Categories: ಕೋಲಾರ

ರೈತ ಸಂಘದಿಂದ ರೈತ ದಿನಾಚರಣೆ: ರಸಾಯನಿಕ ಕೃಷಿ ದೂರವಿಟ್ಟು ಕೃಷಿ ಭೂಮಿ ರಕ್ಷಣೆಗೆ ನಿರ್ಧಾರ

ಕೋಲಾರ; ಮಣ್ಣಿಗೆ ಪೂಜೆ ಮಾಡಿ ರಾಸಾಯನಿಕ ಕೃಷಿ ಬಿಡಿ ಸಾವಯುವ ಕೃಷಿ ಕಡೆ ಮುಖ ಮಾಡಿ ಎಂಬ ಸಂದೇಶದೊಂದಿಗೆ ಪ್ರಗತಿ ಪರ ರೈತರಿಗೆ ಸನ್ಮಾನ ಮಾಡುವ ಮುಖಾಂತರ ನಗರದ ಕಾಲೇಜು ವೃತ್ತದಲ್ಲಿ ರೈತಸಂಘದಿಂದ ವಿಶ್ವ ರೈತದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರನ್ನುದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಮಂಗಳ ಮನುಷ್ಯ, ಜೀವ ಸಂಕುಲ ಸತ್ತರೆ ಮಣ್ಣಿಗೆ ಸೇರುತ್ತೇವೆ, ಮಣ್ಣೇ ಸತ್ತರೆ ಎಲ್ಲಿಗೆ ಎಂದು ಪ್ರಶ್ನೆ ಮಾಡಿ, ಮಣ್ಣಿನ ಉಳಿವಿಗಾಗಿ ರೈತರು ರಾಸಾಯನಿಕ ಗೊಬ್ಬರ, ಕೀಟನಾಶಕಗಳನ್ನು ಉಪಯೋಗಿಸದಂತೆ ಪ್ರತಿಜ್ಞೆ ಮಾಡುವ ಜೊತೆಗೆ ಸಾವಯವ ಕೃಷಿಗೆ ಪ್ರಾಮುಖ್ಯತೆ ನೀಡಿ ಗುಣಮಟ್ಟದ ತರಕಾರಿಗಳನ್ನು ಬೆಳೆದು ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಣ್ಣಿನ ಪೂಜೆ ನಂತರ ಗೋಪೂಜೆ, ರಾಗಿ ಭತ್ತ ತರಕಾರಿಗಳಿಗೆ ಪೂಜೆ ಮಾಡಿ ಹಂಚುವ ಮುಖಾಂತರ ರೈತರು ಬೆವರ ಹನಿ ಸುರಿಸಿ ಕಷ್ಟಪಡುವುದು ದೇಶಕ್ಕೆ ಅನ್ನ ಹಾಕುವುದಕ್ಕೆ ಎಂದು ರೈತರ ಕಷ್ಟದ ಬಗ್ಗೆ ಸವಿಸ್ತಾರವಾಗಿ ಹಿತನುಡಿಗಳನ್ನಾಡಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇತ್ತೀಚೆಗೆ ತೋಟಗಾರಿಕಾ ವಿಜ್ಞಾನಿಗಳು ನೀಡಿರುವ ವರದಿ ಇಡೀ ರೈತಕುಲವನ್ನೇ ಕಂಗಾಲಾಗಿಸಿದೆ. ಜಿಲ್ಲೆಯ ರೈತರು ಬೆಳೆಯುವ ತರಕಾರಿಗಳಲ್ಲಿ ವಿಷಕಾರಿ ಅಂಶ ಹೆಚ್ಚಾಗಿದೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ನೀಡಿರುವ ವರದಿ ಸಂಬಂಧಪಟ್ಟ ಅಧಿಕಾರಿಗಳು ಬಹಿರಂಗಗೊಳಿಸಿ ಕಲುಶಿತಗೊಂಡಿರುವ ಕೃಷಿ ಕ್ಷೇತ್ರ ಸುಧಾರಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ರೈತ ಜಾಗೃತಿ ಮೂಡಿಸಬೇಕು ಜೊತೆಗೆ ನಾವೆಲ್ಲರೂ ಸಾವಯುವ ಕೃಷಿ , ಮಿಶ್ರ ಬೆಳೆ ಬೆಳೆಯುವ ಮೂಲಕ ಒತ್ತಾಯಿಸಿದರು.

