ರೈತರ ಹಿತಕ್ಕಾಗಿ ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ- ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ- ಶಾಸಕ ಧೀರಜ್ ಮುನಿರಾಜ್ ಹೇಳಿಕೆ

ನೀರಾವರಿ, ಬೆಳೆಪರಿಹಾರ, ಹಾಲಿನ ಪ್ರೋತ್ಸಾಹ ಧನ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿ ಬೃಹತ್ ಹೋರಾಟ ಮಾಡುತ್ತೇವೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ದೊಡ್ಡಬೆಳವಂಗಲ, ಸಾಸಲು ಹೋಬಳಿಯಲ್ಲಿ ಕಸದ ಸಮಸ್ಯೆ ಮಿತಿಮೀರಿ ಹೋಗಿದೆ. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ರೈತರ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಕಳೆದ ಸದನದಲ್ಲಿ ನಾನು ಸಚಿವ ಡಾ.ಜಿ. ಲಪರಮೇಶ್ವರ್ ಬಳಿ ಮನವಿ ಮಾಡಿದ್ದೇನೆ. ಎಂ. ಎಸ್.ಜಿ.ಪಿ ಕಸ ವಿಲೇವಾರಿ ಘಟಕ 2014ರಿಂದ ಕೆಲಸ ಮಾಡ್ತಿದೆ. ಅದರ ಒಂದು ಕಿಲೋಮೀಟರ್ ದೂರದಲ್ಲಿ ಎತ್ತಿನ ಹೊಳೆ ಡ್ಯಾಮ್ ಕಟ್ಟುತ್ತಿದ್ದಾರೆ. ಆ ಡ್ಯಾಮ್ ನೀರಿಗೆ ಕೊಳಚೆ ನೀರು ಸೇರುತ್ತೆ. ಇದರಿಂದ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತೆ ಎಂದು ಹೇಳಿದ್ದೇನೆ. ಆದರೂ ಅವರು ಮಾಡೇ ಮಾಡ್ತೀನಿ ಅಂತ ಹೊರಟಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ರು.

ಇನ್ನೂ ಕೆಐಎಡಿಬಿ ಭೂ ಸ್ವಾಧೀನ ಕುರಿತು ಮಾತನಾಡಿದ ಅವರು, ಫಾಕ್ಸ್ ಕಾನ್, ಕ್ವೀನ್ ಸಿಟಿ ಅಂತ ಸಾವಿರಾರು ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಿತ್ತಿದ್ದಾರೆ. ಹುಲಿಕುಂಟೆ ಬಳಿ ಕ್ವೀನ್ ಸಿಟಿಗಾಗಿ 5000 ಎಕರೆ ಜಮೀನನ್ನ ಸ್ವಾಧೀನ ಪಡಿಸಿಕೊಂಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮೂರು ಮೂರುವರೆ ಸಾವಿರ ಎಕರೆ ಹಾಗೂ ನೆಲಮಂಗಲದಲ್ಲಿ ಒಂದು ಒಂದೂವರೆ ಸಾವಿರ ಎಕರೆ ಜಮೀನು ಸ್ವಾಧೀನ. ಅಲ್ಲಿ ಯಾವುದೇ ರೀತಿಯ ಪ್ಲಾನಿಂಗ್ ಇಲ್ಲದೆ ಕೆಐಎಡಿಬಿ ಭೂ ಸ್ವಾಧೀನ ಪಡಿಸಿಕೊಂಡಿದೆ. ಕೆಐಎಡಿಬಿ ವಿರುದ್ಧವಾಗಿ ಪ್ರತಿ ಸದನದಲ್ಲಿ ಪ್ರಶ್ನೆ ಮಾಡುತ್ತಾ ಬಂದಿದ್ದೇನೆ. ಖಂಡಿತವಾಗಿ ಇದು ಕಡೆ ಅವಕಾಶ ನೀಡ್ತೀದ್ದೇವೆ. ಇನ್ನ ನಮ್ಮ ತಾಲೂಕಿನಲ್ಲಿ ಒಂದು ಇಂಚು ಭೂ ಸ್ವಾಧೀನ ಮಾಡಲು ಬಿಡಲ್ಲ. ಯಾವ ನಮಗೆ ಫ್ಯಾಕ್ಟರಿ ಅವಶ್ಯಕತೆ ಇಲ್ಲ. ನಮ್ಮ ಜನಕ್ಕೆ ಇಷ್ಟೇ ಕೆಲಸಗಳು ಸಾಕು. ಇನ್ನ ಹೆಚ್ಚಿನ ಕಾರ್ಖಾನೆಗಳು ಬೇಡ, ಭೂ ಸ್ವಾಧೀನ ಪಡಿಸಿಕೊಳ್ಳೋದೂ ಬೇಡ. ಸದನದಲ್ಲಿ ಎದ್ದು ನಿಂತು ಹೇಳಿದ್ದೆ. ಸರ್ ದಯವಿಟ್ಟು ಇನ್ಮುಂದಕ್ಕೆ ನಮಗೆ ಯಾವ ಕೈಗಾರಿಕೆಗಳು ಬೇಡ ಅಂತಾ. ಮುಂದೆ ಹೋಗಿ ಸಿರಾ ಕಡೆ ಹೋಗಿ, ಮಾಲೂರು ಕಡೆ ಹೋಗಿ ಬರಡು ಭೂಮಿ ಇರುವ ಕಡೆ ಹೋಗ್ರಿ. ಫಲವತ್ತಾದ ಭೂ ಸ್ವಾಧೀನ ಪಡಿಸಿಕೊಂಡು ರೈತರ ಜೀವನ ಹಾಳು ಮಾಡಬೇಡಿ ಎಂದು ಕೆಐಎಡಿಬಿಗೆ ಈ ಮೊದಲೇ ಆಗ್ರಹ ಮಾಡಿದ್ದೇನೆ. ಈ ಬಾರಿ ಸದನದ್ಲಲೂ ತಿಳಿಸುವಂತ ಕೆಲಸ ಮಾಡ್ತೀನಿ ಎಂದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

60 minutes ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

4 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

9 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

10 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

10 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

12 hours ago