ರೈತರ ಹಿತಕ್ಕಾಗಿ ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ- ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ- ಶಾಸಕ ಧೀರಜ್ ಮುನಿರಾಜ್ ಹೇಳಿಕೆ

ನೀರಾವರಿ, ಬೆಳೆಪರಿಹಾರ, ಹಾಲಿನ ಪ್ರೋತ್ಸಾಹ ಧನ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ದೊಡ್ಡಬೆಳವಂಗಲ, ಸಾಸಲು ಹೋಬಳಿಯಲ್ಲಿ ಕಸದ ಸಮಸ್ಯೆ ಮಿತಿಮೀರಿ ಹೋಗಿದೆ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ರೈತರ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಕಳೆದ ಸದನದಲ್ಲಿ ನಾನು ಸಚಿವ ಡಾ.ಜಿ. ಲಪರಮೇಶ್ವರ್ ಬಳಿ ಮನವಿ ಮಾಡಿದ್ದೇನೆ. ಎಂ. ಎಸ್.ಜಿ.ಪಿ ಕಸ ವಿಲೇವಾರಿ ಘಟಕ 2014ರಿಂದ ಕೆಲಸ ಮಾಡ್ತಿದೆ. ಅದರ ಒಂದು ಕಿಲೋಮೀಟರ್ ದೂರದಲ್ಲಿ ಎತ್ತಿನ ಹೊಳೆ ಡ್ಯಾಮ್ ಕಟ್ಟುತ್ತಿದ್ದಾರೆ. ಆ ಡ್ಯಾಮ್ ನೀರಿಗೆ ಕೊಳಚೆ ನೀರು ಸೇರುತ್ತೆ. ಇದರಿಂದ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತೆ ಎಂದು ಹೇಳಿದ್ದೇನೆ. ಆದರೂ ಅವರು ಮಾಡೇ ಮಾಡ್ತೀನಿ ಅಂತ ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ರು.

ಇನ್ನೂ ಕೆಐಎಡಿಬಿ ಭೂ ಸ್ವಾಧೀನ ಕುರಿತು ಮಾತನಾಡಿದ ಅವರು, ಫಾಕ್ಸ್ ಕಾನ್, ಕ್ವೀನ್ ಸಿಟಿ ಅಂತ ಸಾವಿರಾರು ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಿತ್ತಿದ್ದಾರೆ. ಹುಲಿಕುಂಟೆ ಬಳಿ ಕ್ವೀನ್ ಸಿಟಿಗಾಗಿ 5000 ಎಕರೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮೂರು ಮೂರುವರೆ ಸಾವಿರ ಎಕರೆ ಹಾಗೂ ನೆಲಮಂಗಲದಲ್ಲಿ ಒಂದು ಒಂದೂವರೆ ಸಾವಿರ ಎಕರೆ ಜಮೀನು ಸ್ವಾಧೀನ. ಅಲ್ಲಿ ಯಾವುದೇ ರೀತಿಯ ಪ್ಲಾನಿಂಗ್ ಇಲ್ಲದೆ ಕೆಐಎಡಿಬಿ ಭೂ ಸ್ವಾಧೀನ ಪಡಿಸಿಕೊಂಡಿದೆ. ಕೆಐಎಡಿಬಿ ವಿರುದ್ಧವಾಗಿ ಪ್ರತಿ ಸದನದಲ್ಲಿ ಪ್ರಶ್ನೆ ಮಾಡುತ್ತಾ ಬಂದಿದ್ದೇನೆ. ಖಂಡಿತವಾಗಿ ಇದು ಕಡೆ ಅವಕಾಶ ನೀಡ್ತೀದ್ದೇವೆ. ಇನ್ನ ನಮ್ಮ ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ. ಯಾವ ನಮಗೆ ಫ್ಯಾಕ್ಟರಿ ಅವಶ್ಯಕತೆ ಇಲ್ಲ. ನಮ್ಮ ಜನಕ್ಕೆ ಇಷ್ಟೇ ಕೆಲಸಗಳು ಸಾಕು. ಇನ್ನ ಹೆಚ್ಚಿನ ಕಾರ್ಖಾನೆಗಳು ಬೇಡ, ಭೂ ಸ್ವಾಧೀನ ಪಡಿಸಿಕೊಳ್ಳೋದೂ ಬೇಡ. ಸದನದಲ್ಲಿ ಎದ್ದು ನಿಂತು ಹೇಳಿದ್ದೆ. ಸರ್ ದಯವಿಟ್ಟು ಇನ್ಮುಂದಕ್ಕೆ ನಮಗೆ ಯಾವ ಕೈಗಾರಿಕೆಗಳು ಬೇಡ ಅಂತಾ. ಮುಂದೆ ಹೋಗಿ ಸಿರಾ ಕಡೆ ಹೋಗಿ, ಮಾಲೂರು ಕಡೆ ಹೋಗಿ ಬರಡು ಭೂಮಿ ಇರುವ ಕಡೆ ಹೋಗ್ರಿ. ಫಲವತ್ತಾದ ಭೂ ಸ್ವಾಧೀನ ಪಡಿಸಿಕೊಂಡು ರೈತರ ಜೀವನ ಹಾಳು ಮಾಡಬೇಡಿ ಎಂದು ಕೆಐಎಡಿಬಿಗೆ ಈ ಮೊದಲೇ ಆಗ್ರಹ ಮಾಡಿದ್ದೇನೆ. ಈ ಬಾರಿ ಸದನದ್ಲಲೂ ತಿಳಿಸುವಂತ ಕೆಲಸ ಮಾಡ್ತೀನಿ ಎಂದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago