Categories: ಕೋಲಾರ

ರೈತ ಸಂಘದಿಂದ ರೈತ ದಿನಾಚರಣೆ: ರಸಾಯನಿಕ ಕೃಷಿ ದೂರವಿಟ್ಟು ಕೃಷಿ ಭೂಮಿ ರಕ್ಷಣೆಗೆ ನಿರ್ಧಾರ

ಕೋಲಾರ; ಮಣ್ಣಿಗೆ ಪೂಜೆ ಮಾಡಿ ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಕಡೆ ಮುಖ ಮಾಡಿ ಎಂಬ ಸಂದೇಶದೊಂದಿಗೆ ಪ್ರಗತಿ ಪರ ರೈತರಿಗೆ ಸನ್ಮಾನ ಮಾಡುವ ಮುಖಾಂತರ ನಗರದ ಕಾಲೇಜು ವೃತ್ತದಲ್ಲಿ ರೈತಸಂಘದಿಂದ ವಿಶ್ವ ರೈತದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಣ್ಣಿನ ಪೂಜೆ ನಂತರ ಗೋಪೂಜೆ, ರಾಗಿ ಭತ್ತ ತರಕಾರಿಗಳಿಗೆ ಪೂಜೆ ಮಾಡಿ ಹಂಚುವ ಮುಖಾಂತರ ರೈತರು ಬೆವರ ಹನಿ ಸುರಿಸಿ ಕಷ್ಟಪಡುವುದು ದೇಶಕ್ಕೆ ಅನ್ನ ಹಾಕುವುದಕ್ಕೆ ಎಂದು ರೈತರ ಕಷ್ಟದ ಬಗ್ಗೆ ಸವಿಸ್ತಾರವಾಗಿ ಹಿತನುಡಿಗಳನ್ನಾಡಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇತ್ತೀಚೆಗೆ ತೋಟಗಾರಿಕಾ ವಿಜ್ಞಾನಿಗಳು ನೀಡಿರುವ ವರದಿ ಇಡೀ ರೈತಕುಲವನ್ನೇ ಕಂಗಾಲಾಗಿಸಿದೆ. ಜಿಲ್ಲೆಯ ರೈತರು ಬೆಳೆಯುವ ತರಕಾರಿಗಳಲ್ಲಿ ವಿಷಕಾರಿ ಅಂಶ ಹೆಚ್ಚಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೀಡಿರುವ ವರದಿ ಸಂಬಂಧಪಟ್ಟ ಅಧಿಕಾರಿಗಳು ಬಹಿರಂಗಗೊಳಿಸಿ ಕಲುಶಿತಗೊಂಡಿರುವ ಕೃಷಿ ಕ್ಷೇತ್ರ ಸುಧಾರಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತ ಜಾಗೃತಿ ಮೂಡಿಸಬೇಕು ಜೊತೆಗೆ ನಾವೆಲ್ಲರೂ ಸಾವಯುವ ಕೃಷಿ , ಮಿಶ್ರ ಬೆಳೆ ಬೆಳೆಯುವ ಮೂಲಕ ಒತ್ತಾಯಿಸಿದರು.

ರೈತನಾಯಕರಾದ ಪ್ರೊ.ನಂಜುಂಡಸ್ವಾಮಿ, ಪುಟ್ಟಣ್ಣಯ್ಯ ನವರ 80ರ ದಶಕದ ಹೋರಾಟಗಳಂತೆ ನಿರಂತರವಾಗಿ ಜಿಲ್ಲೆಯ ರೈತರ ಪರವಾಗಿ ಹೋರಾಟಗಾರರು ನಿಲ್ಲಬೇಕು. ಜೊತೆಗೆ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಸರ್ಕಾರದ ವಿರುದ್ಧ ಹೋರಾಟ ಮಾಡಿ, ಸರ್ಕಾರಿ ಸಂಸ್ಥೆಗಳನ್ನು ಉಳಿಸಿ ಖಾಸಗಿ ಫೈನಾನ್ಸ್ ಹಾವಳಿಯಿಂದ ಗ್ರಾಮೀಣ ಜನರನ್ನು ಉಳಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮಾತನಾಡಿ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರು ಮೂಲಭೂತ ಸೌಕರ್ಯಗಳ ಜೊತೆಗೆ ಹದಗೆಟ್ಟಿರುವ ಶಿಥಿಲಗೊಂಡಿರು ಸರ್ಕಾರಿ ಶಾಲೆ, ಅಂಗನವಾಡಿಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಿ ಬಡ, ರೈತ, ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾತನಾಡಿ, ಹದಗೆಟ್ಟಿರುವ ಮಣ್ಣಿನ ಫಲವತ್ತತೆ ಹೆಚ್ಚಳ ಮಾಡಿಕೊಳ್ಳಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಆದ್ಯತೆ ನೀಡದೇ ಇದ್ದರೆ ಕೋಲಾರ ಜಿಲ್ಲೆಯ ರೈತರ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡು ಕೃಷಿಯನ್ನೇ ಮರೆಯಬೇಕಾಗುತ್ತೆ ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಸರ್ಕಾರಗಳು ರೈತಪರ ನಿಲ್ಲಬೇಕು. ರಸ್ತೆ, ಕೈಗಾರಿಕೆ, ಹೆಸರಿನಲ್ಲಿ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈಬಿಟ್ಟು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್
ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು, ತೂಕ ಮತ್ತು ಅಳತೆ ಅಧಿಕಾರಿ ಪ್ರಭು, ಸಮಾಜ ಸೇವಕ ಕೆ.ಎನ್.ಎನ್ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಜಯ್‌ಕುಮಾರ್, ಗ್ರೇಡ್೨ ತಹಶೀಲ್ದಾರ್ ಹನ್ಸಾ ಮರಿಯಾ, ಚಂದ್ರಪ್ಪ, ಪುಟ್ಟರಾಜು, ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಸುಪ್ರೀಂ ಚಲ, ಕೆ.ಶ್ರೀನಿವಾಸಗೌಡ, ಯಲ್ಲಣ್ಣ, ತರ‍್ನಹಳ್ಳಿ ಆಂಜಿನಪ್ಪ, ಹರೀಶ್, ಪಾರುಕ್‌ಪಾಷ, ಸುನಿಲ್ , ಬಂಗಾರಿ ಮಂಜು, ಶ್ರೀನಿವಾಸ್, ಹೆಬ್ಬಣಿ ಆನಂದರೆಡ್ಡಿ, ಶೈಲಜ, ರತ್ನಮ್ಮ, ಮುನಿರತ್ನ ಶಶಿಕಲಾ ಭಾಗ್ಯಮ್ಮ, ಅನುಷ, ಸುಷ್ಮಾ, ಗಿರೀಶ್, ಚಂದ್ರಪ್ಪ, ನೂರಾರು ರೈತ ಮಹಿಳೆಯರು ಮತ್ತು ರೈತರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

12 hours ago

ಬೆಂ. ಗ್ರಾ ಜಿಲ್ಲೆಯಲ್ಲಿ ಶೇ.87.44ರಷ್ಟು ಎನ್ಯುಮರೇಷನ್ ಫಾರ್ಮ್ ವಿತರಣೆ- ಡಿಸಿ ಡಾ.ಕೆ ಎನ್ ಅನುರಾಧ

ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…

14 hours ago

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

15 hours ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

19 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

24 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

1 day ago