ರಾಜ್ಯ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು.
ರೈತರ ನೆರವಿಗೆ ಬಾರದ ಸರ್ಕಾರದ ವಿರುದ್ಧ ಸೆ.26 ರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಸಿಕೆರೆಯಿಂದ ಪ್ರತಿಭಟನಾ ಪಾದಯಾತ್ರೆ ಪ್ರಾರಂಭ ಮಾಡಿ ಅ.4ರಂದು ವಿಧಾನ ಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯ ರ್ಕಾರ ಚುನಾವಣಾ ಪೂರ್ವದಲ್ಲಿ ರೈತರ ಪರವಾಗಿ ನೀಡಿದ್ದ ಎಲ್ಲಾ ಭರವಸೆಗಳು ಈಗ ಸುಳ್ಳಾಗುತ್ತಿವೆ. ಅಧಿಕಾರಕ್ಕೆ ಬಂದ ಕೂಡಲೇ ಎಪಿಎಂಸಿ ಕಾಯ್ದೆ ರದ್ದು, ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯಗಳ ಖರೀದಿಗೆ ಆವರ್ತ ನಿಧಿ ಸ್ವಾವನೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಈಗ ಕಾಯ್ದೆ ವಾಪಸ್ ಪಡೆಯಲು ಕುಂಟು ನೆಪಗಳನ್ನು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರ ಇಲ್ಲದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು, ಅಧಿಕಾರಕ್ಕೆ ಬಂದ ನಂತರ ಮೇಕೆದಾಟು, ಮಹಾದಾಯಿ ಯೋಜನೆ ಎಲ್ಲವನ್ನೂ ಮರೆತು ಹೋಗಿದ್ದಾರೆ ಎಂದು ಗುಡುಗಿದರು.
ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿ ರೈತರ ಹಿತ ಕಾಪಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಚಪ್ಪಗೌಡ, ದೇವನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ರಮೇಶ್ ಮುಖಂಡರಾದ ಬಚ್ಚಹಳ್ಳಿಸತೀಶ್, ನಾರಾಯಣಸ್ವಾಮಿ, ವಾಸುದೇವ ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…