Categories: ಕೋಲಾರ

ರೈತ ಸಂಘದಿಂದ ರೈತ ದಿನಾಚರಣೆ: ರಸಾಯನಿಕ ಕೃಷಿ ದೂರವಿಟ್ಟು ಕೃಷಿ ಭೂಮಿ ರಕ್ಷಣೆಗೆ ನಿರ್ಧಾರ

ಕೋಲಾರ; ಮಣ್ಣಿಗೆ ಪೂಜೆ ಮಾಡಿ ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಕಡೆ ಮುಖ ಮಾಡಿ ಎಂಬ ಸಂದೇಶದೊಂದಿಗೆ ಪ್ರಗತಿ ಪರ ರೈತರಿಗೆ ಸನ್ಮಾನ ಮಾಡುವ ಮುಖಾಂತರ ನಗರದ ಕಾಲೇಜು ವೃತ್ತದಲ್ಲಿ ರೈತಸಂಘದಿಂದ ವಿಶ್ವ ರೈತದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಣ್ಣಿನ ಪೂಜೆ ನಂತರ ಗೋಪೂಜೆ, ರಾಗಿ ಭತ್ತ ತರಕಾರಿಗಳಿಗೆ ಪೂಜೆ ಮಾಡಿ ಹಂಚುವ ಮುಖಾಂತರ ರೈತರು ಬೆವರ ಹನಿ ಸುರಿಸಿ ಕಷ್ಟಪಡುವುದು ದೇಶಕ್ಕೆ ಅನ್ನ ಹಾಕುವುದಕ್ಕೆ ಎಂದು ರೈತರ ಕಷ್ಟದ ಬಗ್ಗೆ ಸವಿಸ್ತಾರವಾಗಿ ಹಿತನುಡಿಗಳನ್ನಾಡಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇತ್ತೀಚೆಗೆ ತೋಟಗಾರಿಕಾ ವಿಜ್ಞಾನಿಗಳು ನೀಡಿರುವ ವರದಿ ಇಡೀ ರೈತಕುಲವನ್ನೇ ಕಂಗಾಲಾಗಿಸಿದೆ. ಜಿಲ್ಲೆಯ ರೈತರು ಬೆಳೆಯುವ ತರಕಾರಿಗಳಲ್ಲಿ ವಿಷಕಾರಿ ಅಂಶ ಹೆಚ್ಚಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೀಡಿರುವ ವರದಿ ಸಂಬಂಧಪಟ್ಟ ಅಧಿಕಾರಿಗಳು ಬಹಿರಂಗಗೊಳಿಸಿ ಕಲುಶಿತಗೊಂಡಿರುವ ಕೃಷಿ ಕ್ಷೇತ್ರ ಸುಧಾರಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತ ಜಾಗೃತಿ ಮೂಡಿಸಬೇಕು ಜೊತೆಗೆ ನಾವೆಲ್ಲರೂ ಸಾವಯುವ ಕೃಷಿ , ಮಿಶ್ರ ಬೆಳೆ ಬೆಳೆಯುವ ಮೂಲಕ ಒತ್ತಾಯಿಸಿದರು.

ರೈತನಾಯಕರಾದ ಪ್ರೊ.ನಂಜುಂಡಸ್ವಾಮಿ, ಪುಟ್ಟಣ್ಣಯ್ಯ ನವರ 80ರ ದಶಕದ ಹೋರಾಟಗಳಂತೆ ನಿರಂತರವಾಗಿ ಜಿಲ್ಲೆಯ ರೈತರ ಪರವಾಗಿ ಹೋರಾಟಗಾರರು ನಿಲ್ಲಬೇಕು. ಜೊತೆಗೆ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಸರ್ಕಾರದ ವಿರುದ್ಧ ಹೋರಾಟ ಮಾಡಿ, ಸರ್ಕಾರಿ ಸಂಸ್ಥೆಗಳನ್ನು ಉಳಿಸಿ ಖಾಸಗಿ ಫೈನಾನ್ಸ್ ಹಾವಳಿಯಿಂದ ಗ್ರಾಮೀಣ ಜನರನ್ನು ಉಳಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮಾತನಾಡಿ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರು ಮೂಲಭೂತ ಸೌಕರ್ಯಗಳ ಜೊತೆಗೆ ಹದಗೆಟ್ಟಿರುವ ಶಿಥಿಲಗೊಂಡಿರು ಸರ್ಕಾರಿ ಶಾಲೆ, ಅಂಗನವಾಡಿಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಿ ಬಡ, ರೈತ, ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾತನಾಡಿ, ಹದಗೆಟ್ಟಿರುವ ಮಣ್ಣಿನ ಫಲವತ್ತತೆ ಹೆಚ್ಚಳ ಮಾಡಿಕೊಳ್ಳಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಆದ್ಯತೆ ನೀಡದೇ ಇದ್ದರೆ ಕೋಲಾರ ಜಿಲ್ಲೆಯ ರೈತರ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡು ಕೃಷಿಯನ್ನೇ ಮರೆಯಬೇಕಾಗುತ್ತೆ ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಸರ್ಕಾರಗಳು ರೈತಪರ ನಿಲ್ಲಬೇಕು. ರಸ್ತೆ, ಕೈಗಾರಿಕೆ, ಹೆಸರಿನಲ್ಲಿ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈಬಿಟ್ಟು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್
ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು, ತೂಕ ಮತ್ತು ಅಳತೆ ಅಧಿಕಾರಿ ಪ್ರಭು, ಸಮಾಜ ಸೇವಕ ಕೆ.ಎನ್.ಎನ್ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಜಯ್‌ಕುಮಾರ್, ಗ್ರೇಡ್೨ ತಹಶೀಲ್ದಾರ್ ಹನ್ಸಾ ಮರಿಯಾ, ಚಂದ್ರಪ್ಪ, ಪುಟ್ಟರಾಜು, ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಸುಪ್ರೀಂ ಚಲ, ಕೆ.ಶ್ರೀನಿವಾಸಗೌಡ, ಯಲ್ಲಣ್ಣ, ತರ‍್ನಹಳ್ಳಿ ಆಂಜಿನಪ್ಪ, ಹರೀಶ್, ಪಾರುಕ್‌ಪಾಷ, ಸುನಿಲ್ , ಬಂಗಾರಿ ಮಂಜು, ಶ್ರೀನಿವಾಸ್, ಹೆಬ್ಬಣಿ ಆನಂದರೆಡ್ಡಿ, ಶೈಲಜ, ರತ್ನಮ್ಮ, ಮುನಿರತ್ನ ಶಶಿಕಲಾ ಭಾಗ್ಯಮ್ಮ, ಅನುಷ, ಸುಷ್ಮಾ, ಗಿರೀಶ್, ಚಂದ್ರಪ್ಪ, ನೂರಾರು ರೈತ ಮಹಿಳೆಯರು ಮತ್ತು ರೈತರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

17 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

19 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

19 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

19 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

21 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

1 day ago