ರಾಜ್ಯ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು.
ರೈತರ ನೆರವಿಗೆ ಬಾರದ ಸರ್ಕಾರದ ವಿರುದ್ಧ ಸೆ.26 ರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಸಿಕೆರೆಯಿಂದ ಪ್ರತಿಭಟನಾ ಪಾದಯಾತ್ರೆ ಪ್ರಾರಂಭ ಮಾಡಿ ಅ.4ರಂದು ವಿಧಾನ ಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯ ರ್ಕಾರ ಚುನಾವಣಾ ಪೂರ್ವದಲ್ಲಿ ರೈತರ ಪರವಾಗಿ ನೀಡಿದ್ದ ಎಲ್ಲಾ ಭರವಸೆಗಳು ಈಗ ಸುಳ್ಳಾಗುತ್ತಿವೆ. ಅಧಿಕಾರಕ್ಕೆ ಬಂದ ಕೂಡಲೇ ಎಪಿಎಂಸಿ ಕಾಯ್ದೆ ರದ್ದು, ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯಗಳ ಖರೀದಿಗೆ ಆವರ್ತ ನಿಧಿ ಸ್ವಾವನೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಈಗ ಕಾಯ್ದೆ ವಾಪಸ್ ಪಡೆಯಲು ಕುಂಟು ನೆಪಗಳನ್ನು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರ ಇಲ್ಲದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು, ಅಧಿಕಾರಕ್ಕೆ ಬಂದ ನಂತರ ಮೇಕೆದಾಟು, ಮಹಾದಾಯಿ ಯೋಜನೆ ಎಲ್ಲವನ್ನೂ ಮರೆತು ಹೋಗಿದ್ದಾರೆ ಎಂದು ಗುಡುಗಿದರು.
ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿ ರೈತರ ಹಿತ ಕಾಪಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಚಪ್ಪಗೌಡ, ದೇವನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ರಮೇಶ್ ಮುಖಂಡರಾದ ಬಚ್ಚಹಳ್ಳಿಸತೀಶ್, ನಾರಾಯಣಸ್ವಾಮಿ, ವಾಸುದೇವ ಇದ್ದರು.
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…