ರೈತರ ಹಿತ ಕಾಯುವಲ್ಲಿ ಎಡವಿದ ಸರ್ಕಾರ: ಸರ್ಕಾರದ ವಿರುದ್ಧ ಸಿಡೆದೆದ್ದ ರೈತರು: ಸೆ.26ರಿಂದ ಪಾದಯಾತ್ರೆ ಮೂಲಕ ವಿಧಾನಸೌಧ ಮುತ್ತಿಗೆ

ರಾಜ್ಯ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿ ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು.

ರೈತರ ನೆರವಿಗೆ ಬಾರದ ಸರ್ಕಾರದ ವಿರುದ್ಧ ಸೆ.26 ರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಸಿಕೆರೆಯಿಂದ ಪ್ರತಿಭಟನಾ ಪಾದಯಾತ್ರೆ ಪ್ರಾರಂಭ ಮಾಡಿ  ಅ.4ರಂದು ವಿಧಾನ ಸೌಧ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯ ರ್ಕಾರ ಚುನಾವಣಾ ಪೂರ್ವದಲ್ಲಿ ರೈತರ ಪರವಾಗಿ ನೀಡಿದ್ದ ಎಲ್ಲಾ ಭರವಸೆಗಳು ಈಗ ಸುಳ್ಳಾಗುತ್ತಿವೆ. ಅಧಿಕಾರಕ್ಕೆ ಬಂದ ಕೂಡಲೇ ಎಪಿಎಂಸಿ ಕಾಯ್ದೆ ರದ್ದು, ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯಗಳ ಖರೀದಿಗೆ ಆವರ್ತ ನಿಧಿ ಸ್ವಾವನೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಈಗ ಕಾಯ್ದೆ ವಾಪಸ್ ಪಡೆಯಲು ಕುಂಟು ನೆಪಗಳನ್ನು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರ ಇಲ್ಲದ ಸಂದರ್ಭದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು, ಅಧಿಕಾರಕ್ಕೆ ಬಂದ ನಂತರ ಮೇಕೆದಾಟು, ಮಹಾದಾಯಿ ಯೋಜನೆ ಎಲ್ಲವನ್ನೂ ಮರೆತು ಹೋಗಿದ್ದಾರೆ ಎಂದು ಗುಡುಗಿದರು.

ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿ ರೈತರ ಹಿತ ಕಾಪಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.

ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಚಪ್ಪಗೌಡ, ದೇವನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ರಮೇಶ್‌ ಮುಖಂಡರಾದ ಬಚ್ಚಹಳ್ಳಿಸತೀಶ್, ನಾರಾಯಣಸ್ವಾಮಿ, ವಾಸುದೇವ ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

23 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago