ರೈತರ ಹಿತಕ್ಕಾಗಿ ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ- ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ- ಶಾಸಕ ಧೀರಜ್ ಮುನಿರಾಜ್ ಹೇಳಿಕೆ

ನೀರಾವರಿ, ಬೆಳೆಪರಿಹಾರ, ಹಾಲಿನ ಪ್ರೋತ್ಸಾಹ ಧನ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ದೊಡ್ಡಬೆಳವಂಗಲ, ಸಾಸಲು ಹೋಬಳಿಯಲ್ಲಿ ಕಸದ ಸಮಸ್ಯೆ ಮಿತಿಮೀರಿ ಹೋಗಿದೆ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ರೈತರ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಕಳೆದ ಸದನದಲ್ಲಿ ನಾನು ಸಚಿವ ಡಾ.ಜಿ. ಲಪರಮೇಶ್ವರ್ ಬಳಿ ಮನವಿ ಮಾಡಿದ್ದೇನೆ. ಎಂ. ಎಸ್.ಜಿ.ಪಿ ಕಸ ವಿಲೇವಾರಿ ಘಟಕ 2014ರಿಂದ ಕೆಲಸ ಮಾಡ್ತಿದೆ. ಅದರ ಒಂದು ಕಿಲೋಮೀಟರ್ ದೂರದಲ್ಲಿ ಎತ್ತಿನ ಹೊಳೆ ಡ್ಯಾಮ್ ಕಟ್ಟುತ್ತಿದ್ದಾರೆ. ಆ ಡ್ಯಾಮ್ ನೀರಿಗೆ ಕೊಳಚೆ ನೀರು ಸೇರುತ್ತೆ. ಇದರಿಂದ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತೆ ಎಂದು ಹೇಳಿದ್ದೇನೆ. ಆದರೂ ಅವರು ಮಾಡೇ ಮಾಡ್ತೀನಿ ಅಂತ ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ರು.

ಇನ್ನೂ ಕೆಐಎಡಿಬಿ ಭೂ ಸ್ವಾಧೀನ ಕುರಿತು ಮಾತನಾಡಿದ ಅವರು, ಫಾಕ್ಸ್ ಕಾನ್, ಕ್ವೀನ್ ಸಿಟಿ ಅಂತ ಸಾವಿರಾರು ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಿತ್ತಿದ್ದಾರೆ. ಹುಲಿಕುಂಟೆ ಬಳಿ ಕ್ವೀನ್ ಸಿಟಿಗಾಗಿ 5000 ಎಕರೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮೂರು ಮೂರುವರೆ ಸಾವಿರ ಎಕರೆ ಹಾಗೂ ನೆಲಮಂಗಲದಲ್ಲಿ ಒಂದು ಒಂದೂವರೆ ಸಾವಿರ ಎಕರೆ ಜಮೀನು ಸ್ವಾಧೀನ. ಅಲ್ಲಿ ಯಾವುದೇ ರೀತಿಯ ಪ್ಲಾನಿಂಗ್ ಇಲ್ಲದೆ ಕೆಐಎಡಿಬಿ ಭೂ ಸ್ವಾಧೀನ ಪಡಿಸಿಕೊಂಡಿದೆ. ಕೆಐಎಡಿಬಿ ವಿರುದ್ಧವಾಗಿ ಪ್ರತಿ ಸದನದಲ್ಲಿ ಪ್ರಶ್ನೆ ಮಾಡುತ್ತಾ ಬಂದಿದ್ದೇನೆ. ಖಂಡಿತವಾಗಿ ಇದು ಕಡೆ ಅವಕಾಶ ನೀಡ್ತೀದ್ದೇವೆ. ಇನ್ನ ನಮ್ಮ ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ. ಯಾವ ನಮಗೆ ಫ್ಯಾಕ್ಟರಿ ಅವಶ್ಯಕತೆ ಇಲ್ಲ. ನಮ್ಮ ಜನಕ್ಕೆ ಇಷ್ಟೇ ಕೆಲಸಗಳು ಸಾಕು. ಇನ್ನ ಹೆಚ್ಚಿನ ಕಾರ್ಖಾನೆಗಳು ಬೇಡ, ಭೂ ಸ್ವಾಧೀನ ಪಡಿಸಿಕೊಳ್ಳೋದೂ ಬೇಡ. ಸದನದಲ್ಲಿ ಎದ್ದು ನಿಂತು ಹೇಳಿದ್ದೆ. ಸರ್ ದಯವಿಟ್ಟು ಇನ್ಮುಂದಕ್ಕೆ ನಮಗೆ ಯಾವ ಕೈಗಾರಿಕೆಗಳು ಬೇಡ ಅಂತಾ. ಮುಂದೆ ಹೋಗಿ ಸಿರಾ ಕಡೆ ಹೋಗಿ, ಮಾಲೂರು ಕಡೆ ಹೋಗಿ ಬರಡು ಭೂಮಿ ಇರುವ ಕಡೆ ಹೋಗ್ರಿ. ಫಲವತ್ತಾದ ಭೂ ಸ್ವಾಧೀನ ಪಡಿಸಿಕೊಂಡು ರೈತರ ಜೀವನ ಹಾಳು ಮಾಡಬೇಡಿ ಎಂದು ಕೆಐಎಡಿಬಿಗೆ ಈ ಮೊದಲೇ ಆಗ್ರಹ ಮಾಡಿದ್ದೇನೆ. ಈ ಬಾರಿ ಸದನದ್ಲಲೂ ತಿಳಿಸುವಂತ ಕೆಲಸ ಮಾಡ್ತೀನಿ ಎಂದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago