ಕೋಲಾರ: ಕರ್ನಾಟಕ ಪ್ರಾಂತ ರೈತ ಸಂಘ(ಕೆ.ಪಿ.ಆರ್.ಎಸ್) ರಾಜ್ಯ ಅಧ್ಯಕ್ಷ ಹಾಗೂ ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ ಬಯ್ಯಾರೆಡ್ಡಿ ನಿಧನದ ಹಿನ್ನಲೆಯಲ್ಲಿ ಶನಿವಾರ ನಗರದ ಮೆಕ್ಕೆ ವೃತ್ತದಲ್ಲಿ ಸಿಪಿಐಎಂ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ಜಿ.ಸಿ ಬಯ್ಯಾರೆಡ್ಡಿ ಅವರು ವಿದ್ಯಾರ್ಥಿ ದೆಸೆಯಿಂದ ಹೋರಾಟದ ಕಣಕ್ಕೆ ಧುಮುಕಿದ್ದು ವಿದ್ಯಾರ್ಥಿ ಚಳುವಳಿಯನ್ನು ರಾಜ್ಯವ್ಯಾಪಿಯಾಗಿ ಮುನ್ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾರ್ಕ್ಸವಾದಕ್ಕೆ ಆಕರ್ಷಿತರಾಗಿ, ಸಿಪಿಐಎಂ ಪಕ್ಷದ ಕಾರ್ಯಕರ್ತರಾಗಿ ಮತ್ತು ನಾಯಕರಾಗಿ ತಮ್ಮ ಇಡೀ ಜೀವನವನ್ನು ಸಮಾಜದಲ್ಲಿನ ಬಡವರಿಗೆ ರೈತರಿಗೆ ಮುಡಿಪಾಗಿಟ್ಟಿದ್ದರು. ನಿಸ್ವಾರ್ಥಿ, ಮುತ್ಸದ್ಧಿ ಸಂಗಾತಿಯ ಅಗಲಿಕೆ ರಾಜ್ಯದ ರೈತ ಚಳುವಳಿಗೆ ಶೋಷಿತ ಸಮುದಾಯಕ್ಕೆ ಮತ್ತು ಮುಖ್ಯವಾಗಿ ಸಿಪಿಐಎಂ ಪಕ್ಷಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದರು
ಕೋಲಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸಮಗ್ರತೆಗಾಗಿ ನಿರಂತರವಾಗಿ ದುಡಿದಿದ್ದಾರೆ ರೈತ ಚಳುವಳಿಯ ಜೊತೆಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ ಸಂಘಗಳ ಮೂಲಕ ಅರಿವು ಪೋತ್ಸಾಹ ನೀಡಿದ್ದರು ರೈತರಿಗಾಗಿ ಮಾಡಿರುವ ಸೇವೆ ಅಪಾರವಾದದ್ದು. ರೈತರ ಪರ ನಡೆದ ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ನಡೆಸಿದ್ದ ಅವರ ಹೋರಾಟಗಳು ನಮಗೆಲ್ಲಾ ಆದರ್ಶವಾಗಿವೆ ಅವರ ನಿಧನ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್, ಜೆಎಂಎಸ್ ವಿ.ಗೀತಾ, ಮಾಜಿ ತಾಪಂ ಅಧ್ಯಕ್ಷ ಸಿ.ಆರ್ ಯುವರಾಜ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ಮುಖಂಡ ಎಂ.ವಿ ನಾರಾಯಣಸ್ವಾಮಿ ಅಗಲಿದ ಬಯ್ಯಾರೆಡ್ಡಿ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎನ್.ಎನ್ ಶ್ರೀರಾಮ್, ನಂದೀಶ್, ವಿಜಯಕೃಷ್ಣ, ಆಟೋ ಮಂಜುನಾಥ್, ಆಶಾ, ಪಿ.ವಿ ರಮಣ್, ಕೃಷ್ಣೇಗೌಡ, ನಾರಾಯಣರೆಡ್ಡಿ, ಮಂಜುಳಾ, ಭೀಮರಾಜ್, ಮುಸ್ತಫಾ, ಆಲಹಳ್ಳಿ ವೆಂಕಟೇಶ್, ಲೋಕೇಶ್ವರಿ, ಆರೋಗ್ಯನಾಥನ್, ಮುರಳಿಕೃಷ್ಣ, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…