ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ವಿಮೆಗೆ ನೊಂದಾಯಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಎಸ್.ಬಿ.ಐ ಜನರಲ್ ಇನ್ಶೂರೆನ್ ಕಂಪನಿ ಲಿಮಿಟೆಡ್ ಇವರ ಸಹಯೋಗದೊಂದಿಗೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಆಸಕ್ತ ರೈತರು ಭೂಮಿ ದಾಖಲೆಗಳಾದ ಪಹಣಿ/ಕಂದಾಯ ರಶೀತಿ/ಖಾತೆ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆದಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬೆಳೆ ವಿಮೆ ಮಾಡಿಸಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ ಎಂಬುದನ್ನು ನೋಡುವುದಾದರೆ….
ರಾಗಿ (ಮಳೆಯಾಶ್ರಿತ) ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 399.2 ರೂ.ಪಾವತಿಸಿದರೆ ವಿಮಾ ಮೊತ್ತ 19,960/- ರೂ. ಪಡೆಯಬಹುದು.
ರಾಗಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 466.4/- ರೂ ಪಾವತಿಸಿದರೆ 23,320/- ವಿಮಾ ಮೊತ್ತ ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 868.8/- ರೂ ಪಾವತಿಸಿದರೆ 43,440/- ರೂ ವಿಮಾ ಮೊತ್ತ ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 609.6/- ರೂ ಪಾವತಿಸಿದರೆ 30,480/- ರೂ ವಿಮಾ ಮೊತ್ತ ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 540/- ಪಾವತಿಸಿದರೆ ವಿಮಾ ಮೊತ್ತ 27,000/- ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 188/- ರೂ ಪಾವತಿಸಿದರೆ ವಿಮಾ ಮೊತ್ತ 9,400/- ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 523/- ಪಾವತಿಸಿದರೆ 26,160/- ವಿಮಾ ಮೊತ್ತ ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 460/- ಪಾವತಿಸಿದರೆ 23,040/- ವಿಮಾ ಮೊತ್ತ ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 482/- ಪಾವತಿಸಿದರೆ 24,120/- ವಿಮಾ ಮೊತ್ತ ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 3396/- ಪಾವತಿಸಿದರೆ ವಿಮಾ ಮೊತ್ತ 67,920/- ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರು ಬೆಳೆ ವಿಮಾ ಸಂಸ್ಥೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರ ಇಲಾಖೆ ಹಾಗೂ ಬೆಳೆ ಸಾಲ ನೀಡುವ ಬ್ಯಾಂಕ್ ಅಥವಾ ಸಹಕಾರಿ ಬ್ಯಾಂಕ್ಗಳನ್ನು ಸಂಪರ್ಕಿಸಲು ಬೆಂಗಳೂರು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಬಿ.ಜಿ ಕಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…