Categories: ಕೋಲಾರ

ರೈತ ಮುಖಂಡರ ಮೇಲೆ ಹಲ್ಲೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಒತ್ತಾಯ

ಕೋಲಾರ: ಶ್ರೀನಿವಾಸಪುರ ತಹಶೀಲ್ದಾರ್ ಕಚೇರಿ ಮುಂದೆ ಶಾಂತಿಯುತ ಹೋರಾಟ ಮಾಡುತ್ತಿದ್ದ ರೈತ ಸಂಘದ ಕಾರ್ಯಕರ್ತರ ಮೇಲೆ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಬೆಂಬಲಿಗರು ಮಾಡಿರುವ ಹಲ್ಲೆ ಹಾಗೂ ಅಂಬೇಡ್ಕರ್ ಪೋಟೋಗೆ ಅವಮಾನ ಮಾಡಿರುವ ತಹಶೀಲ್ದಾರ್‌ ಅವರ ಅನುಚಿತ ವರ್ತನೆ ಪ್ರಕರಣವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಹೈಕೋರ್ಟ್ ಆದೇಶ ಪ್ರಕಾರ ಕೇಂದ್ರ ಸಚಿವಾಲಯದ ಪತ್ರ ವ್ಯವಹರದಂತೆ ಜಿಗಲಕುಂಟೆ ಅರಣ್ಯ ಪ್ರದೇಶದ ಸರ್ವೇ ನಂ.1 ಮತ್ತು 2ರಲ್ಲಿ ಜಂಟಿ ಸರ್ವೇ ಮಾಡಿ ಒತ್ತುವರಿ ಮಾಡಿಕೊಂಡಿರುವ ರಮೇಶ್‌ಕುಮಾರ್‌ರವರ ಅರಣ್ಯ ಒತ್ತುವರಿಯನ್ನು ತೆರೆವುಗೊಳಿಸಬೇಕೆಂದು ಒಂದು ವಾರದ ಮುಂಚೆಯೇ ಅರೆಬೆತ್ತಲೆ ಹೋರಾಟ ಮಾಡುತ್ತೇವೆಂದು ಪತ್ರಿಕಾ ಹೇಳಿಕೆ ಹಾಗೂ ತಹಶೀಲ್ದಾರ್ ಮತ್ತು ಪೋಲಿಸ್ ವರಿಷ್ಠಾಧಿಕಾರಿಗೆ ಲಿಖಿತ ರೂಪದಲ್ಲಿ ಡಿ.4ರಂದು ಮನವಿ ನೀಡಿದ್ದಂತೆ ಡಿ.9 ರಂದು ತಾಲ್ಲೂಕು ಕಚೇರಿಯ ಮುಂದೆ ಆಂಬೇಡ್ಕರ್ ನಂಜುಂಡಸ್ವಾಮಿ ಪೋಟೋ ಸಮೇತ ಶಾಂತಿಯುತ ಮೌನ ಪ್ರತಿಭಟನೆ ಮಾಡುತ್ತಿದ್ದಾಗ ಏಕಾಏಕಿ ರಮೇಶ್ ಕುಮಾರ್‌ರವರಿಗೆ ಜೈಕಾರ ಹಾಕಿಕೊಂಡು ಅವರ ಬೆಂಬಲಿಗರು ಪೋಲಿಸರ ಸಮ್ಮುಖದಲ್ಲಿಯೇ ನಮ್ಮ ಮೇಲೆ ಪೈಪು , ರಾಡುಗಳಿಂದ ಹಲ್ಲೆ ಮಾಡುತ್ತಿದ್ದರೂ ರಕ್ಷಣೆಗೆ ನಿಂತಿದ್ದ ಪೋಲಿಸರು ಮೂಕ ಪೇಕ್ಷಕರಂತೆ ಹಲ್ಲೆ ದಂದೆಕೋರರ ಪರ ನಿಂತಿದ್ದರೆಂದು ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ವಿಡಿಯೋಗಳ ಸಮೇತ ದೂರು ನೀಡಿ ನಿಕ್ಷಪತವಾಗಿ ತನಿಖೆ ಮಾಡಿ ನ್ಯಾಯ ಒದಗಿಸುವ ಜೊತೆಗೆ ಮುಂದಿನ ದಿನಗಳಲ್ಲಿ ರೈತಪರ ಹೋರಾಟಗಾರರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಆಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಪ್ರತಿಯೊಬ್ಬ ಪ್ರಜೆಗೂ ಅನ್ಯಾಯದ ವಿರುದ್ದ ದ್ವನಿ ಎತ್ತುವ ಹಕ್ಕಿದೆ ಅದರಂತೆ ಪ್ರಜಾಪ್ರಭುತ್ವದಲ್ಲಿ ಪ್ರಜಾ ಸೇವಕರಾಗಿ ಕೆಲಸ ಮಾಡುವ ತಾಲ್ಲೂಕಿನ ಪ್ರಥಮ ಪ್ರಜೆಯಾಗಿರುವ ದಂಡಾಧಿಕಾರಿಗಳು ನ್ಯಾಯ ಕೇಳಲು ಬರುವ ಹೋರಾಟಗಾರರಿಗೆ ಸ್ಪಂದಿಸಬೇಕು ಅದನ್ನು ಬಿಟ್ಟು ರಾಜಕಾರಣಿಗಳ ಒತ್ತಡಕ್ಕೆ ಮಣಿದು ತಾಳ್ಮೆ ಕಳೆದುಕೊಂಡು ನಾನು ಒಬ್ಬ ಅಧಿಕಾರಿ ಎಂದು ಮರೆತು ಏಕಾಏಕಿ ದೌರ್ಜನ್ಯ ಮಾಡುತ್ತಿದ್ದ ರಮೇಶ್‌ಕುಮಾರ್ ಬೆಂಬಲಿಗರ ಪರವಾಗಿ ನಿಂತು ಆಂಬೇಡ್ಕರ್‌ರವರ ಪೋಟೋವನ್ನೇ ಎತ್ತಿ ಬಿಸಾಡಿ ಅವಮಾನ ಮಾಡಿರುವವರ ಜೊತೆಗೆ ಹೋರಾಟಗಾರರ ಮೇಲೆ ಒಬ್ಬ ದಂಡಾಧಿಕಾರಿಯ ಮುಂದೆಯೇ ಹಲ್ಲೆ ನಡೆಯುತ್ತಿದ್ದರೆ ಅದನ್ನು ಪೋಲಿಸ್‌ರಿಗೆ ಹೇಳಿ ತಡೆಯಬೇಕಾದ ತಾವುಗಳೇ ದಂದೆಕೋರರ ಪರ ನಿಂತರೇ ಇನ್ನೂ ಜನಸಾಮಾನ್ಯರ ಕೆಲಸ ಯಾವ ರೀತಿ ಅಗುತ್ತದೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿಗಳು ತಾವು ನೀಡಿರುವ ವಿಡಿಯೋಗಳನ್ನು ವೀಕ್ಷಣೆ ಮಾಡಿ ಅಧಿಕಾರಿಯೆಂದು ಮರೆತು ರಾಜಕಾರಣಿಯ ಬೆಂಬಲಿಗರಂತೆ ವರ್ತನೆ ಮಾಡಿರುವ ತಹಶೀಲ್ದಾರ್ ಸುದೀಂದ್ರ ರವರ ವಿರುದ್ದ ಶಿಸ್ತು ಕ್ರಮ ಕೈಗೊಂಡು ನೊಂದ ಹೋರಾಟಗಾರರಿಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಹಿರಿಯ ಅಧಿಕಾರಿಗಳು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇವೆ ಹೋರಾಟ ಪ್ರತಿಯೊಬ್ಬ ನಾಗರೀಕರ ಹಕ್ಕು ಅನ್ಯಾಯದ ವಿರುದ್ದ ದ್ವನಿ ಎತ್ತುವವರ ವಿರುದ್ದ ದೌರ್ಜನ್ಯ ಮಾಡಿರುವ ಬಗ್ಗೆ ಸತ್ಯಾಸತ್ಯತೆ ಪರೀಶೀಲನೆ ಮಾಡಲು ವಿಶೇಷ ತಂಡ ರಚನೆ ಮಾಡಿ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಮಂಗಸಂದ್ರ ತಿಮ್ಮಣ್ಣ, ಯಲುವಳ್ಳಿ ಪ್ರಭಾಕರ್, ಹೆಬ್ಬಣಿ ಆನಂದ್‌ರೆಡ್ಡಿ, ರಾಜೇಶ್, ವಿನು, ಕಿಶೋರ್, ಮುಂತಾದವರಿದ್ದರು.

Ramesh Babu

Journalist

Recent Posts

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

31 minutes ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

7 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

17 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

20 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

1 day ago