ರೈತರ ಹಿತ ಕಾಯುವಲ್ಲಿ ಎಡವಿದ ಸರ್ಕಾರ: ಸರ್ಕಾರದ ವಿರುದ್ಧ ಸಿಡೆದೆದ್ದ ರೈತರು: ಸೆ.26ರಿಂದ ಪಾದಯಾತ್ರೆ ಮೂಲಕ ವಿಧಾನಸೌಧ ಮುತ್ತಿಗೆ

ರಾಜ್ಯ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು.

ರೈತರ ನೆರವಿಗೆ ಬಾರದ ಸರ್ಕಾರದ ವಿರುದ್ಧ ಸೆ.26 ರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಸಿಕೆರೆಯಿಂದ ಪ್ರತಿಭಟನಾ ಪಾದಯಾತ್ರೆ ಪ್ರಾರಂಭ ಮಾಡಿ  ಅ.4ರಂದು ವಿಧಾನ ಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯ ರ್ಕಾರ ಚುನಾವಣಾ ಪೂರ್ವದಲ್ಲಿ ರೈತರ ಪರವಾಗಿ ನೀಡಿದ್ದ ಎಲ್ಲಾ ಭರವಸೆಗಳು ಈಗ ಸುಳ್ಳಾಗುತ್ತಿವೆ. ಅಧಿಕಾರಕ್ಕೆ ಬಂದ ಕೂಡಲೇ ಎಪಿಎಂಸಿ ಕಾಯ್ದೆ ರದ್ದು, ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯಗಳ ಖರೀದಿಗೆ ಆವರ್ತ ನಿಧಿ ಸ್ವಾವನೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಈಗ ಕಾಯ್ದೆ ವಾಪಸ್ ಪಡೆಯಲು ಕುಂಟು ನೆಪಗಳನ್ನು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರ ಇಲ್ಲದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು, ಅಧಿಕಾರಕ್ಕೆ ಬಂದ ನಂತರ ಮೇಕೆದಾಟು, ಮಹಾದಾಯಿ ಯೋಜನೆ ಎಲ್ಲವನ್ನೂ ಮರೆತು ಹೋಗಿದ್ದಾರೆ ಎಂದು ಗುಡುಗಿದರು.

ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿ ರೈತರ ಹಿತ ಕಾಪಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಚಪ್ಪಗೌಡ, ದೇವನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ರಮೇಶ್‌ ಮುಖಂಡರಾದ ಬಚ್ಚಹಳ್ಳಿಸತೀಶ್, ನಾರಾಯಣಸ್ವಾಮಿ, ವಾಸುದೇವ ಇದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

11 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

12 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

13 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

14 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

16 hours ago