ರಾಜ್ಯ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು.
ರೈತರ ನೆರವಿಗೆ ಬಾರದ ಸರ್ಕಾರದ ವಿರುದ್ಧ ಸೆ.26 ರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಸಿಕೆರೆಯಿಂದ ಪ್ರತಿಭಟನಾ ಪಾದಯಾತ್ರೆ ಪ್ರಾರಂಭ ಮಾಡಿ ಅ.4ರಂದು ವಿಧಾನ ಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯ ರ್ಕಾರ ಚುನಾವಣಾ ಪೂರ್ವದಲ್ಲಿ ರೈತರ ಪರವಾಗಿ ನೀಡಿದ್ದ ಎಲ್ಲಾ ಭರವಸೆಗಳು ಈಗ ಸುಳ್ಳಾಗುತ್ತಿವೆ. ಅಧಿಕಾರಕ್ಕೆ ಬಂದ ಕೂಡಲೇ ಎಪಿಎಂಸಿ ಕಾಯ್ದೆ ರದ್ದು, ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯಗಳ ಖರೀದಿಗೆ ಆವರ್ತ ನಿಧಿ ಸ್ವಾವನೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಈಗ ಕಾಯ್ದೆ ವಾಪಸ್ ಪಡೆಯಲು ಕುಂಟು ನೆಪಗಳನ್ನು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರ ಇಲ್ಲದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು, ಅಧಿಕಾರಕ್ಕೆ ಬಂದ ನಂತರ ಮೇಕೆದಾಟು, ಮಹಾದಾಯಿ ಯೋಜನೆ ಎಲ್ಲವನ್ನೂ ಮರೆತು ಹೋಗಿದ್ದಾರೆ ಎಂದು ಗುಡುಗಿದರು.
ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿ ರೈತರ ಹಿತ ಕಾಪಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಚಪ್ಪಗೌಡ, ದೇವನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ರಮೇಶ್ ಮುಖಂಡರಾದ ಬಚ್ಚಹಳ್ಳಿಸತೀಶ್, ನಾರಾಯಣಸ್ವಾಮಿ, ವಾಸುದೇವ ಇದ್ದರು.
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…