ನೀರಾವರಿ, ಬೆಳೆಪರಿಹಾರ, ಹಾಲಿನ ಪ್ರೋತ್ಸಾಹ ಧನ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ದೊಡ್ಡಬೆಳವಂಗಲ, ಸಾಸಲು ಹೋಬಳಿಯಲ್ಲಿ ಕಸದ ಸಮಸ್ಯೆ ಮಿತಿಮೀರಿ ಹೋಗಿದೆ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ರೈತರ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಕಳೆದ ಸದನದಲ್ಲಿ ನಾನು ಸಚಿವ ಡಾ.ಜಿ. ಲಪರಮೇಶ್ವರ್ ಬಳಿ ಮನವಿ ಮಾಡಿದ್ದೇನೆ. ಎಂ. ಎಸ್.ಜಿ.ಪಿ ಕಸ ವಿಲೇವಾರಿ ಘಟಕ 2014ರಿಂದ ಕೆಲಸ ಮಾಡ್ತಿದೆ. ಅದರ ಒಂದು ಕಿಲೋಮೀಟರ್ ದೂರದಲ್ಲಿ ಎತ್ತಿನ ಹೊಳೆ ಡ್ಯಾಮ್ ಕಟ್ಟುತ್ತಿದ್ದಾರೆ. ಆ ಡ್ಯಾಮ್ ನೀರಿಗೆ ಕೊಳಚೆ ನೀರು ಸೇರುತ್ತೆ. ಇದರಿಂದ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತೆ ಎಂದು ಹೇಳಿದ್ದೇನೆ. ಆದರೂ ಅವರು ಮಾಡೇ ಮಾಡ್ತೀನಿ ಅಂತ ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ರು.
ಇನ್ನೂ ಕೆಐಎಡಿಬಿ ಭೂ ಸ್ವಾಧೀನ ಕುರಿತು ಮಾತನಾಡಿದ ಅವರು, ಫಾಕ್ಸ್ ಕಾನ್, ಕ್ವೀನ್ ಸಿಟಿ ಅಂತ ಸಾವಿರಾರು ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಿತ್ತಿದ್ದಾರೆ. ಹುಲಿಕುಂಟೆ ಬಳಿ ಕ್ವೀನ್ ಸಿಟಿಗಾಗಿ 5000 ಎಕರೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮೂರು ಮೂರುವರೆ ಸಾವಿರ ಎಕರೆ ಹಾಗೂ ನೆಲಮಂಗಲದಲ್ಲಿ ಒಂದು ಒಂದೂವರೆ ಸಾವಿರ ಎಕರೆ ಜಮೀನು ಸ್ವಾಧೀನ. ಅಲ್ಲಿ ಯಾವುದೇ ರೀತಿಯ ಪ್ಲಾನಿಂಗ್ ಇಲ್ಲದೆ ಕೆಐಎಡಿಬಿ ಭೂ ಸ್ವಾಧೀನ ಪಡಿಸಿಕೊಂಡಿದೆ. ಕೆಐಎಡಿಬಿ ವಿರುದ್ಧವಾಗಿ ಪ್ರತಿ ಸದನದಲ್ಲಿ ಪ್ರಶ್ನೆ ಮಾಡುತ್ತಾ ಬಂದಿದ್ದೇನೆ. ಖಂಡಿತವಾಗಿ ಇದು ಕಡೆ ಅವಕಾಶ ನೀಡ್ತೀದ್ದೇವೆ. ಇನ್ನ ನಮ್ಮ ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ. ಯಾವ ನಮಗೆ ಫ್ಯಾಕ್ಟರಿ ಅವಶ್ಯಕತೆ ಇಲ್ಲ. ನಮ್ಮ ಜನಕ್ಕೆ ಇಷ್ಟೇ ಕೆಲಸಗಳು ಸಾಕು. ಇನ್ನ ಹೆಚ್ಚಿನ ಕಾರ್ಖಾನೆಗಳು ಬೇಡ, ಭೂ ಸ್ವಾಧೀನ ಪಡಿಸಿಕೊಳ್ಳೋದೂ ಬೇಡ. ಸದನದಲ್ಲಿ ಎದ್ದು ನಿಂತು ಹೇಳಿದ್ದೆ. ಸರ್ ದಯವಿಟ್ಟು ಇನ್ಮುಂದಕ್ಕೆ ನಮಗೆ ಯಾವ ಕೈಗಾರಿಕೆಗಳು ಬೇಡ ಅಂತಾ. ಮುಂದೆ ಹೋಗಿ ಸಿರಾ ಕಡೆ ಹೋಗಿ, ಮಾಲೂರು ಕಡೆ ಹೋಗಿ ಬರಡು ಭೂಮಿ ಇರುವ ಕಡೆ ಹೋಗ್ರಿ. ಫಲವತ್ತಾದ ಭೂ ಸ್ವಾಧೀನ ಪಡಿಸಿಕೊಂಡು ರೈತರ ಜೀವನ ಹಾಳು ಮಾಡಬೇಡಿ ಎಂದು ಕೆಐಎಡಿಬಿಗೆ ಈ ಮೊದಲೇ ಆಗ್ರಹ ಮಾಡಿದ್ದೇನೆ. ಈ ಬಾರಿ ಸದನದ್ಲಲೂ ತಿಳಿಸುವಂತ ಕೆಲಸ ಮಾಡ್ತೀನಿ ಎಂದರು.
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…