ಕೋಲಾರ: ಕರ್ನಾಟಕ ಪ್ರಾಂತ ರೈತ ಸಂಘ(ಕೆ.ಪಿ.ಆರ್.ಎಸ್) ರಾಜ್ಯ ಅಧ್ಯಕ್ಷ ಹಾಗೂ ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ನಿಧನದ ಹಿನ್ನಲೆಯಲ್ಲಿ ಶನಿವಾರ ನಗರದ ಮೆಕ್ಕೆ ವೃತ್ತದಲ್ಲಿ ಸಿಪಿಐಎಂ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಜಿ.ಸಿ ಬಯ್ಯಾರೆಡ್ಡಿ ಅವರು ವಿದ್ಯಾರ್ಥಿ ದೆಸೆಯಿಂದ ಹೋರಾಟದ ಕಣಕ್ಕೆ ಧುಮುಕಿದ್ದು ವಿದ್ಯಾರ್ಥಿ ಚಳುವಳಿಯನ್ನು ರಾಜ್ಯವ್ಯಾಪಿಯಾಗಿ ಮುನ್ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾರ್ಕ್ಸವಾದಕ್ಕೆ ಆಕರ್ಷಿತರಾಗಿ, ಸಿಪಿಐಎಂ ಪಕ್ಷದ ಕಾರ್ಯಕರ್ತರಾಗಿ ಮತ್ತು ನಾಯಕರಾಗಿ ತಮ್ಮ ಇಡೀ ಜೀವನವನ್ನು ಸಮಾಜದಲ್ಲಿನ ಬಡವರಿಗೆ ರೈತರಿಗೆ ಮುಡಿಪಾಗಿಟ್ಟಿದ್ದರು. ನಿಸ್ವಾರ್ಥಿ, ಮುತ್ಸದ್ಧಿ ಸಂಗಾತಿಯ ಅಗಲಿಕೆ ರಾಜ್ಯದ ರೈತ ಚಳುವಳಿಗೆ ಶೋಷಿತ ಸಮುದಾಯಕ್ಕೆ ಮತ್ತು ಮುಖ್ಯವಾಗಿ ಸಿಪಿಐಎಂ ಪಕ್ಷಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದರು
ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಮಗ್ರತೆಗಾಗಿ ನಿರಂತರವಾಗಿ ದುಡಿದಿದ್ದಾರೆ ರೈತ ಚಳುವಳಿಯ ಜೊತೆಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ಸಂಘಗಳ ಮೂಲಕ ಅರಿವು ಪೋತ್ಸಾಹ ನೀಡಿದ್ದರು ರೈತರಿಗಾಗಿ ಮಾಡಿರುವ ಸೇವೆ ಅಪಾರವಾದದ್ದು. ರೈತರ ಪರ ನಡೆದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ನಡೆಸಿದ್ದ ಅವರ ಹೋರಾಟಗಳು ನಮಗೆಲ್ಲಾ ಆದರ್ಶವಾಗಿವೆ ಅವರ ನಿಧನ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್, ಜೆಎಂಎಸ್ ವಿ.ಗೀತಾ, ಮಾಜಿ ತಾಪಂ ಅಧ್ಯಕ್ಷ ಸಿ.ಆರ್ ಯುವರಾಜ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ಮುಖಂಡ ಎಂ.ವಿ ನಾರಾಯಣಸ್ವಾಮಿ ಅಗಲಿದ ಬಯ್ಯಾರೆಡ್ಡಿ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎನ್.ಎನ್ ಶ್ರೀರಾಮ್, ನಂದೀಶ್, ವಿಜಯಕೃಷ್ಣ, ಆಟೋ ಮಂಜುನಾಥ್, ಆಶಾ, ಪಿ.ವಿ ರಮಣ್, ಕೃಷ್ಣೇಗೌಡ, ನಾರಾಯಣರೆಡ್ಡಿ, ಮಂಜುಳಾ, ಭೀಮರಾಜ್, ಮುಸ್ತಫಾ, ಆಲಹಳ್ಳಿ ವೆಂಕಟೇಶ್, ಲೋಕೇಶ್ವರಿ, ಆರೋಗ್ಯನಾಥನ್, ಮುರಳಿಕೃಷ್ಣ, ಮುಂತಾದವರು ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…