ರೈತನಾಯಕರಾದ ಪ್ರೊ.ನಂಜುಂಡಸ್ವಾಮಿ, ಪುಟ್ಟಣ್ಣಯ್ಯ ನವರ 80ರ ದಶಕದ ಹೋರಾಟಗಳಂತೆ ನಿರಂತರವಾಗಿ ಜಿಲ್ಲೆಯ ರೈತರ ಪರವಾಗಿ ಹೋರಾಟಗಾರರು ನಿಲ್ಲಬೇಕು. ಜೊತೆಗೆ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಸರ್ಕಾರದ ವಿರುದ್ಧ ಹೋರಾಟ ಮಾಡಿ, ಸರ್ಕಾರಿ ಸಂಸ್ಥೆಗಳನ್ನು ಉಳಿಸಿ ಖಾಸಗಿ ಫೈನಾನ್ಸ್ ಹಾವಳಿಯಿಂದ ಗ್ರಾಮೀಣ ಜನರನ್ನು ಉಳಿಸಬೇಕೆಂದು ಒತ್ತಾಯಿಸಿದರು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಮಾತನಾಡಿ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರು ಮೂಲಭೂತ ಸೌಕರ್ಯಗಳ ಜೊತೆಗೆ ಹದಗೆಟ್ಟಿರುವ ಶಿಥಿಲಗೊಂಡಿರು ಸರ್ಕಾರಿ ಶಾಲೆ, ಅಂಗನವಾಡಿಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಿ ಬಡ, ರೈತ, ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣವನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿದರು.

ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ಮಾತನಾಡಿ, ಹದಗೆಟ್ಟಿರುವ ಮಣ್ಣಿನ ಫಲವತ್ತತೆ ಹೆಚ್ಚಳ ಮಾಡಿಕೊಳ್ಳಬೇಕು. ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಆದ್ಯತೆ ನೀಡದೇ ಇದ್ದರೆ ಕೋಲಾರ ಜಿಲ್ಲೆಯ ರೈತರ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡು ಕೃಷಿಯನ್ನೇ ಮರೆಯಬೇಕಾಗುತ್ತೆ ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ವಿ.ಮುನಿರಾಜು ಮಾತನಾಡಿ, ಸರ್ಕಾರಗಳು ರೈತಪರ ನಿಲ್ಲಬೇಕು. ರಸ್ತೆ, ಕೈಗಾರಿಕೆ, ಹೆಸರಿನಲ್ಲಿ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈಬಿಟ್ಟು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್
ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು, ತೂಕ ಮತ್ತು ಅಳತೆ ಅಧಿಕಾರಿ ಪ್ರಭು, ಸಮಾಜ ಸೇವಕ ಕೆ.ಎನ್.ಎನ್ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಅಜಯ್‌ಕುಮಾರ್, ಗ್ರೇಡ್೨ ತಹಶೀಲ್ದಾರ್ ಹನ್ಸಾ ಮರಿಯಾ, ಚಂದ್ರಪ್ಪ, ಪುಟ್ಟರಾಜು, ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ಶಿವಾರೆಡ್ಡಿ, ಸುಪ್ರೀಂ ಚಲ, ಕೆ.ಶ್ರೀನಿವಾಸಗೌಡ, ಯಲ್ಲಣ್ಣ, ತರ‍್ನಹಳ್ಳಿ ಆಂಜಿನಪ್ಪ, ಹರೀಶ್, ಪಾರುಕ್‌ಪಾಷ, ಸುನಿಲ್ , ಬಂಗಾರಿ ಮಂಜು, ಶ್ರೀನಿವಾಸ್, ಹೆಬ್ಬಣಿ ಆನಂದರೆಡ್ಡಿ, ಶೈಲಜ, ರತ್ನಮ್ಮ, ಮುನಿರತ್ನ ಶಶಿಕಲಾ ಭಾಗ್ಯಮ್ಮ, ಅನುಷ, ಸುಷ್ಮಾ, ಗಿರೀಶ್, ಚಂದ್ರಪ್ಪ, ನೂರಾರು ರೈತ ಮಹಿಳೆಯರು ಮತ್ತು ರೈತರು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

6 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago