ಕೋಲಾರ; ಮಣ್ಣಿಗೆ ಪೂಜೆ ಮಾಡಿ ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಕಡೆ ಮುಖ ಮಾಡಿ ಎಂಬ ಸಂದೇಶದೊಂದಿಗೆ ಪ್ರಗತಿ ಪರ ರೈತರಿಗೆ ಸನ್ಮಾನ ಮಾಡುವ ಮುಖಾಂತರ ನಗರದ ಕಾಲೇಜು ವೃತ್ತದಲ್ಲಿ ರೈತಸಂಘದಿಂದ ವಿಶ್ವ ರೈತದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮಣ್ಣಿನ ಪೂಜೆ ನಂತರ ಗೋಪೂಜೆ, ರಾಗಿ ಭತ್ತ ತರಕಾರಿಗಳಿಗೆ ಪೂಜೆ ಮಾಡಿ ಹಂಚುವ ಮುಖಾಂತರ ರೈತರು ಬೆವರ ಹನಿ ಸುರಿಸಿ ಕಷ್ಟಪಡುವುದು ದೇಶಕ್ಕೆ ಅನ್ನ ಹಾಕುವುದಕ್ಕೆ ಎಂದು ರೈತರ ಕಷ್ಟದ ಬಗ್ಗೆ ಸವಿಸ್ತಾರವಾಗಿ ಹಿತನುಡಿಗಳನ್ನಾಡಿದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇತ್ತೀಚೆಗೆ ತೋಟಗಾರಿಕಾ ವಿಜ್ಞಾನಿಗಳು ನೀಡಿರುವ ವರದಿ ಇಡೀ ರೈತಕುಲವನ್ನೇ ಕಂಗಾಲಾಗಿಸಿದೆ. ಜಿಲ್ಲೆಯ ರೈತರು ಬೆಳೆಯುವ ತರಕಾರಿಗಳಲ್ಲಿ ವಿಷಕಾರಿ ಅಂಶ ಹೆಚ್ಚಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೀಡಿರುವ ವರದಿ ಸಂಬಂಧಪಟ್ಟ ಅಧಿಕಾರಿಗಳು ಬಹಿರಂಗಗೊಳಿಸಿ ಕಲುಶಿತಗೊಂಡಿರುವ ಕೃಷಿ ಕ್ಷೇತ್ರ ಸುಧಾರಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತ ಜಾಗೃತಿ ಮೂಡಿಸಬೇಕು ಜೊತೆಗೆ ನಾವೆಲ್ಲರೂ ಸಾವಯುವ ಕೃಷಿ , ಮಿಶ್ರ ಬೆಳೆ ಬೆಳೆಯುವ ಮೂಲಕ ಒತ್ತಾಯಿಸಿದರು.
ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮಾತನಾಡಿ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರು ಮೂಲಭೂತ ಸೌಕರ್ಯಗಳ ಜೊತೆಗೆ ಹದಗೆಟ್ಟಿರುವ ಶಿಥಿಲಗೊಂಡಿರು ಸರ್ಕಾರಿ ಶಾಲೆ, ಅಂಗನವಾಡಿಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಿ ಬಡ, ರೈತ, ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾತನಾಡಿ, ಹದಗೆಟ್ಟಿರುವ ಮಣ್ಣಿನ ಫಲವತ್ತತೆ ಹೆಚ್ಚಳ ಮಾಡಿಕೊಳ್ಳಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಆದ್ಯತೆ ನೀಡದೇ ಇದ್ದರೆ ಕೋಲಾರ ಜಿಲ್ಲೆಯ ರೈತರ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡು ಕೃಷಿಯನ್ನೇ ಮರೆಯಬೇಕಾಗುತ್ತೆ ಎಂದು ಸಲಹೆ ನೀಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಸರ್ಕಾರಗಳು ರೈತಪರ ನಿಲ್ಲಬೇಕು. ರಸ್ತೆ, ಕೈಗಾರಿಕೆ, ಹೆಸರಿನಲ್ಲಿ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈಬಿಟ್ಟು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್
ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು, ತೂಕ ಮತ್ತು ಅಳತೆ ಅಧಿಕಾರಿ ಪ್ರಭು, ಸಮಾಜ ಸೇವಕ ಕೆ.ಎನ್.ಎನ್ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಜಯ್ಕುಮಾರ್, ಗ್ರೇಡ್೨ ತಹಶೀಲ್ದಾರ್ ಹನ್ಸಾ ಮರಿಯಾ, ಚಂದ್ರಪ್ಪ, ಪುಟ್ಟರಾಜು, ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಸುಪ್ರೀಂ ಚಲ, ಕೆ.ಶ್ರೀನಿವಾಸಗೌಡ, ಯಲ್ಲಣ್ಣ, ತರ್ನಹಳ್ಳಿ ಆಂಜಿನಪ್ಪ, ಹರೀಶ್, ಪಾರುಕ್ಪಾಷ, ಸುನಿಲ್ , ಬಂಗಾರಿ ಮಂಜು, ಶ್ರೀನಿವಾಸ್, ಹೆಬ್ಬಣಿ ಆನಂದರೆಡ್ಡಿ, ಶೈಲಜ, ರತ್ನಮ್ಮ, ಮುನಿರತ್ನ ಶಶಿಕಲಾ ಭಾಗ್ಯಮ್ಮ, ಅನುಷ, ಸುಷ್ಮಾ, ಗಿರೀಶ್, ಚಂದ್ರಪ್ಪ, ನೂರಾರು ರೈತ ಮಹಿಳೆಯರು ಮತ್ತು ರೈತರು ಭಾಗವಹಿಸಿದ್ದರು.
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…