪ್ರತಿ ಸದನದಲ್ಲಿ ಪ್ರಶ್ನೆ ಮಾಡುತ್ತಾ ಬಂದಿದ್ದೇನೆ. ಖಂಡಿತವಾಗಿ ಇದು ಕಡೆ ಅವಕಾಶ ನೀಡ್ತೀದ್ದೇವೆ. ಇನ್ನ ನಮ್ಮ ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ. ಯಾವ ನಮಗೆ ಫ್ಯಾಕ್ಟರಿ ಅವಶ್ಯಕತೆ ಇಲ್ಲ. ನಮ್ಮ ಜನಕ್ಕೆ ಇಷ್ಟೇ ಕೆಲಸಗಳು ಸಾಕು. ಇನ್ನ ಹೆಚ್ಚಿನ ಕಾರ್ಖಾನೆಗಳು ಬೇಡ, ಭೂ ಸ್ವಾಧೀನ ಪಡಿಸಿಕೊಳ್ಳೋದೂ ಬೇಡ. ಸದನದಲ್ಲಿ ಎದ್ದು ನಿಂತು ಹೇಳಿದ್ದೆ. ಸರ್ ದಯವಿಟ್ಟು ಇನ್ಮುಂದಕ್ಕೆ ನಮಗೆ ಯಾವ ಕೈಗಾರಿಕೆಗಳು ಬೇಡ ಅಂತಾ. ಮುಂದೆ ಹೋಗಿ ಸಿರಾ ಕಡೆ ಹೋಗಿ, ಮಾಲೂರು ಕಡೆ ಹೋಗಿ ಬರಡು ಭೂಮಿ ಇರುವ ಕಡೆ ಹೋಗ್ರಿ. ಫಲವತ್ತಾದ ಭೂ ಸ್ವಾಧೀನ ಪಡಿಸಿಕೊಂಡು ರೈತರ ಜೀವನ ಹಾಳು ಮಾಡಬೇಡಿ ಎಂದು ಕೆಐಎಡಿಬಿಗೆ ಈ ಮೊದಲೇ ಆಗ್ರಹ ಮಾಡಿದ್ದೇನೆ. ಈ ಬಾರಿ ಸದನದ್ಲಲೂ ತಿಳಿಸುವಂತ ಕೆಲಸ ಮಾಡ್ತೀನಿ ಎಂದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

7 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

8 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

15 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

15 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

21 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago