Categories: ಕೋಲಾರ

ರೈತ ನಾಯಕ ಜಿ.ಸಿ ಬಯ್ಯಾರೆಡ್ಡಿಗೆ ಸಿಪಿಐಎಂ, ಪ್ರಗತಿಪರ ಸಂಘಟನೆಗಳಿಂದ ಶ್ರದ್ಧಾಂಜಲಿ

ಕೋಲಾರ: ಕರ್ನಾಟಕ ಪ್ರಾಂತ ರೈತ ಸಂಘ(ಕೆ.ಪಿ.ಆರ್.ಎಸ್) ರಾಜ್ಯ ಅಧ್ಯಕ್ಷ ಹಾಗೂ ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ‌.ಸಿ ಬಯ್ಯಾರೆಡ್ಡಿ ನಿಧನದ ಹಿನ್ನಲೆಯಲ್ಲಿ ಶನಿವಾರ ನಗರದ ಮೆಕ್ಕೆ ವೃತ್ತದಲ್ಲಿ ಸಿಪಿಐಎಂ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಜಿ.ಸಿ‌ ಬಯ್ಯಾರೆಡ್ಡಿ ಅವರು ವಿದ್ಯಾರ್ಥಿ ದೆಸೆಯಿಂದ ಹೋರಾಟದ ಕಣಕ್ಕೆ ಧುಮುಕಿದ್ದು ವಿದ್ಯಾರ್ಥಿ ಚಳುವಳಿಯನ್ನು ರಾಜ್ಯವ್ಯಾಪಿಯಾಗಿ ಮುನ್ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾರ್ಕ್ಸವಾದಕ್ಕೆ ಆಕರ್ಷಿತರಾಗಿ, ಸಿಪಿಐಎಂ ಪಕ್ಷದ ಕಾರ್ಯಕರ್ತರಾಗಿ ಮತ್ತು ನಾಯಕರಾಗಿ ತಮ್ಮ ಇಡೀ ಜೀವನವನ್ನು ಸಮಾಜದಲ್ಲಿನ ಬಡವರಿಗೆ ರೈತರಿಗೆ ಮುಡಿಪಾಗಿಟ್ಟಿದ್ದರು. ನಿಸ್ವಾರ್ಥಿ, ಮುತ್ಸದ್ಧಿ ಸಂಗಾತಿಯ ಅಗಲಿಕೆ ರಾಜ್ಯದ ರೈತ ಚಳುವಳಿಗೆ ಶೋಷಿತ ಸಮುದಾಯಕ್ಕೆ ಮತ್ತು ಮುಖ್ಯವಾಗಿ ಸಿಪಿಐಎಂ ಪಕ್ಷಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದರು

ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಮಗ್ರತೆಗಾಗಿ‌ ನಿರಂತರವಾಗಿ ದುಡಿದಿದ್ದಾರೆ ರೈತ ಚಳುವಳಿಯ ಜೊತೆಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ಸಂಘಗಳ ಮೂಲಕ ಅರಿವು ಪೋತ್ಸಾಹ ನೀಡಿದ್ದರು ರೈತರಿಗಾಗಿ ಮಾಡಿರುವ ಸೇವೆ ಅಪಾರವಾದದ್ದು. ರೈತರ ಪರ ನಡೆದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ನಡೆಸಿದ್ದ ಅವರ ಹೋರಾಟಗಳು ನಮಗೆಲ್ಲಾ ಆದರ್ಶವಾಗಿವೆ ಅವರ ನಿಧನ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್, ಜೆಎಂಎಸ್ ವಿ.ಗೀತಾ, ಮಾಜಿ ತಾಪಂ ಅಧ್ಯಕ್ಷ ಸಿ.ಆರ್ ಯುವರಾಜ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ಮುಖಂಡ ಎಂ.ವಿ ನಾರಾಯಣಸ್ವಾಮಿ ಅಗಲಿದ ಬಯ್ಯಾರೆಡ್ಡಿ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎನ್.ಎನ್ ಶ್ರೀರಾಮ್, ನಂದೀಶ್, ವಿಜಯಕೃಷ್ಣ, ಆಟೋ ಮಂಜುನಾಥ್, ಆಶಾ, ಪಿ.ವಿ ರಮಣ್, ಕೃಷ್ಣೇಗೌಡ, ನಾರಾಯಣರೆಡ್ಡಿ, ಮಂಜುಳಾ, ಭೀಮರಾಜ್, ಮುಸ್ತಫಾ, ಆಲಹಳ್ಳಿ ವೆಂಕಟೇಶ್, ಲೋಕೇಶ್ವರಿ, ಆರೋಗ್ಯನಾಥನ್, ಮುರಳಿಕೃಷ್ಣ, ಮುಂತಾದವರು ಇದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

7 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

7 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

13 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

21 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago